ಧರ್ಮಸ್ಥಳದ ಧೃತಿಯ ವೈದ್ಯಕೀಯ ಚಿಕಿತ್ಸೆಗೆ ಬೇಕಿದೆ ತುರ್ತು ಆರ್ಥಿಕ ನೆರವು

ಮಂಗಳೂರು: ಧರ್ಮಸ್ಥಳ ಗ್ರಾಮದ ಅಗುಳೆ ಬೈಲು ನಿವಾಸಿ ದಿನೇಶ್ ಹಾಗೂ ಭಾರತಿ ದಂಪತಿಯ ಪುತ್ರಿ ಧೃತಿ ರಕ್ತ ಕಣಗಳ ಕೊರತೆಯ ಕಾಯಿಲೆಯಿಂದ ಬಳಲುತ್ತಿರುವ ಬಾಲಕಿಗೆ ಆರ್ಥಿಕ ನೆರವಿನ ಆಸರೆ ಬೇಕಿದೆ

ರಕ್ತ ಹೀನತೆಯಿಂದ ಬಳಲಿದ ಮಗಳ ಸಂಕಟ ನೋಡಲಾಗದೇ ಆಕೆಗೆ ಚಿಕಿತ್ಸೆ ಕೊಡಿಸಲು ಸರಕಾರಿ, ಖಾಸಗಿ ಆಸ್ಪತ್ರೆಗಳಿಗೆ ಅಲೆದರೂ ಗುಣಮುಖಳಾಗಿಲ್ಲ ಈ ಬಾಲೆ,

ಬಾಲಕಿಯನ್ನು ಪರೀಕ್ಷಿಸಿದ ವೈದ್ಯರು, ಹೆಚ್ಚಿನ ಚಿಕಿತ್ಸೆ ನೀಡಿದಲ್ಲಿ ಗುಣಮುಖಳನ್ನಾಗಿಸಬಹುದು, ಅದಕ್ಕಾಗಿ ಲಕ್ಷಾಂತರ ರೂಪಾಯಿ ವ್ಯಯವಾಗುತ್ತದೆ ಎಂದಿದ್ದಾರೆ.

ಬಡ ಕುಟುಂಬದಲ್ಲಿರುವ ಈ ದಂಪತಿಗಳು ದಿನಾ ಕೂಲಿ ಕೆಲಸಗಳನ್ನು ಮಾಡಿ, ಅಷ್ಟೊಂದು ಹಣ ಎಲ್ಲಿಂದ ಹೊಂದಿಸುವುದು ಎಂದು ಕಂಗಾಲಾಗಿದ್ದಾರೆ.

ಧೃತಿ 4 ತಿಂಗಳ ಮಗುವಿದ್ದಾಗಲೇ ತಿಂಗಳಿಗೊಮ್ಮ ಜ್ವರ ಬರುತ್ತಿತ್ತು ಚಿಕಿತ್ಸೆ ನೀಡಿದಾಗ ಕಡಿಮೆಯಾಗುತ್ತಿತ್ತು. ಆದರೆ ಈ ಒಂದು ವರ್ಷದಿಂದ ಬಿಳಿರಕ್ತ ಕಣ ಹಾಗೂ ಕೆಂಪು ರಕ್ತ ಕಣಗಳು ಕಡಿಮೆಯಾಗುತ್ತಿವೆ. ಅದು ಯಾವ ಕ್ಷಣದಲ್ಲಿ ಕಡಿಮೆ ಆಗುತ್ತೆ ಎಂಬುದು ತಿಳಿಯುವುದಿಲ್ಲ ವಾರಕ್ಕೊಮ್ಮೆ ಈ ಸಮಸ್ಯೆ ಈ ಮಗುವನ್ನು ಕಾಡುತ್ತಿದ್ದು, ಚಿಕಿತ್ಸೆಗೆ ಕಡಿಮೆ ಎಂದರೂ ಪ್ರತಿ ತಿಂಗಳಿಗೆ 50 ಸಾವಿರಕ್ಕಿಂತಲೂ ಅಧಿಕ ಹಣ ಬೇಕಾಗುತ್ತದೆ.

ತಿಂಗಳಿಗೆ 2ಬಾರಿಯಾದರೂ ಚಿಕಿತ್ಸೆ ಕೊಡಿಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ದಿನ ಕಳೆದಂತೆ ಮಗುವಿನ ಆರೋಗ್ಯ ಸ್ಥಿತಿ ಜಟಿಲವಾಗುತ್ತಿದೆ. ಈ ಸಂಕಟದ ಜೊತೆ ಮತ್ತೊಂದು ನೋವು ಆ ಮಗುವನ್ನು ಭಾಧಿಸುತ್ತಿದ್ದು, ಇತ್ತೀಚೆಗೆ ಮೂಗಿನಿಂದ ಅಥವಾ ಬಾಯಿಯಿಂದ ರಕ್ತ ಸುರಿಯಲು ಪ್ರಾರಂಭವಾಗಿದೆ ಇಂತಹ ಪರಿಸ್ಥಿತಿಯಲ್ಲಿ ತಕ್ಷಣ ಚಿಕಿತ್ಸೆಯ ಅಗತ್ಯ ಇದ್ದು, ಒಂದು ವೇಳೆ ಸೂಕ್ತ ಚಿಕಿತ್ಸೆ ಮಾಡದಿದ್ದಲ್ಲಿ ಮಗುವಿನ ಆರೋಗ್ಯ ಮತ್ತಷ್ಟು ಹಹದಗೆಡುವ ಸಾಧ್ಯತೆಯಿದೆ

ವೈದ್ಯರ ಸಲಹೆಯಂತೆ ಬೆಂಗಳೂರಿಗೆ ತೆರಳಿ ಮಗುವನ್ನು ಗುಣಪಡಿಸಬೇಕೆಂದರೆ ಈ ಬಡ ಕುಟುಂಬಕ್ಕೆ ಆರ್ಥಿಕ ಸಮಸ್ಯೆ ಏದುರಾಗಿದೆ. ಬೆಂಗಳೂರಿನಲ್ಲಿ ನಡೆಸುವ ಚಿಕಿತ್ಸೆಗೆ ಅಂದಾಜು 25ರಿಂದ 30ಲಕ್ಷ ದೊಡ್ಡ ಮೊತ್ತದ ಅವಶ್ಯಕತೆಯಿದೆ. ಈ ದೊಡ್ಡ ಮೊತ್ತವನ್ನು ಭರಿಸಲಾರದೆ ಮಗುವಿನ ತಂದೆ, ತಾಯಿ ಕಂಗಾಲಾಗಿದ್ದಾರೆ.

ಈ ಪುಟ್ಟ ಮಗುವಿನ ಆರೋಗ್ಯದ ಸಮಸ್ಯೆ ಪರಿಹರಿಸಲು ಕೊಡುಗೈ ದಾನಿಗಳ ಸಹಾಯ ಅತ್ಯಗತ್ಯವಾಗಿದೆ. ಈ ಮಗುವಿನ ವೈದ್ಯಕೀಯ ಚಿಕಿತ್ಸೆಗೆ ಸಹಕರಿಸಿ ಬಡ ಕುಟುಂಬಕ್ಕೆ ಆಸರೆಯಾಗಿ ಮಗುವಿಗೆ ಶೀಘ್ರದಲ್ಲಿಯೇ ಚಿಕಿತ್ಸೆ ನೀಡುವ ಸಲುವಾಗಿ ಧನ ಸಹಾಯ ಮಾಡುವವರು ಈ ಕೆಳಕಂಡ ಖಾತೆಗೆ ಹಣ ಜಮೆ ಮಾಡಬಹುದಾಗಿದೆ.

ಬ್ಯಾಂಕ್: ಸಿಂಡಿಕೇಟ್ ಬ್ಯಾಂಕ್, ಧರ್ಮಸ್ಥಳ ಶಾಖೆ ದಿನೇಶ್ ಧರ್ಮಸ್ಥಳ
ಖಾತೆ ಸಂಖ್ಯೆ: 02462200015461
IFSC CODE: SYNB0000246
ಸಂಪರ್ಕ ಸಂಖ್ಯೆ:9008995557

Spread the love
  • Related Posts

    “ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SS

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ರಿ ಸಕಲೇಶಪುರ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಸನ ಜಿಲ್ಲೆ, 2054ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಸಕಲೇಶಪುರ ಇದರ ವತಿಯಿಂದ ನಡೆಯುತ್ತಿರುವ ಮದ್ಯವರ್ಜನ ಶಿಬಿರದ ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ…

    Spread the love

    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    ಬೆಳ್ತಂಗಡಿ: ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮಹಿಳೆಯೊಬ್ಬರು ದುರ್ಮರಣ ಹೊಂದಿರುವಂತಹ ಘಟನೆ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಬಳಿ ಮೇ.17 ರಂದು ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಅನಿಲ್ ಪಾರ್ಮ್ ನ ಮಾಲೀಕ ಅನಿಲ್ ಭಟ್(45) ಅವರ…

    Spread the love

    You Missed

    “ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SS

    • By admin
    • May 20, 2026
    • 56 views
    “ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SS

    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    • By admin
    • May 17, 2026
    • 2356 views
    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    ಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,

    • By admin
    • May 16, 2026
    • 620 views
    ಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    • By admin
    • May 12, 2026
    • 238 views
    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    ರಡ್ಡ್ ಮಂಡೆಯ ಹಾವಿಗೆ ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    • By admin
    • May 12, 2026
    • 75 views
    ರಡ್ಡ್ ಮಂಡೆಯ ಹಾವಿಗೆ  ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ

    • By admin
    • May 12, 2026
    • 53 views
    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ