ಮನೆ ಮೇಲೆ ಬಿದ್ದ ಬೃಹತ್ ಮರ ತೆರವುಗೊಳಿಸಿ ತಕ್ಷಣ ಸ್ಪಂದಿಸಿದ ‘ಶೌರ್ಯ’ ಸ್ವಯಂಸೇವಕರು

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಮುಳಿಕ್ಕಾರಿನ ಕೃಷ್ಣಪ್ಪ ಅವರ ಮನೆಯ ಮೇಲೆ ಬೃಹತ್ ಮರವೊಂದು ಬಿದ್ದಿದ್ದು ಶೌರ್ಯ ವಿಪತ್ತು ನಿರ್ವಹಣಾ ಘಟಕ ಧರ್ಮಸ್ಥಳದ ಧರ್ಮಸ್ಥಳ ವಲಯದ ಸ್ವಯಂಸೇವಕರು ತಕ್ಷಣ ಸ್ಪಂದಿಸಿ ಮಾನವೀಯತೆ ಮೆರೆದರು.

ಸಂಜೆ ಆರು ಗಂಟೆ ಸುಮಾರಿಗೆ ಧರಾಶಾಯಿಯಾದ ಬೃಹತ್ ನಂದಿ ಜಾತಿಯ ಮರ ಕೃಷ್ಣಪ್ಪರವರ ಇದ್ದೊಂದು ಸೂರಿನ ಮೇಲೆಯೇ ಬಿದ್ದು ಅಪಾರ ಹಾನಿ ಮಾಡಿತ್ತು. ಒಂದೆಡೆ ಧಾರಾಕಾರ ಮಳೆ, ಅಳುತ್ತಿರುವ ಕುಟುಂಬ, ಆಗೊಮ್ಮೆ ಈಗೊಮ್ಮೆ ಲಟ್ಟೆನ್ನುವ ಬಿದಿರಿನ ಛಾವಣಿ, ಮಣ್ಣಿನ ಗೋಡೆ ಎಲ್ಲಿ ಕುಸಿಯುವುದೋ ಎಂಬ ಭಯ, ಸುತ್ತಲೂ ಆವರಿಸಿದ ಕತ್ತಲಿನಲ್ಲಿ ವಾರ್ಡ್ ಪಂಚಾಯತ್ ಸದಸ್ಯರಾದ ಹರ್ಷಿತ್ ಜೈನ್ ಇವರಿಗೆ ಫೋನಾಯಿಸಿದರು.

ತಕ್ಷಣಕ್ಕೆ ಏನು ಮಾಡಬೇಕೆಂದು ತೋಚದ ಹರ್ಷಿತ್ ಜೈನ್ ಕೂಡಲೆ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಸಂಯೋಜಕ ಸ್ವಸ್ತಿಕ್ ಕನ್ಯಾಡಿ ಅವರಿಗೆ ಕರೆ ಮಾಡಿ ತಿಳಿಸಿದರು.

ತಕ್ಷಣ ಜಾಗೃತಿಗೊಂಡ ಸ್ವಸ್ತಿಕ್ ಧರ್ಮಸ್ಥಳ ವಲಯ ಹಾಗೂ ಬೆಳ್ತಂಗಡಿ ಘಟಕದ ಸದಸ್ಯರ ಬಳಗದಲ್ಲಿ ಸಂದೇಶ ಹರಿಯಬಿಟ್ಟು ಸ್ವಯಂಸೇವಕ ವಿದ್ವತ್ ಅವರ ಜೊತೆ ಸ್ಥಳಕ್ಕೆ ಧಾವಿಸಿದರು.

ಮುಳಿಕ್ಕಾರು ಭಾಗದ ಸ್ವಯಂಸೇವಕ ವಿಘ್ನೇಶ್ ಅವರೂ ಕರೆ ಮಾಡಿ ಸ್ಥಳಕ್ಕೆ ಹೊರಟು ಮನೆಯವರಿಗೆ ಧೈರ್ಯ ತುಂಬಲಾಯಿತು.

ಮನೆಯವರಿಂದಲೇ ಕತ್ತಿ ಪಡೆದು ಸಾಧ್ಯವಾದಷ್ಟು ತೆರವುಗೊಳಿಸುವ ಪ್ರಯತ್ನ ಮಾಡಲಾಯಿತು. ಬೃಹತ್ ಮರವಾದ್ದರಿಂದ ಮರುದಿವಸಕ್ಕೆ ಮುಂದೂಡಲಾಯಿತು.

ಮರುದಿವಸ ಅಂದರೆ ಜೂನ್ 13ನೇ ತಾರೀಖು ಮುಂಜಾನೆ 9ಗಂಟೆಯಿಂದ ಕಾರ್ಯಾಚರಣೆ ಶುರುಮಾಡಿ 11ಗಂಟೆಯ ವೇಳೆಗೆ ಮನೆಯ ಮೇಲಿದ್ದ ಮರದ ತುಂಡುಗಳನ್ನು ತೆರವುಗೊಳಿಸುವಲ್ಲಿ ತಂಡ ಯಶಸ್ವಿಯಾಯಿತು. ಈ ವೇಳೆ ಸ್ಥಳೀಯರು ಕೈ ಜೋಡಿಸಿದರು.

ಧರ್ಮಸ್ಥಳ ಪಂಚಾಯತ್ ಗೆ ಪರಿಹಾರ ದೊರಕಿಸಿಕೊಡುವಂತೆ ಮನವಿ ಮಾಡಿದ್ದು ಈಗಾಗಲೇ ಹೊಸ ಮನೆ ಕಟ್ಟುತ್ತಿದ್ದು ಅದನ್ನು ಪೂರ್ತಿಗೊಳಿಸಿಕೊಡುವ ಭರವಸೆ ನೀಡಿದ್ದಾರೆ. ಪಂಚಾಯತ್ನಿಂದ ಸೌಲಭ್ಯ ದೊರೆಯದೇ ಹೋದರೆ ವಿಪತ್ತು ನಿರ್ವಹಣಾ ತಂಡದಿಂದ ಹಾನಿಗೊಳಗಾದ ಛಾವಣಿಯನ್ನು ನಿರ್ಮಿಸಿಕೊಡುವ ಭರವಸೆ ನೀಡಲಾಗಿದೆ.

ಸಂತ್ರಸ್ತರಿಗೆ ಮನೆಯಲ್ಲೇ ಜಾಗ ಕೊಟ್ಟ ಸ್ವಯಂಸೇವಕ
ಸದ್ಯಕ್ಕೆ ಮನೆಯವರಿಗೆ ಉಳಿದುಕೊಳ್ಳಲು ವ್ಯವಸ್ಥೆ ಇಲ್ಲವೆಂದು ತೋಡಿಕೊಂಡಾಗ ಧರ್ಮಸ್ಥಳ ವಲಯದ ಸ್ವಯಂಸೇವಕ ವಿಘ್ನೇಶ್ ತಮ್ಮ ಮನೆಯಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿರುತ್ತಾರೆ.

ಕರೆ ಮಾಡಿ ಭರವಸೆ ಕೊಟ್ಟ ಸಂಯೋಜಕರು
ಧರ್ಮಸ್ಥಳ ವಲಯದ ಬಹುತೇಕ ಸದಸ್ಯರು ಕೋವಿಡ್ ಕೇರ್ ಸೆಂಟರ್‌ನಲ್ಲಿ ಕರ್ತವ್ಯದಲ್ಲಿರುವುದರಿಂದ ಸ್ವಯಂಸೇವಕರ ಅಗತ್ಯತೆ ಬಗ್ಗೆ ಬೆಳ್ತಂಗಡಿ ಘಟಕದಲ್ಲಿ ವಿನಂತಿಸಿಕೊಂಡಾಗ ನಡ-ಕನ್ಯಾಡಿ ಘಟಕದ ಸಂಯೋಜಕರಾದ ವಸಂತಿಯವರು ಕರೆ ಮಾಡಿ ವಿಚಾರಿಸಿದ್ದರು. ಕೊಕ್ಕಡ ವಲಯದ ಸಂಯೋಜಕರಾದ ಗಿರಿಜಾರವರು ಎರಡೂ ದಿನವೂ ಕರೆ ಮಾಡಿ ಸ್ವಯಂಸೇವಕರನ್ನು ಕಳುಹಿಸುವ ಬಗ್ಗೆ ಉತ್ಸುಕತೆ ತೋರಿದ್ದರು.

ಕಾರ್ಯಾಚರಣೆಯಲ್ಲಿ ಧರ್ಮಸ್ಥಳ ವಲಯದ ಸಂಯೋಜಕ ಸ್ವಸ್ತಿಕ್ ಕನ್ಯಾಡಿ, ಸ್ವಯಂಸೇವಕರಾದ ವಿದ್ವತ್ ಧರ್ಮಸ್ಥಳ, ವಿಘ್ನೇಶ್ ಧರ್ಮಸ್ಥಳ, ಗ್ರಾ.ಪಂ ಸದಸ್ಯ ಹರ್ಷಿತ್ ಜೈನ್ ಹಾಗೂ ಸ್ಥಳೀಯರು ಸಹಕರಿಸಿದರು.

Spread the love
  • Related Posts

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಬೆಳ್ತಂಗಡಿ: ಜಿಲ್ಲಾ ನ್ಯಾಯಾಂಗ, ದ.ಕ ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಜನತೆ ಮತ್ತು ವಕೀಲರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಕರ್ನಾಟಕ ಸರಕಾರಕ್ಕೆ ಸಲ್ಲಿಸಲಾದ ಸುಮಾರು 23 ಕೋಟಿ…

    Spread the love

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಬೆಳ್ತಂಗಡಿ, ಜೂನ್ 13: ಸ್ಥಳೀಯ ಪತ್ರಿಕೋದ್ಯಮವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಸಂಘದ ಮುಂದಿನ ಅವಧಿಗೆ…

    Spread the love

    You Missed

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 20 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 72 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    • By admin
    • June 13, 2026
    • 25 views
    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    • By admin
    • June 13, 2026
    • 62 views
    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    • By admin
    • June 13, 2026
    • 21 views
    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    • By admin
    • June 13, 2026
    • 191 views
    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ