ಮನೆ ಮೇಲೆ ಬಿದ್ದ ಬೃಹತ್ ಮರ ತೆರವುಗೊಳಿಸಿ ತಕ್ಷಣ ಸ್ಪಂದಿಸಿದ ‘ಶೌರ್ಯ’ ಸ್ವಯಂಸೇವಕರು

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಮುಳಿಕ್ಕಾರಿನ ಕೃಷ್ಣಪ್ಪ ಅವರ ಮನೆಯ ಮೇಲೆ ಬೃಹತ್ ಮರವೊಂದು ಬಿದ್ದಿದ್ದು ಶೌರ್ಯ ವಿಪತ್ತು ನಿರ್ವಹಣಾ ಘಟಕ ಧರ್ಮಸ್ಥಳದ ಧರ್ಮಸ್ಥಳ ವಲಯದ ಸ್ವಯಂಸೇವಕರು ತಕ್ಷಣ ಸ್ಪಂದಿಸಿ ಮಾನವೀಯತೆ ಮೆರೆದರು.

ಸಂಜೆ ಆರು ಗಂಟೆ ಸುಮಾರಿಗೆ ಧರಾಶಾಯಿಯಾದ ಬೃಹತ್ ನಂದಿ ಜಾತಿಯ ಮರ ಕೃಷ್ಣಪ್ಪರವರ ಇದ್ದೊಂದು ಸೂರಿನ ಮೇಲೆಯೇ ಬಿದ್ದು ಅಪಾರ ಹಾನಿ ಮಾಡಿತ್ತು. ಒಂದೆಡೆ ಧಾರಾಕಾರ ಮಳೆ, ಅಳುತ್ತಿರುವ ಕುಟುಂಬ, ಆಗೊಮ್ಮೆ ಈಗೊಮ್ಮೆ ಲಟ್ಟೆನ್ನುವ ಬಿದಿರಿನ ಛಾವಣಿ, ಮಣ್ಣಿನ ಗೋಡೆ ಎಲ್ಲಿ ಕುಸಿಯುವುದೋ ಎಂಬ ಭಯ, ಸುತ್ತಲೂ ಆವರಿಸಿದ ಕತ್ತಲಿನಲ್ಲಿ ವಾರ್ಡ್ ಪಂಚಾಯತ್ ಸದಸ್ಯರಾದ ಹರ್ಷಿತ್ ಜೈನ್ ಇವರಿಗೆ ಫೋನಾಯಿಸಿದರು.

ತಕ್ಷಣಕ್ಕೆ ಏನು ಮಾಡಬೇಕೆಂದು ತೋಚದ ಹರ್ಷಿತ್ ಜೈನ್ ಕೂಡಲೆ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಸಂಯೋಜಕ ಸ್ವಸ್ತಿಕ್ ಕನ್ಯಾಡಿ ಅವರಿಗೆ ಕರೆ ಮಾಡಿ ತಿಳಿಸಿದರು.

ತಕ್ಷಣ ಜಾಗೃತಿಗೊಂಡ ಸ್ವಸ್ತಿಕ್ ಧರ್ಮಸ್ಥಳ ವಲಯ ಹಾಗೂ ಬೆಳ್ತಂಗಡಿ ಘಟಕದ ಸದಸ್ಯರ ಬಳಗದಲ್ಲಿ ಸಂದೇಶ ಹರಿಯಬಿಟ್ಟು ಸ್ವಯಂಸೇವಕ ವಿದ್ವತ್ ಅವರ ಜೊತೆ ಸ್ಥಳಕ್ಕೆ ಧಾವಿಸಿದರು.

ಮುಳಿಕ್ಕಾರು ಭಾಗದ ಸ್ವಯಂಸೇವಕ ವಿಘ್ನೇಶ್ ಅವರೂ ಕರೆ ಮಾಡಿ ಸ್ಥಳಕ್ಕೆ ಹೊರಟು ಮನೆಯವರಿಗೆ ಧೈರ್ಯ ತುಂಬಲಾಯಿತು.

ಮನೆಯವರಿಂದಲೇ ಕತ್ತಿ ಪಡೆದು ಸಾಧ್ಯವಾದಷ್ಟು ತೆರವುಗೊಳಿಸುವ ಪ್ರಯತ್ನ ಮಾಡಲಾಯಿತು. ಬೃಹತ್ ಮರವಾದ್ದರಿಂದ ಮರುದಿವಸಕ್ಕೆ ಮುಂದೂಡಲಾಯಿತು.

ಮರುದಿವಸ ಅಂದರೆ ಜೂನ್ 13ನೇ ತಾರೀಖು ಮುಂಜಾನೆ 9ಗಂಟೆಯಿಂದ ಕಾರ್ಯಾಚರಣೆ ಶುರುಮಾಡಿ 11ಗಂಟೆಯ ವೇಳೆಗೆ ಮನೆಯ ಮೇಲಿದ್ದ ಮರದ ತುಂಡುಗಳನ್ನು ತೆರವುಗೊಳಿಸುವಲ್ಲಿ ತಂಡ ಯಶಸ್ವಿಯಾಯಿತು. ಈ ವೇಳೆ ಸ್ಥಳೀಯರು ಕೈ ಜೋಡಿಸಿದರು.

ಧರ್ಮಸ್ಥಳ ಪಂಚಾಯತ್ ಗೆ ಪರಿಹಾರ ದೊರಕಿಸಿಕೊಡುವಂತೆ ಮನವಿ ಮಾಡಿದ್ದು ಈಗಾಗಲೇ ಹೊಸ ಮನೆ ಕಟ್ಟುತ್ತಿದ್ದು ಅದನ್ನು ಪೂರ್ತಿಗೊಳಿಸಿಕೊಡುವ ಭರವಸೆ ನೀಡಿದ್ದಾರೆ. ಪಂಚಾಯತ್ನಿಂದ ಸೌಲಭ್ಯ ದೊರೆಯದೇ ಹೋದರೆ ವಿಪತ್ತು ನಿರ್ವಹಣಾ ತಂಡದಿಂದ ಹಾನಿಗೊಳಗಾದ ಛಾವಣಿಯನ್ನು ನಿರ್ಮಿಸಿಕೊಡುವ ಭರವಸೆ ನೀಡಲಾಗಿದೆ.

ಸಂತ್ರಸ್ತರಿಗೆ ಮನೆಯಲ್ಲೇ ಜಾಗ ಕೊಟ್ಟ ಸ್ವಯಂಸೇವಕ
ಸದ್ಯಕ್ಕೆ ಮನೆಯವರಿಗೆ ಉಳಿದುಕೊಳ್ಳಲು ವ್ಯವಸ್ಥೆ ಇಲ್ಲವೆಂದು ತೋಡಿಕೊಂಡಾಗ ಧರ್ಮಸ್ಥಳ ವಲಯದ ಸ್ವಯಂಸೇವಕ ವಿಘ್ನೇಶ್ ತಮ್ಮ ಮನೆಯಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿರುತ್ತಾರೆ.

ಕರೆ ಮಾಡಿ ಭರವಸೆ ಕೊಟ್ಟ ಸಂಯೋಜಕರು
ಧರ್ಮಸ್ಥಳ ವಲಯದ ಬಹುತೇಕ ಸದಸ್ಯರು ಕೋವಿಡ್ ಕೇರ್ ಸೆಂಟರ್‌ನಲ್ಲಿ ಕರ್ತವ್ಯದಲ್ಲಿರುವುದರಿಂದ ಸ್ವಯಂಸೇವಕರ ಅಗತ್ಯತೆ ಬಗ್ಗೆ ಬೆಳ್ತಂಗಡಿ ಘಟಕದಲ್ಲಿ ವಿನಂತಿಸಿಕೊಂಡಾಗ ನಡ-ಕನ್ಯಾಡಿ ಘಟಕದ ಸಂಯೋಜಕರಾದ ವಸಂತಿಯವರು ಕರೆ ಮಾಡಿ ವಿಚಾರಿಸಿದ್ದರು. ಕೊಕ್ಕಡ ವಲಯದ ಸಂಯೋಜಕರಾದ ಗಿರಿಜಾರವರು ಎರಡೂ ದಿನವೂ ಕರೆ ಮಾಡಿ ಸ್ವಯಂಸೇವಕರನ್ನು ಕಳುಹಿಸುವ ಬಗ್ಗೆ ಉತ್ಸುಕತೆ ತೋರಿದ್ದರು.

ಕಾರ್ಯಾಚರಣೆಯಲ್ಲಿ ಧರ್ಮಸ್ಥಳ ವಲಯದ ಸಂಯೋಜಕ ಸ್ವಸ್ತಿಕ್ ಕನ್ಯಾಡಿ, ಸ್ವಯಂಸೇವಕರಾದ ವಿದ್ವತ್ ಧರ್ಮಸ್ಥಳ, ವಿಘ್ನೇಶ್ ಧರ್ಮಸ್ಥಳ, ಗ್ರಾ.ಪಂ ಸದಸ್ಯ ಹರ್ಷಿತ್ ಜೈನ್ ಹಾಗೂ ಸ್ಥಳೀಯರು ಸಹಕರಿಸಿದರು.

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 24 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 272 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 187 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 293 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 154 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 87 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ