ಮನೆ ಮೇಲೆ ಬಿದ್ದ ಬೃಹತ್ ಮರ ತೆರವುಗೊಳಿಸಿ ತಕ್ಷಣ ಸ್ಪಂದಿಸಿದ ‘ಶೌರ್ಯ’ ಸ್ವಯಂಸೇವಕರು

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಮುಳಿಕ್ಕಾರಿನ ಕೃಷ್ಣಪ್ಪ ಅವರ ಮನೆಯ ಮೇಲೆ ಬೃಹತ್ ಮರವೊಂದು ಬಿದ್ದಿದ್ದು ಶೌರ್ಯ ವಿಪತ್ತು ನಿರ್ವಹಣಾ ಘಟಕ ಧರ್ಮಸ್ಥಳದ ಧರ್ಮಸ್ಥಳ ವಲಯದ ಸ್ವಯಂಸೇವಕರು ತಕ್ಷಣ ಸ್ಪಂದಿಸಿ ಮಾನವೀಯತೆ ಮೆರೆದರು.

ಸಂಜೆ ಆರು ಗಂಟೆ ಸುಮಾರಿಗೆ ಧರಾಶಾಯಿಯಾದ ಬೃಹತ್ ನಂದಿ ಜಾತಿಯ ಮರ ಕೃಷ್ಣಪ್ಪರವರ ಇದ್ದೊಂದು ಸೂರಿನ ಮೇಲೆಯೇ ಬಿದ್ದು ಅಪಾರ ಹಾನಿ ಮಾಡಿತ್ತು. ಒಂದೆಡೆ ಧಾರಾಕಾರ ಮಳೆ, ಅಳುತ್ತಿರುವ ಕುಟುಂಬ, ಆಗೊಮ್ಮೆ ಈಗೊಮ್ಮೆ ಲಟ್ಟೆನ್ನುವ ಬಿದಿರಿನ ಛಾವಣಿ, ಮಣ್ಣಿನ ಗೋಡೆ ಎಲ್ಲಿ ಕುಸಿಯುವುದೋ ಎಂಬ ಭಯ, ಸುತ್ತಲೂ ಆವರಿಸಿದ ಕತ್ತಲಿನಲ್ಲಿ ವಾರ್ಡ್ ಪಂಚಾಯತ್ ಸದಸ್ಯರಾದ ಹರ್ಷಿತ್ ಜೈನ್ ಇವರಿಗೆ ಫೋನಾಯಿಸಿದರು.

ತಕ್ಷಣಕ್ಕೆ ಏನು ಮಾಡಬೇಕೆಂದು ತೋಚದ ಹರ್ಷಿತ್ ಜೈನ್ ಕೂಡಲೆ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಸಂಯೋಜಕ ಸ್ವಸ್ತಿಕ್ ಕನ್ಯಾಡಿ ಅವರಿಗೆ ಕರೆ ಮಾಡಿ ತಿಳಿಸಿದರು.

ತಕ್ಷಣ ಜಾಗೃತಿಗೊಂಡ ಸ್ವಸ್ತಿಕ್ ಧರ್ಮಸ್ಥಳ ವಲಯ ಹಾಗೂ ಬೆಳ್ತಂಗಡಿ ಘಟಕದ ಸದಸ್ಯರ ಬಳಗದಲ್ಲಿ ಸಂದೇಶ ಹರಿಯಬಿಟ್ಟು ಸ್ವಯಂಸೇವಕ ವಿದ್ವತ್ ಅವರ ಜೊತೆ ಸ್ಥಳಕ್ಕೆ ಧಾವಿಸಿದರು.

ಮುಳಿಕ್ಕಾರು ಭಾಗದ ಸ್ವಯಂಸೇವಕ ವಿಘ್ನೇಶ್ ಅವರೂ ಕರೆ ಮಾಡಿ ಸ್ಥಳಕ್ಕೆ ಹೊರಟು ಮನೆಯವರಿಗೆ ಧೈರ್ಯ ತುಂಬಲಾಯಿತು.

ಮನೆಯವರಿಂದಲೇ ಕತ್ತಿ ಪಡೆದು ಸಾಧ್ಯವಾದಷ್ಟು ತೆರವುಗೊಳಿಸುವ ಪ್ರಯತ್ನ ಮಾಡಲಾಯಿತು. ಬೃಹತ್ ಮರವಾದ್ದರಿಂದ ಮರುದಿವಸಕ್ಕೆ ಮುಂದೂಡಲಾಯಿತು.

ಮರುದಿವಸ ಅಂದರೆ ಜೂನ್ 13ನೇ ತಾರೀಖು ಮುಂಜಾನೆ 9ಗಂಟೆಯಿಂದ ಕಾರ್ಯಾಚರಣೆ ಶುರುಮಾಡಿ 11ಗಂಟೆಯ ವೇಳೆಗೆ ಮನೆಯ ಮೇಲಿದ್ದ ಮರದ ತುಂಡುಗಳನ್ನು ತೆರವುಗೊಳಿಸುವಲ್ಲಿ ತಂಡ ಯಶಸ್ವಿಯಾಯಿತು. ಈ ವೇಳೆ ಸ್ಥಳೀಯರು ಕೈ ಜೋಡಿಸಿದರು.

ಧರ್ಮಸ್ಥಳ ಪಂಚಾಯತ್ ಗೆ ಪರಿಹಾರ ದೊರಕಿಸಿಕೊಡುವಂತೆ ಮನವಿ ಮಾಡಿದ್ದು ಈಗಾಗಲೇ ಹೊಸ ಮನೆ ಕಟ್ಟುತ್ತಿದ್ದು ಅದನ್ನು ಪೂರ್ತಿಗೊಳಿಸಿಕೊಡುವ ಭರವಸೆ ನೀಡಿದ್ದಾರೆ. ಪಂಚಾಯತ್ನಿಂದ ಸೌಲಭ್ಯ ದೊರೆಯದೇ ಹೋದರೆ ವಿಪತ್ತು ನಿರ್ವಹಣಾ ತಂಡದಿಂದ ಹಾನಿಗೊಳಗಾದ ಛಾವಣಿಯನ್ನು ನಿರ್ಮಿಸಿಕೊಡುವ ಭರವಸೆ ನೀಡಲಾಗಿದೆ.

ಸಂತ್ರಸ್ತರಿಗೆ ಮನೆಯಲ್ಲೇ ಜಾಗ ಕೊಟ್ಟ ಸ್ವಯಂಸೇವಕ
ಸದ್ಯಕ್ಕೆ ಮನೆಯವರಿಗೆ ಉಳಿದುಕೊಳ್ಳಲು ವ್ಯವಸ್ಥೆ ಇಲ್ಲವೆಂದು ತೋಡಿಕೊಂಡಾಗ ಧರ್ಮಸ್ಥಳ ವಲಯದ ಸ್ವಯಂಸೇವಕ ವಿಘ್ನೇಶ್ ತಮ್ಮ ಮನೆಯಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿರುತ್ತಾರೆ.

ಕರೆ ಮಾಡಿ ಭರವಸೆ ಕೊಟ್ಟ ಸಂಯೋಜಕರು
ಧರ್ಮಸ್ಥಳ ವಲಯದ ಬಹುತೇಕ ಸದಸ್ಯರು ಕೋವಿಡ್ ಕೇರ್ ಸೆಂಟರ್‌ನಲ್ಲಿ ಕರ್ತವ್ಯದಲ್ಲಿರುವುದರಿಂದ ಸ್ವಯಂಸೇವಕರ ಅಗತ್ಯತೆ ಬಗ್ಗೆ ಬೆಳ್ತಂಗಡಿ ಘಟಕದಲ್ಲಿ ವಿನಂತಿಸಿಕೊಂಡಾಗ ನಡ-ಕನ್ಯಾಡಿ ಘಟಕದ ಸಂಯೋಜಕರಾದ ವಸಂತಿಯವರು ಕರೆ ಮಾಡಿ ವಿಚಾರಿಸಿದ್ದರು. ಕೊಕ್ಕಡ ವಲಯದ ಸಂಯೋಜಕರಾದ ಗಿರಿಜಾರವರು ಎರಡೂ ದಿನವೂ ಕರೆ ಮಾಡಿ ಸ್ವಯಂಸೇವಕರನ್ನು ಕಳುಹಿಸುವ ಬಗ್ಗೆ ಉತ್ಸುಕತೆ ತೋರಿದ್ದರು.

ಕಾರ್ಯಾಚರಣೆಯಲ್ಲಿ ಧರ್ಮಸ್ಥಳ ವಲಯದ ಸಂಯೋಜಕ ಸ್ವಸ್ತಿಕ್ ಕನ್ಯಾಡಿ, ಸ್ವಯಂಸೇವಕರಾದ ವಿದ್ವತ್ ಧರ್ಮಸ್ಥಳ, ವಿಘ್ನೇಶ್ ಧರ್ಮಸ್ಥಳ, ಗ್ರಾ.ಪಂ ಸದಸ್ಯ ಹರ್ಷಿತ್ ಜೈನ್ ಹಾಗೂ ಸ್ಥಳೀಯರು ಸಹಕರಿಸಿದರು.

Spread the love
  • Related Posts

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಬೆಳ್ತಂಗಡಿ, ಜು.30: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಪ್ರದೇಶದಲ್ಲಿ ಬೆಳ್ತಂಗಡಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ (MDMA), ಕಾರು, ಆಟೋ ರಿಕ್ಷಾ ಹಾಗೂ ಮೊಬೈಲ್ ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ…

    Spread the love

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    “ಜೀವ ಉಳಿಸಲು ನಿಮ್ಮ ನೆರವು ಅಗತ್ಯ“ ಬೆಳ್ತಂಗಡಿ, ಜು.30: ಬೆಳ್ತಂಗಡಿ ತಾಲೂಕಿನ ಬೆದ್ರಬೆಟ್ಟು ನಿವಾಸಿ ವಸಂತ ಗೌಡರವರು 21/07/2026ರಂದು ಬೆಳಿಗ್ಗೆ ಸುಮಾರು 7.30ರ ವೇಳೆಗೆ ಪಡಂಗಡಿ ಸಮೀಪ ಹಾಲು ಹಿಡಿದು ಕೊಂಡು ಹೋಗುತ್ತಿದ್ದ ವೇಳೆ ದಾರಿ ಮಧ್ಯೆ ಜಾರಿ ಬಿದ್ದು ತಲೆಗೆ…

    Spread the love

    You Missed

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 4 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 11 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    • By admin
    • July 30, 2026
    • 9 views
    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 10 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 10 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 13 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!