ಮನೆ ಮೇಲೆ ಬಿದ್ದ ಬೃಹತ್ ಮರ ತೆರವುಗೊಳಿಸಿ ತಕ್ಷಣ ಸ್ಪಂದಿಸಿದ ‘ಶೌರ್ಯ’ ಸ್ವಯಂಸೇವಕರು

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಮುಳಿಕ್ಕಾರಿನ ಕೃಷ್ಣಪ್ಪ ಅವರ ಮನೆಯ ಮೇಲೆ ಬೃಹತ್ ಮರವೊಂದು ಬಿದ್ದಿದ್ದು ಶೌರ್ಯ ವಿಪತ್ತು ನಿರ್ವಹಣಾ ಘಟಕ ಧರ್ಮಸ್ಥಳದ ಧರ್ಮಸ್ಥಳ ವಲಯದ ಸ್ವಯಂಸೇವಕರು ತಕ್ಷಣ ಸ್ಪಂದಿಸಿ ಮಾನವೀಯತೆ ಮೆರೆದರು.

ಸಂಜೆ ಆರು ಗಂಟೆ ಸುಮಾರಿಗೆ ಧರಾಶಾಯಿಯಾದ ಬೃಹತ್ ನಂದಿ ಜಾತಿಯ ಮರ ಕೃಷ್ಣಪ್ಪರವರ ಇದ್ದೊಂದು ಸೂರಿನ ಮೇಲೆಯೇ ಬಿದ್ದು ಅಪಾರ ಹಾನಿ ಮಾಡಿತ್ತು. ಒಂದೆಡೆ ಧಾರಾಕಾರ ಮಳೆ, ಅಳುತ್ತಿರುವ ಕುಟುಂಬ, ಆಗೊಮ್ಮೆ ಈಗೊಮ್ಮೆ ಲಟ್ಟೆನ್ನುವ ಬಿದಿರಿನ ಛಾವಣಿ, ಮಣ್ಣಿನ ಗೋಡೆ ಎಲ್ಲಿ ಕುಸಿಯುವುದೋ ಎಂಬ ಭಯ, ಸುತ್ತಲೂ ಆವರಿಸಿದ ಕತ್ತಲಿನಲ್ಲಿ ವಾರ್ಡ್ ಪಂಚಾಯತ್ ಸದಸ್ಯರಾದ ಹರ್ಷಿತ್ ಜೈನ್ ಇವರಿಗೆ ಫೋನಾಯಿಸಿದರು.

ತಕ್ಷಣಕ್ಕೆ ಏನು ಮಾಡಬೇಕೆಂದು ತೋಚದ ಹರ್ಷಿತ್ ಜೈನ್ ಕೂಡಲೆ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಸಂಯೋಜಕ ಸ್ವಸ್ತಿಕ್ ಕನ್ಯಾಡಿ ಅವರಿಗೆ ಕರೆ ಮಾಡಿ ತಿಳಿಸಿದರು.

ತಕ್ಷಣ ಜಾಗೃತಿಗೊಂಡ ಸ್ವಸ್ತಿಕ್ ಧರ್ಮಸ್ಥಳ ವಲಯ ಹಾಗೂ ಬೆಳ್ತಂಗಡಿ ಘಟಕದ ಸದಸ್ಯರ ಬಳಗದಲ್ಲಿ ಸಂದೇಶ ಹರಿಯಬಿಟ್ಟು ಸ್ವಯಂಸೇವಕ ವಿದ್ವತ್ ಅವರ ಜೊತೆ ಸ್ಥಳಕ್ಕೆ ಧಾವಿಸಿದರು.

ಮುಳಿಕ್ಕಾರು ಭಾಗದ ಸ್ವಯಂಸೇವಕ ವಿಘ್ನೇಶ್ ಅವರೂ ಕರೆ ಮಾಡಿ ಸ್ಥಳಕ್ಕೆ ಹೊರಟು ಮನೆಯವರಿಗೆ ಧೈರ್ಯ ತುಂಬಲಾಯಿತು.

ಮನೆಯವರಿಂದಲೇ ಕತ್ತಿ ಪಡೆದು ಸಾಧ್ಯವಾದಷ್ಟು ತೆರವುಗೊಳಿಸುವ ಪ್ರಯತ್ನ ಮಾಡಲಾಯಿತು. ಬೃಹತ್ ಮರವಾದ್ದರಿಂದ ಮರುದಿವಸಕ್ಕೆ ಮುಂದೂಡಲಾಯಿತು.

ಮರುದಿವಸ ಅಂದರೆ ಜೂನ್ 13ನೇ ತಾರೀಖು ಮುಂಜಾನೆ 9ಗಂಟೆಯಿಂದ ಕಾರ್ಯಾಚರಣೆ ಶುರುಮಾಡಿ 11ಗಂಟೆಯ ವೇಳೆಗೆ ಮನೆಯ ಮೇಲಿದ್ದ ಮರದ ತುಂಡುಗಳನ್ನು ತೆರವುಗೊಳಿಸುವಲ್ಲಿ ತಂಡ ಯಶಸ್ವಿಯಾಯಿತು. ಈ ವೇಳೆ ಸ್ಥಳೀಯರು ಕೈ ಜೋಡಿಸಿದರು.

ಧರ್ಮಸ್ಥಳ ಪಂಚಾಯತ್ ಗೆ ಪರಿಹಾರ ದೊರಕಿಸಿಕೊಡುವಂತೆ ಮನವಿ ಮಾಡಿದ್ದು ಈಗಾಗಲೇ ಹೊಸ ಮನೆ ಕಟ್ಟುತ್ತಿದ್ದು ಅದನ್ನು ಪೂರ್ತಿಗೊಳಿಸಿಕೊಡುವ ಭರವಸೆ ನೀಡಿದ್ದಾರೆ. ಪಂಚಾಯತ್ನಿಂದ ಸೌಲಭ್ಯ ದೊರೆಯದೇ ಹೋದರೆ ವಿಪತ್ತು ನಿರ್ವಹಣಾ ತಂಡದಿಂದ ಹಾನಿಗೊಳಗಾದ ಛಾವಣಿಯನ್ನು ನಿರ್ಮಿಸಿಕೊಡುವ ಭರವಸೆ ನೀಡಲಾಗಿದೆ.

ಸಂತ್ರಸ್ತರಿಗೆ ಮನೆಯಲ್ಲೇ ಜಾಗ ಕೊಟ್ಟ ಸ್ವಯಂಸೇವಕ
ಸದ್ಯಕ್ಕೆ ಮನೆಯವರಿಗೆ ಉಳಿದುಕೊಳ್ಳಲು ವ್ಯವಸ್ಥೆ ಇಲ್ಲವೆಂದು ತೋಡಿಕೊಂಡಾಗ ಧರ್ಮಸ್ಥಳ ವಲಯದ ಸ್ವಯಂಸೇವಕ ವಿಘ್ನೇಶ್ ತಮ್ಮ ಮನೆಯಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿರುತ್ತಾರೆ.

ಕರೆ ಮಾಡಿ ಭರವಸೆ ಕೊಟ್ಟ ಸಂಯೋಜಕರು
ಧರ್ಮಸ್ಥಳ ವಲಯದ ಬಹುತೇಕ ಸದಸ್ಯರು ಕೋವಿಡ್ ಕೇರ್ ಸೆಂಟರ್‌ನಲ್ಲಿ ಕರ್ತವ್ಯದಲ್ಲಿರುವುದರಿಂದ ಸ್ವಯಂಸೇವಕರ ಅಗತ್ಯತೆ ಬಗ್ಗೆ ಬೆಳ್ತಂಗಡಿ ಘಟಕದಲ್ಲಿ ವಿನಂತಿಸಿಕೊಂಡಾಗ ನಡ-ಕನ್ಯಾಡಿ ಘಟಕದ ಸಂಯೋಜಕರಾದ ವಸಂತಿಯವರು ಕರೆ ಮಾಡಿ ವಿಚಾರಿಸಿದ್ದರು. ಕೊಕ್ಕಡ ವಲಯದ ಸಂಯೋಜಕರಾದ ಗಿರಿಜಾರವರು ಎರಡೂ ದಿನವೂ ಕರೆ ಮಾಡಿ ಸ್ವಯಂಸೇವಕರನ್ನು ಕಳುಹಿಸುವ ಬಗ್ಗೆ ಉತ್ಸುಕತೆ ತೋರಿದ್ದರು.

ಕಾರ್ಯಾಚರಣೆಯಲ್ಲಿ ಧರ್ಮಸ್ಥಳ ವಲಯದ ಸಂಯೋಜಕ ಸ್ವಸ್ತಿಕ್ ಕನ್ಯಾಡಿ, ಸ್ವಯಂಸೇವಕರಾದ ವಿದ್ವತ್ ಧರ್ಮಸ್ಥಳ, ವಿಘ್ನೇಶ್ ಧರ್ಮಸ್ಥಳ, ಗ್ರಾ.ಪಂ ಸದಸ್ಯ ಹರ್ಷಿತ್ ಜೈನ್ ಹಾಗೂ ಸ್ಥಳೀಯರು ಸಹಕರಿಸಿದರು.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 59 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 99 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 42 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 609 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ