ಮನೆ ಮೇಲೆ ಬಿದ್ದ ಬೃಹತ್ ಮರ ತೆರವುಗೊಳಿಸಿ ತಕ್ಷಣ ಸ್ಪಂದಿಸಿದ ‘ಶೌರ್ಯ’ ಸ್ವಯಂಸೇವಕರು

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಮುಳಿಕ್ಕಾರಿನ ಕೃಷ್ಣಪ್ಪ ಅವರ ಮನೆಯ ಮೇಲೆ ಬೃಹತ್ ಮರವೊಂದು ಬಿದ್ದಿದ್ದು ಶೌರ್ಯ ವಿಪತ್ತು ನಿರ್ವಹಣಾ ಘಟಕ ಧರ್ಮಸ್ಥಳದ ಧರ್ಮಸ್ಥಳ ವಲಯದ ಸ್ವಯಂಸೇವಕರು ತಕ್ಷಣ ಸ್ಪಂದಿಸಿ ಮಾನವೀಯತೆ ಮೆರೆದರು.

ಸಂಜೆ ಆರು ಗಂಟೆ ಸುಮಾರಿಗೆ ಧರಾಶಾಯಿಯಾದ ಬೃಹತ್ ನಂದಿ ಜಾತಿಯ ಮರ ಕೃಷ್ಣಪ್ಪರವರ ಇದ್ದೊಂದು ಸೂರಿನ ಮೇಲೆಯೇ ಬಿದ್ದು ಅಪಾರ ಹಾನಿ ಮಾಡಿತ್ತು. ಒಂದೆಡೆ ಧಾರಾಕಾರ ಮಳೆ, ಅಳುತ್ತಿರುವ ಕುಟುಂಬ, ಆಗೊಮ್ಮೆ ಈಗೊಮ್ಮೆ ಲಟ್ಟೆನ್ನುವ ಬಿದಿರಿನ ಛಾವಣಿ, ಮಣ್ಣಿನ ಗೋಡೆ ಎಲ್ಲಿ ಕುಸಿಯುವುದೋ ಎಂಬ ಭಯ, ಸುತ್ತಲೂ ಆವರಿಸಿದ ಕತ್ತಲಿನಲ್ಲಿ ವಾರ್ಡ್ ಪಂಚಾಯತ್ ಸದಸ್ಯರಾದ ಹರ್ಷಿತ್ ಜೈನ್ ಇವರಿಗೆ ಫೋನಾಯಿಸಿದರು.

ತಕ್ಷಣಕ್ಕೆ ಏನು ಮಾಡಬೇಕೆಂದು ತೋಚದ ಹರ್ಷಿತ್ ಜೈನ್ ಕೂಡಲೆ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಸಂಯೋಜಕ ಸ್ವಸ್ತಿಕ್ ಕನ್ಯಾಡಿ ಅವರಿಗೆ ಕರೆ ಮಾಡಿ ತಿಳಿಸಿದರು.

ತಕ್ಷಣ ಜಾಗೃತಿಗೊಂಡ ಸ್ವಸ್ತಿಕ್ ಧರ್ಮಸ್ಥಳ ವಲಯ ಹಾಗೂ ಬೆಳ್ತಂಗಡಿ ಘಟಕದ ಸದಸ್ಯರ ಬಳಗದಲ್ಲಿ ಸಂದೇಶ ಹರಿಯಬಿಟ್ಟು ಸ್ವಯಂಸೇವಕ ವಿದ್ವತ್ ಅವರ ಜೊತೆ ಸ್ಥಳಕ್ಕೆ ಧಾವಿಸಿದರು.

ಮುಳಿಕ್ಕಾರು ಭಾಗದ ಸ್ವಯಂಸೇವಕ ವಿಘ್ನೇಶ್ ಅವರೂ ಕರೆ ಮಾಡಿ ಸ್ಥಳಕ್ಕೆ ಹೊರಟು ಮನೆಯವರಿಗೆ ಧೈರ್ಯ ತುಂಬಲಾಯಿತು.

ಮನೆಯವರಿಂದಲೇ ಕತ್ತಿ ಪಡೆದು ಸಾಧ್ಯವಾದಷ್ಟು ತೆರವುಗೊಳಿಸುವ ಪ್ರಯತ್ನ ಮಾಡಲಾಯಿತು. ಬೃಹತ್ ಮರವಾದ್ದರಿಂದ ಮರುದಿವಸಕ್ಕೆ ಮುಂದೂಡಲಾಯಿತು.

ಮರುದಿವಸ ಅಂದರೆ ಜೂನ್ 13ನೇ ತಾರೀಖು ಮುಂಜಾನೆ 9ಗಂಟೆಯಿಂದ ಕಾರ್ಯಾಚರಣೆ ಶುರುಮಾಡಿ 11ಗಂಟೆಯ ವೇಳೆಗೆ ಮನೆಯ ಮೇಲಿದ್ದ ಮರದ ತುಂಡುಗಳನ್ನು ತೆರವುಗೊಳಿಸುವಲ್ಲಿ ತಂಡ ಯಶಸ್ವಿಯಾಯಿತು. ಈ ವೇಳೆ ಸ್ಥಳೀಯರು ಕೈ ಜೋಡಿಸಿದರು.

ಧರ್ಮಸ್ಥಳ ಪಂಚಾಯತ್ ಗೆ ಪರಿಹಾರ ದೊರಕಿಸಿಕೊಡುವಂತೆ ಮನವಿ ಮಾಡಿದ್ದು ಈಗಾಗಲೇ ಹೊಸ ಮನೆ ಕಟ್ಟುತ್ತಿದ್ದು ಅದನ್ನು ಪೂರ್ತಿಗೊಳಿಸಿಕೊಡುವ ಭರವಸೆ ನೀಡಿದ್ದಾರೆ. ಪಂಚಾಯತ್ನಿಂದ ಸೌಲಭ್ಯ ದೊರೆಯದೇ ಹೋದರೆ ವಿಪತ್ತು ನಿರ್ವಹಣಾ ತಂಡದಿಂದ ಹಾನಿಗೊಳಗಾದ ಛಾವಣಿಯನ್ನು ನಿರ್ಮಿಸಿಕೊಡುವ ಭರವಸೆ ನೀಡಲಾಗಿದೆ.

ಸಂತ್ರಸ್ತರಿಗೆ ಮನೆಯಲ್ಲೇ ಜಾಗ ಕೊಟ್ಟ ಸ್ವಯಂಸೇವಕ
ಸದ್ಯಕ್ಕೆ ಮನೆಯವರಿಗೆ ಉಳಿದುಕೊಳ್ಳಲು ವ್ಯವಸ್ಥೆ ಇಲ್ಲವೆಂದು ತೋಡಿಕೊಂಡಾಗ ಧರ್ಮಸ್ಥಳ ವಲಯದ ಸ್ವಯಂಸೇವಕ ವಿಘ್ನೇಶ್ ತಮ್ಮ ಮನೆಯಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿರುತ್ತಾರೆ.

ಕರೆ ಮಾಡಿ ಭರವಸೆ ಕೊಟ್ಟ ಸಂಯೋಜಕರು
ಧರ್ಮಸ್ಥಳ ವಲಯದ ಬಹುತೇಕ ಸದಸ್ಯರು ಕೋವಿಡ್ ಕೇರ್ ಸೆಂಟರ್‌ನಲ್ಲಿ ಕರ್ತವ್ಯದಲ್ಲಿರುವುದರಿಂದ ಸ್ವಯಂಸೇವಕರ ಅಗತ್ಯತೆ ಬಗ್ಗೆ ಬೆಳ್ತಂಗಡಿ ಘಟಕದಲ್ಲಿ ವಿನಂತಿಸಿಕೊಂಡಾಗ ನಡ-ಕನ್ಯಾಡಿ ಘಟಕದ ಸಂಯೋಜಕರಾದ ವಸಂತಿಯವರು ಕರೆ ಮಾಡಿ ವಿಚಾರಿಸಿದ್ದರು. ಕೊಕ್ಕಡ ವಲಯದ ಸಂಯೋಜಕರಾದ ಗಿರಿಜಾರವರು ಎರಡೂ ದಿನವೂ ಕರೆ ಮಾಡಿ ಸ್ವಯಂಸೇವಕರನ್ನು ಕಳುಹಿಸುವ ಬಗ್ಗೆ ಉತ್ಸುಕತೆ ತೋರಿದ್ದರು.

ಕಾರ್ಯಾಚರಣೆಯಲ್ಲಿ ಧರ್ಮಸ್ಥಳ ವಲಯದ ಸಂಯೋಜಕ ಸ್ವಸ್ತಿಕ್ ಕನ್ಯಾಡಿ, ಸ್ವಯಂಸೇವಕರಾದ ವಿದ್ವತ್ ಧರ್ಮಸ್ಥಳ, ವಿಘ್ನೇಶ್ ಧರ್ಮಸ್ಥಳ, ಗ್ರಾ.ಪಂ ಸದಸ್ಯ ಹರ್ಷಿತ್ ಜೈನ್ ಹಾಗೂ ಸ್ಥಳೀಯರು ಸಹಕರಿಸಿದರು.

Spread the love
  • Related Posts

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ ಭಜನಾ ತಂಡ,…

    Spread the love

    You Missed

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 6 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 11 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 6 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 12 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 18 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 15 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು