ಮನೆ ಮೇಲೆ ಬಿದ್ದ ಬೃಹತ್ ಮರ ತೆರವುಗೊಳಿಸಿ ತಕ್ಷಣ ಸ್ಪಂದಿಸಿದ ‘ಶೌರ್ಯ’ ಸ್ವಯಂಸೇವಕರು

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಮುಳಿಕ್ಕಾರಿನ ಕೃಷ್ಣಪ್ಪ ಅವರ ಮನೆಯ ಮೇಲೆ ಬೃಹತ್ ಮರವೊಂದು ಬಿದ್ದಿದ್ದು ಶೌರ್ಯ ವಿಪತ್ತು ನಿರ್ವಹಣಾ ಘಟಕ ಧರ್ಮಸ್ಥಳದ ಧರ್ಮಸ್ಥಳ ವಲಯದ ಸ್ವಯಂಸೇವಕರು ತಕ್ಷಣ ಸ್ಪಂದಿಸಿ ಮಾನವೀಯತೆ ಮೆರೆದರು.

ಸಂಜೆ ಆರು ಗಂಟೆ ಸುಮಾರಿಗೆ ಧರಾಶಾಯಿಯಾದ ಬೃಹತ್ ನಂದಿ ಜಾತಿಯ ಮರ ಕೃಷ್ಣಪ್ಪರವರ ಇದ್ದೊಂದು ಸೂರಿನ ಮೇಲೆಯೇ ಬಿದ್ದು ಅಪಾರ ಹಾನಿ ಮಾಡಿತ್ತು. ಒಂದೆಡೆ ಧಾರಾಕಾರ ಮಳೆ, ಅಳುತ್ತಿರುವ ಕುಟುಂಬ, ಆಗೊಮ್ಮೆ ಈಗೊಮ್ಮೆ ಲಟ್ಟೆನ್ನುವ ಬಿದಿರಿನ ಛಾವಣಿ, ಮಣ್ಣಿನ ಗೋಡೆ ಎಲ್ಲಿ ಕುಸಿಯುವುದೋ ಎಂಬ ಭಯ, ಸುತ್ತಲೂ ಆವರಿಸಿದ ಕತ್ತಲಿನಲ್ಲಿ ವಾರ್ಡ್ ಪಂಚಾಯತ್ ಸದಸ್ಯರಾದ ಹರ್ಷಿತ್ ಜೈನ್ ಇವರಿಗೆ ಫೋನಾಯಿಸಿದರು.

ತಕ್ಷಣಕ್ಕೆ ಏನು ಮಾಡಬೇಕೆಂದು ತೋಚದ ಹರ್ಷಿತ್ ಜೈನ್ ಕೂಡಲೆ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಸಂಯೋಜಕ ಸ್ವಸ್ತಿಕ್ ಕನ್ಯಾಡಿ ಅವರಿಗೆ ಕರೆ ಮಾಡಿ ತಿಳಿಸಿದರು.

ತಕ್ಷಣ ಜಾಗೃತಿಗೊಂಡ ಸ್ವಸ್ತಿಕ್ ಧರ್ಮಸ್ಥಳ ವಲಯ ಹಾಗೂ ಬೆಳ್ತಂಗಡಿ ಘಟಕದ ಸದಸ್ಯರ ಬಳಗದಲ್ಲಿ ಸಂದೇಶ ಹರಿಯಬಿಟ್ಟು ಸ್ವಯಂಸೇವಕ ವಿದ್ವತ್ ಅವರ ಜೊತೆ ಸ್ಥಳಕ್ಕೆ ಧಾವಿಸಿದರು.

ಮುಳಿಕ್ಕಾರು ಭಾಗದ ಸ್ವಯಂಸೇವಕ ವಿಘ್ನೇಶ್ ಅವರೂ ಕರೆ ಮಾಡಿ ಸ್ಥಳಕ್ಕೆ ಹೊರಟು ಮನೆಯವರಿಗೆ ಧೈರ್ಯ ತುಂಬಲಾಯಿತು.

ಮನೆಯವರಿಂದಲೇ ಕತ್ತಿ ಪಡೆದು ಸಾಧ್ಯವಾದಷ್ಟು ತೆರವುಗೊಳಿಸುವ ಪ್ರಯತ್ನ ಮಾಡಲಾಯಿತು. ಬೃಹತ್ ಮರವಾದ್ದರಿಂದ ಮರುದಿವಸಕ್ಕೆ ಮುಂದೂಡಲಾಯಿತು.

ಮರುದಿವಸ ಅಂದರೆ ಜೂನ್ 13ನೇ ತಾರೀಖು ಮುಂಜಾನೆ 9ಗಂಟೆಯಿಂದ ಕಾರ್ಯಾಚರಣೆ ಶುರುಮಾಡಿ 11ಗಂಟೆಯ ವೇಳೆಗೆ ಮನೆಯ ಮೇಲಿದ್ದ ಮರದ ತುಂಡುಗಳನ್ನು ತೆರವುಗೊಳಿಸುವಲ್ಲಿ ತಂಡ ಯಶಸ್ವಿಯಾಯಿತು. ಈ ವೇಳೆ ಸ್ಥಳೀಯರು ಕೈ ಜೋಡಿಸಿದರು.

ಧರ್ಮಸ್ಥಳ ಪಂಚಾಯತ್ ಗೆ ಪರಿಹಾರ ದೊರಕಿಸಿಕೊಡುವಂತೆ ಮನವಿ ಮಾಡಿದ್ದು ಈಗಾಗಲೇ ಹೊಸ ಮನೆ ಕಟ್ಟುತ್ತಿದ್ದು ಅದನ್ನು ಪೂರ್ತಿಗೊಳಿಸಿಕೊಡುವ ಭರವಸೆ ನೀಡಿದ್ದಾರೆ. ಪಂಚಾಯತ್ನಿಂದ ಸೌಲಭ್ಯ ದೊರೆಯದೇ ಹೋದರೆ ವಿಪತ್ತು ನಿರ್ವಹಣಾ ತಂಡದಿಂದ ಹಾನಿಗೊಳಗಾದ ಛಾವಣಿಯನ್ನು ನಿರ್ಮಿಸಿಕೊಡುವ ಭರವಸೆ ನೀಡಲಾಗಿದೆ.

ಸಂತ್ರಸ್ತರಿಗೆ ಮನೆಯಲ್ಲೇ ಜಾಗ ಕೊಟ್ಟ ಸ್ವಯಂಸೇವಕ
ಸದ್ಯಕ್ಕೆ ಮನೆಯವರಿಗೆ ಉಳಿದುಕೊಳ್ಳಲು ವ್ಯವಸ್ಥೆ ಇಲ್ಲವೆಂದು ತೋಡಿಕೊಂಡಾಗ ಧರ್ಮಸ್ಥಳ ವಲಯದ ಸ್ವಯಂಸೇವಕ ವಿಘ್ನೇಶ್ ತಮ್ಮ ಮನೆಯಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿರುತ್ತಾರೆ.

ಕರೆ ಮಾಡಿ ಭರವಸೆ ಕೊಟ್ಟ ಸಂಯೋಜಕರು
ಧರ್ಮಸ್ಥಳ ವಲಯದ ಬಹುತೇಕ ಸದಸ್ಯರು ಕೋವಿಡ್ ಕೇರ್ ಸೆಂಟರ್‌ನಲ್ಲಿ ಕರ್ತವ್ಯದಲ್ಲಿರುವುದರಿಂದ ಸ್ವಯಂಸೇವಕರ ಅಗತ್ಯತೆ ಬಗ್ಗೆ ಬೆಳ್ತಂಗಡಿ ಘಟಕದಲ್ಲಿ ವಿನಂತಿಸಿಕೊಂಡಾಗ ನಡ-ಕನ್ಯಾಡಿ ಘಟಕದ ಸಂಯೋಜಕರಾದ ವಸಂತಿಯವರು ಕರೆ ಮಾಡಿ ವಿಚಾರಿಸಿದ್ದರು. ಕೊಕ್ಕಡ ವಲಯದ ಸಂಯೋಜಕರಾದ ಗಿರಿಜಾರವರು ಎರಡೂ ದಿನವೂ ಕರೆ ಮಾಡಿ ಸ್ವಯಂಸೇವಕರನ್ನು ಕಳುಹಿಸುವ ಬಗ್ಗೆ ಉತ್ಸುಕತೆ ತೋರಿದ್ದರು.

ಕಾರ್ಯಾಚರಣೆಯಲ್ಲಿ ಧರ್ಮಸ್ಥಳ ವಲಯದ ಸಂಯೋಜಕ ಸ್ವಸ್ತಿಕ್ ಕನ್ಯಾಡಿ, ಸ್ವಯಂಸೇವಕರಾದ ವಿದ್ವತ್ ಧರ್ಮಸ್ಥಳ, ವಿಘ್ನೇಶ್ ಧರ್ಮಸ್ಥಳ, ಗ್ರಾ.ಪಂ ಸದಸ್ಯ ಹರ್ಷಿತ್ ಜೈನ್ ಹಾಗೂ ಸ್ಥಳೀಯರು ಸಹಕರಿಸಿದರು.

Spread the love
  • Related Posts

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಶಿಶಿಲ: ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆಯು 07/02/2026 ಶನಿವಾರದಿಂದ 10/02/2026ಮಂಗಳವಾರದವರೆಗೆ ನಡೆಯಲಿದೆ. Spread the love

    Spread the love

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಗುರುವಾಯನಕೆರೆ: ರಾಷ್ಟ್ರಮಟ್ಟದಲ್ಲಿ ಇನ್ಸಿಟ್ಯೂಟ್ ಆಫ್‌ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ನಡೆಸುವ ಕಂಪನಿ ಸೆಕ್ರೆಟರಿ ಪರೀಕ್ಷೆಯ ಎರಡನೇ ಆವೃತ್ತಿಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ. 200 ಅಂಕಗಳ ಪರೀಕ್ಷೆಯಲ್ಲಿ 183 ಅಂಕಗಳನ್ನು…

    Spread the love

    You Missed

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    • By admin
    • January 28, 2026
    • 57 views
    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    • By admin
    • January 20, 2026
    • 305 views
    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ,  ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    • By admin
    • January 20, 2026
    • 103 views
    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    • By admin
    • January 18, 2026
    • 97 views
    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    • By admin
    • January 18, 2026
    • 89 views
    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    • By admin
    • January 18, 2026
    • 69 views
    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️