ಧರ್ಮಸ್ಥಳದ ಧೃತಿಯ ವೈದ್ಯಕೀಯ ಚಿಕಿತ್ಸೆಗೆ ಬೇಕಿದೆ ತುರ್ತು ಆರ್ಥಿಕ ನೆರವು

ಮಂಗಳೂರು: ಧರ್ಮಸ್ಥಳ ಗ್ರಾಮದ ಅಗುಳೆ ಬೈಲು ನಿವಾಸಿ ದಿನೇಶ್ ಹಾಗೂ ಭಾರತಿ ದಂಪತಿಯ ಪುತ್ರಿ ಧೃತಿ ರಕ್ತ ಕಣಗಳ ಕೊರತೆಯ ಕಾಯಿಲೆಯಿಂದ ಬಳಲುತ್ತಿರುವ ಬಾಲಕಿಗೆ ಆರ್ಥಿಕ ನೆರವಿನ ಆಸರೆ ಬೇಕಿದೆ

ರಕ್ತ ಹೀನತೆಯಿಂದ ಬಳಲಿದ ಮಗಳ ಸಂಕಟ ನೋಡಲಾಗದೇ ಆಕೆಗೆ ಚಿಕಿತ್ಸೆ ಕೊಡಿಸಲು ಸರಕಾರಿ, ಖಾಸಗಿ ಆಸ್ಪತ್ರೆಗಳಿಗೆ ಅಲೆದರೂ ಗುಣಮುಖಳಾಗಿಲ್ಲ ಈ ಬಾಲೆ,

ಬಾಲಕಿಯನ್ನು ಪರೀಕ್ಷಿಸಿದ ವೈದ್ಯರು, ಹೆಚ್ಚಿನ ಚಿಕಿತ್ಸೆ ನೀಡಿದಲ್ಲಿ ಗುಣಮುಖಳನ್ನಾಗಿಸಬಹುದು, ಅದಕ್ಕಾಗಿ ಲಕ್ಷಾಂತರ ರೂಪಾಯಿ ವ್ಯಯವಾಗುತ್ತದೆ ಎಂದಿದ್ದಾರೆ.

ಬಡ ಕುಟುಂಬದಲ್ಲಿರುವ ಈ ದಂಪತಿಗಳು ದಿನಾ ಕೂಲಿ ಕೆಲಸಗಳನ್ನು ಮಾಡಿ, ಅಷ್ಟೊಂದು ಹಣ ಎಲ್ಲಿಂದ ಹೊಂದಿಸುವುದು ಎಂದು ಕಂಗಾಲಾಗಿದ್ದಾರೆ.

ಧೃತಿ 4 ತಿಂಗಳ ಮಗುವಿದ್ದಾಗಲೇ ತಿಂಗಳಿಗೊಮ್ಮ ಜ್ವರ ಬರುತ್ತಿತ್ತು ಚಿಕಿತ್ಸೆ ನೀಡಿದಾಗ ಕಡಿಮೆಯಾಗುತ್ತಿತ್ತು. ಆದರೆ ಈ ಒಂದು ವರ್ಷದಿಂದ ಬಿಳಿರಕ್ತ ಕಣ ಹಾಗೂ ಕೆಂಪು ರಕ್ತ ಕಣಗಳು ಕಡಿಮೆಯಾಗುತ್ತಿವೆ. ಅದು ಯಾವ ಕ್ಷಣದಲ್ಲಿ ಕಡಿಮೆ ಆಗುತ್ತೆ ಎಂಬುದು ತಿಳಿಯುವುದಿಲ್ಲ ವಾರಕ್ಕೊಮ್ಮೆ ಈ ಸಮಸ್ಯೆ ಈ ಮಗುವನ್ನು ಕಾಡುತ್ತಿದ್ದು, ಚಿಕಿತ್ಸೆಗೆ ಕಡಿಮೆ ಎಂದರೂ ಪ್ರತಿ ತಿಂಗಳಿಗೆ 50 ಸಾವಿರಕ್ಕಿಂತಲೂ ಅಧಿಕ ಹಣ ಬೇಕಾಗುತ್ತದೆ.

ತಿಂಗಳಿಗೆ 2ಬಾರಿಯಾದರೂ ಚಿಕಿತ್ಸೆ ಕೊಡಿಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ದಿನ ಕಳೆದಂತೆ ಮಗುವಿನ ಆರೋಗ್ಯ ಸ್ಥಿತಿ ಜಟಿಲವಾಗುತ್ತಿದೆ. ಈ ಸಂಕಟದ ಜೊತೆ ಮತ್ತೊಂದು ನೋವು ಆ ಮಗುವನ್ನು ಭಾಧಿಸುತ್ತಿದ್ದು, ಇತ್ತೀಚೆಗೆ ಮೂಗಿನಿಂದ ಅಥವಾ ಬಾಯಿಯಿಂದ ರಕ್ತ ಸುರಿಯಲು ಪ್ರಾರಂಭವಾಗಿದೆ ಇಂತಹ ಪರಿಸ್ಥಿತಿಯಲ್ಲಿ ತಕ್ಷಣ ಚಿಕಿತ್ಸೆಯ ಅಗತ್ಯ ಇದ್ದು, ಒಂದು ವೇಳೆ ಸೂಕ್ತ ಚಿಕಿತ್ಸೆ ಮಾಡದಿದ್ದಲ್ಲಿ ಮಗುವಿನ ಆರೋಗ್ಯ ಮತ್ತಷ್ಟು ಹಹದಗೆಡುವ ಸಾಧ್ಯತೆಯಿದೆ

ವೈದ್ಯರ ಸಲಹೆಯಂತೆ ಬೆಂಗಳೂರಿಗೆ ತೆರಳಿ ಮಗುವನ್ನು ಗುಣಪಡಿಸಬೇಕೆಂದರೆ ಈ ಬಡ ಕುಟುಂಬಕ್ಕೆ ಆರ್ಥಿಕ ಸಮಸ್ಯೆ ಏದುರಾಗಿದೆ. ಬೆಂಗಳೂರಿನಲ್ಲಿ ನಡೆಸುವ ಚಿಕಿತ್ಸೆಗೆ ಅಂದಾಜು 25ರಿಂದ 30ಲಕ್ಷ ದೊಡ್ಡ ಮೊತ್ತದ ಅವಶ್ಯಕತೆಯಿದೆ. ಈ ದೊಡ್ಡ ಮೊತ್ತವನ್ನು ಭರಿಸಲಾರದೆ ಮಗುವಿನ ತಂದೆ, ತಾಯಿ ಕಂಗಾಲಾಗಿದ್ದಾರೆ.

ಈ ಪುಟ್ಟ ಮಗುವಿನ ಆರೋಗ್ಯದ ಸಮಸ್ಯೆ ಪರಿಹರಿಸಲು ಕೊಡುಗೈ ದಾನಿಗಳ ಸಹಾಯ ಅತ್ಯಗತ್ಯವಾಗಿದೆ. ಈ ಮಗುವಿನ ವೈದ್ಯಕೀಯ ಚಿಕಿತ್ಸೆಗೆ ಸಹಕರಿಸಿ ಬಡ ಕುಟುಂಬಕ್ಕೆ ಆಸರೆಯಾಗಿ ಮಗುವಿಗೆ ಶೀಘ್ರದಲ್ಲಿಯೇ ಚಿಕಿತ್ಸೆ ನೀಡುವ ಸಲುವಾಗಿ ಧನ ಸಹಾಯ ಮಾಡುವವರು ಈ ಕೆಳಕಂಡ ಖಾತೆಗೆ ಹಣ ಜಮೆ ಮಾಡಬಹುದಾಗಿದೆ.

ಬ್ಯಾಂಕ್: ಸಿಂಡಿಕೇಟ್ ಬ್ಯಾಂಕ್, ಧರ್ಮಸ್ಥಳ ಶಾಖೆ ದಿನೇಶ್ ಧರ್ಮಸ್ಥಳ
ಖಾತೆ ಸಂಖ್ಯೆ: 02462200015461
IFSC CODE: SYNB0000246
ಸಂಪರ್ಕ ಸಂಖ್ಯೆ:9008995557

Spread the love
  • Related Posts

    ಬೆಳ್ತಂಗಡಿ ಪೊಲೀಸ್ ಇನ್ಸ್ಪೆಕ್ಟರ್ BG ಸುಬ್ಬಾಪುರಮಠ ವರ್ಗಾವಣೆ

    ಬೆಳ್ತಂಗಡಿ: ಬೆಳ್ತಂಗಡಿಯ ಪೋಲೀಸ್ ಇನ್ಸ್ಪೆಕ್ಟರ್ ಬಸವಲಿಂಗಯ್ಯ ಜಿ. ಸುಬ್ಬಾಪುರಮಠ ಸೇರಿದಂತೆ ರಾಜ್ಯದ 129 ಪೋಲೀಸ್ ಇನ್ಸ್ಪೆಕ್ಟರ್ ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಹಲವು ವರ್ಷಗಳಿಂದ ಉತ್ತಮ ಸೇವೆ ಸಲ್ಲಿಸಿದ ಪೋಲೀಸ್ ಇನ್ಸ್ಪೆಕ್ಟರ್ ಬಸವಲಿಂಗಯ್ಯ ಜಿ ಸುಬ್ಬಾಪುರಮಠ…

    Spread the love

    ಕರಾವಳಿಯ ಜಾನಪದ ಕ್ರೀಡೆಯನ್ನಾಧರಿಸಿದ “ವೀರ ಕಂಬಳ” ಚಿತ್ರ ಫೆ.27ಕ್ಕೆ ಬಿಡುಗಡೆ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರು

    ಮಂಗಳೂರು: ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ, ಕರಾವಳಿಯ ಜಾನಪದ ಕ್ರೀಡೆ ಕಂಬಳದ ಹಿನ್ನೆಲೆಯುಳ್ಳ ‘ವೀರ ಕಂಬಳ’ ಚಿತ್ರವು ಫೆಬ್ರವರಿ 27, 2026 ರಂದು ತೆರೆಗೆ ಬರಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಈ ಚಿತ್ರದಲ್ಲಿ…

    Spread the love

    You Missed

    ಬೆಳ್ತಂಗಡಿ ಪೊಲೀಸ್ ಇನ್ಸ್ಪೆಕ್ಟರ್ BG ಸುಬ್ಬಾಪುರಮಠ ವರ್ಗಾವಣೆ

    • By admin
    • February 11, 2026
    • 676 views
    ಬೆಳ್ತಂಗಡಿ ಪೊಲೀಸ್ ಇನ್ಸ್ಪೆಕ್ಟರ್ BG ಸುಬ್ಬಾಪುರಮಠ ವರ್ಗಾವಣೆ

    ಕರಾವಳಿಯ ಜಾನಪದ ಕ್ರೀಡೆಯನ್ನಾಧರಿಸಿದ “ವೀರ ಕಂಬಳ” ಚಿತ್ರ ಫೆ.27ಕ್ಕೆ ಬಿಡುಗಡೆ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರು

    • By admin
    • February 11, 2026
    • 272 views
    ಕರಾವಳಿಯ ಜಾನಪದ ಕ್ರೀಡೆಯನ್ನಾಧರಿಸಿದ “ವೀರ ಕಂಬಳ” ಚಿತ್ರ ಫೆ.27ಕ್ಕೆ ಬಿಡುಗಡೆ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರು

    ಬೆಳ್ತಂಗಡಿ ಚಿರತೆ ಹಾವಳಿ ಕ್ರಮಕ್ಕೆ ಒತ್ತಾಯಿಸಿ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ದಿಂದ ಮನವಿ

    • By admin
    • February 10, 2026
    • 97 views
    ಬೆಳ್ತಂಗಡಿ ಚಿರತೆ ಹಾವಳಿ ಕ್ರಮಕ್ಕೆ ಒತ್ತಾಯಿಸಿ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ದಿಂದ ಮನವಿ

    ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರ ಭೇಟಿ

    • By admin
    • February 10, 2026
    • 44 views
    ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರ ಭೇಟಿ

    ಚಿರತೆ ದಾಳಿ ಕೂಲಿಕಾರ್ಮಿಕರಿಗೆ ಗಾಯ ಆನೆಹಾವಳಿಯ ಬಳಿಕ ಇದೀಗ ಚಿರತೆ ಕಾಟಕ್ಕೆ ಬೆಚ್ಚಿಬಿದ್ದ ಕಾರ್ಮಿಕರು

    • By admin
    • February 9, 2026
    • 81 views
    ಚಿರತೆ ದಾಳಿ ಕೂಲಿಕಾರ್ಮಿಕರಿಗೆ ಗಾಯ ಆನೆಹಾವಳಿಯ ಬಳಿಕ ಇದೀಗ ಚಿರತೆ ಕಾಟಕ್ಕೆ ಬೆಚ್ಚಿಬಿದ್ದ ಕಾರ್ಮಿಕರು

    ಶ್ರೀ ಕ್ಷೇತ್ರ ಮೊಂಟೆತ್ತಡ್ಕದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    • By admin
    • February 8, 2026
    • 55 views
    ಶ್ರೀ ಕ್ಷೇತ್ರ ಮೊಂಟೆತ್ತಡ್ಕದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ