ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ 666ನೇ “ವಾತ್ಸಲ್ಯ ಮನೆ” ಹಸ್ತಾಂತರ ಹಾಗೂ ಫಲಾನುಭವಿಗಳಿಗೆ ಮಾಸಾಶನ ಮತ್ತು ಇತರ ಸವಲತ್ತುಗಳನ್ನು ಶೃಂಗೇರಿ ಪೀಠದ ಪೂಜ್ಯ ವಿಧುಶೇಖರ ಭಾರತೀ ಸ್ವಾಮೀಜಿಯವರು ವಿತರಿಸಿದರು ಬಳಿಕ ಮಾತನಾಡಿದ ಅವರು ಶ್ರದ್ಧಾ-ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಬೇಕು. ಆಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ. ಅದ್ವೈತ ತತ್ವ ಪ್ರಸಾರ ಮಾಡಿದ ಆದಿ ಶಂಕರಾಚಾರ್ಯರು ಇಡೀ ವಿಶ್ವಕ್ಕೆ ಸಾರ್ವಕಾಲಿಕವಾಗಿ ಅನ್ವಯವಾಗುವಂತಹ ಮೇಲಿನಂತೆ ಉಪದೇಶ ನೀಡಿದ್ದಾರೆ. ಸಾಧ್ಯವಾದಷ್ಟು ಸಜ್ಜನರ ಸಹವಾಸ ಮಾಡಿ ಅವರ ಗುಣಗಳನ್ನು ಅನುಸರಿಸಿ ಎಲ್ಲರೂ ಪರೋಪಕಾರ ಮಾಡಬೇಕು. ಭಗವದ್ಗೀತೆ ಪಠಣದೊಂದಿಗೆ ಭಗವಂತನ ನಾಮಸ್ಮರಣೆ ಮಾಡಿದರೆ ಜೀವನ ಪಾವನವಾಗುತ್ತದೆ ಧರ್ಮಸ್ಥಳದಲ್ಲಿ ಚತುರ್ವಿದ ದಾನಪರಂಪರೆಯೊಂದಿಗೆ ಹೆಗ್ಗಡೆಯವರು ನಿರಂತರವಾಗಿ ಸಮಾಜ ಸೇವಾಕಾರ್ಯಗಳನ್ನು ಮಾಡುತ್ತಾ ಬರುತ್ತಿದ್ದು ಒಳ್ಳೆಯ ಕೆಲಸಗಳನ್ನು ಮಾಡುವಾಗ ವಿಘ್ನಗಳು ಸಹಜವಾಗಿ ಬರುತ್ತವೆ. ಭಗವಂತನ ಸೇವೆಯೊಂದಿಗೆ ಭಕ್ತರು ಧರ್ಮಸ್ಥಳದ ಸೇವಾಕಾರ್ಯಗಳಿಗೂ ಸಕ್ರಿಯ ಸಹಕಾರ ನೀಡಬೇಕು. ಕಷ್ಟದಲ್ಲಿರುವವರಿಗೆ “ವಾತ್ಸಲ್ಯ ಮನೆ” ನೀಡುವ ಕಾಯಕ ಅತ್ಯಂತ ಪುಣ್ಯದಾಯಕ ಸೇವೆಯಾಗಿದೆ. ಧರ್ಮಸ್ಥಳ ಕ್ಷೇತ್ರವು ಅತಿಶಯ ಕ್ಷೇತ್ರವಾಗಿ ಬೆಳೆಯಲಿ, ಬೆಳಗಲಿ ಎಂದು ಸ್ವಾಮೀಜಿ ಹಾರೈಸಿದರು.

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಪೂಜ್ಯರ ಗುರುಗಳು ಧರ್ಮಸ್ಥಳಕ್ಕೆ ಕೊಡುಗೆಯಾಗಿ ನೀಡಿದ ಕಾರಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಶೃಂಗೇರಿಗೂ ಧರ್ಮಸ್ಥಳಕ್ಕೂ ಅವಿನಾಭಾವ ಸಂಬಂಧವಿದೆ ಎಂದು ಹೇಳಿ ಪೂಜ್ಯರ ಆಶೀರ್ವಾದ ಮತ್ತು ಮಾರ್ಗದರ್ಶನ ಇರಲಿ ಎಂದು ಕೋರಿದರು.ಮೈಸೂರಿನಲ್ಲಿ ವಾತ್ಸಲ್ಯ ಮನೆ ನೋಡಿ ತಾವು ತುಂಬಾ ಸಂತೋಷಪಟ್ಟಿರುವುದಾಗಿ ಹೆಗ್ಗಡೆಯವರು ತಿಳಿಸಿದರು. ಸ್ವಾಮೀಜಿಯವರು ಸಾನ್ನಿಧ್ಯ ಸರತಿ ಸಾಲಿನ ವ್ಯಸಸ್ಥೆ ಹಾಗೂ ವಸ್ತುಸಂಗ್ರಾಹಾಲಯವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್.ಎಸ್., ರಾಜ್ಯದಲ್ಲಿ ಐವತ್ತಮೂರು ಲಕ್ಷ ಕುಟುಂಬಗಳು ಫಲಾನುಭವಿಗಳಾಗಿದ್ದು ಆರ್ಥಿಕ ಸಬಲೀಕರಣದೊಂದಿಗೆ ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ ಎಂದರು. ಇಪ್ಪತ್ತು ಸಾವಿರ ವಾತ್ಸಲ್ಯ ಫಲಾನುಭವಿಗಳಿದ್ದು 2094ಮಂದಿಗೆ ಪೌಷ್ಠಿಕ ಆಹಾರ ಕಿಟ್ ವಿತರಿಸಲಾಗಿದೆ. 18500 ಮಂದಿ ಅಸಹಾಯಕರಿಗೆ ವಾತ್ಸಲ್ಯ ಕಿಟ್ ಮೂಲಕ ಪಾತ್ರೆಗಳು, ಹಾಸಿಗೆ, ಹೊದಿಕೆ ಮೊದಲಾದ ಮೂಲಭುತ ಸೌಕರ್ಯಗಳನ್ನು ಒದಗಿಸಲಾಗಿದೆ.ಒಂದು ಸಾವಿರ ವಾತ್ಸಲ್ಯ ಮನೆಗಳನ್ನು ನಿರ್ಗತಿಕರಿಗೆ ನೀಡಲು ಉದ್ದೇಶಿಸಿದ್ದು ವಾತ್ಸಲ್ಯ ಮನೆಗಳಿಗೆ ಈಗಾಗಲೇ ಹತ್ತು ಕೋಟಿ ಎಂಬೈತ್ತೆಒಂದು ಲಕ್ಷದ ಹದಿನಾಲ್ಕು ಸಾವಿರ ರೂ. ವಿನಿಯೋಗಿಸಲಾಗಿದೆ ಎಂದರು.

ಹೇಮಾವತಿ ವೀ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್, ಸೋನಿಯಾ ಯಶೋವರ್ಮ, ಗ್ರಾಮಾಭಿವೃದ್ಧಿ ಯೋಜನೆಯ ಆಡಳಿತ ಮಂಡಳಿ ಸದಸ್ಯ ಶ್ಯಾಮ್‌ಭಟ್ ಕೆ. ಉಪಸ್ಥಿತರಿದ್ದರು. ಉಜಿರೆಯ ಎಸ್.ಡಿ.ಎಮ್. ಕಾಲೇಜಿನ ಸಂಸ್ಕೃತ ಉಪನ್ಯಾಸಕ ಡಾ. ಶ್ರೀಧರ ಭಟ್ ಸ್ವಾಗತಿಸಿದರು. ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಮನೋಜ್ ಮಿನೆಜಸ್ ಧನ್ಯವಾದವಿತ್ತರು.ಪೂಜಾ ಪ್ರಶಾಂತ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

Spread the love
  • Related Posts

    ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ

    ಬೆಳ್ತಂಗಡಿ: ತಾಲೂಕಿನ ಪ್ರಮುಖ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳನ್ನು ಹೊಂದಿರುವ ಮಿತ್ತಬಾಗಿಲು, ಮಲವಂತಿಗೆ ಮತ್ತು ಕಡಿರುದ್ಯಾವರ ಗ್ರಾಮಗಳಲ್ಲಿ ಪದೇಪದೇ ವಿದ್ಯುತ್ ವ್ಯತ್ಯಯ ಉಂಟಾಗುತ್ತಿರುವುದು ಗ್ರಾಮಸ್ಥರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಕಾಜೂರು ದರ್ಗಾ ಶರೀಫ್, ಶ್ರೀ ಕ್ಷೇತ್ರ ಕೊಲ್ಲಿ ದುರ್ಗಾಪರಮೇಶ್ವರಿ ದೇವಸ್ಥಾನ ಸೇರಿದಂತೆ…

    Spread the love

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್

    ಬೆಳ್ತಂಗಡಿ: ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರ, ಕೃಷಿ ಪರಂಪರೆ ಹಾಗೂ ಗ್ರಾಮೀಣ ಬದುಕಿನ ವೈಶಿಷ್ಟ್ಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್…

    Spread the love

    You Missed

    ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ

    • By admin
    • August 24, 2026
    • 4 views
    ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್

    • By admin
    • August 23, 2026
    • 7 views
    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್

    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    • By admin
    • August 20, 2026
    • 8 views
    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    • By admin
    • August 20, 2026
    • 14 views
    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 10 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 14 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ