ಧರ್ಮಸ್ಥಳದ ಧೃತಿಯ ವೈದ್ಯಕೀಯ ಚಿಕಿತ್ಸೆಗೆ ಬೇಕಿದೆ ತುರ್ತು ಆರ್ಥಿಕ ನೆರವು

ಮಂಗಳೂರು: ಧರ್ಮಸ್ಥಳ ಗ್ರಾಮದ ಅಗುಳೆ ಬೈಲು ನಿವಾಸಿ ದಿನೇಶ್ ಹಾಗೂ ಭಾರತಿ ದಂಪತಿಯ ಪುತ್ರಿ ಧೃತಿ ರಕ್ತ ಕಣಗಳ ಕೊರತೆಯ ಕಾಯಿಲೆಯಿಂದ ಬಳಲುತ್ತಿರುವ ಬಾಲಕಿಗೆ ಆರ್ಥಿಕ ನೆರವಿನ ಆಸರೆ ಬೇಕಿದೆ

ರಕ್ತ ಹೀನತೆಯಿಂದ ಬಳಲಿದ ಮಗಳ ಸಂಕಟ ನೋಡಲಾಗದೇ ಆಕೆಗೆ ಚಿಕಿತ್ಸೆ ಕೊಡಿಸಲು ಸರಕಾರಿ, ಖಾಸಗಿ ಆಸ್ಪತ್ರೆಗಳಿಗೆ ಅಲೆದರೂ ಗುಣಮುಖಳಾಗಿಲ್ಲ ಈ ಬಾಲೆ,

ಬಾಲಕಿಯನ್ನು ಪರೀಕ್ಷಿಸಿದ ವೈದ್ಯರು, ಹೆಚ್ಚಿನ ಚಿಕಿತ್ಸೆ ನೀಡಿದಲ್ಲಿ ಗುಣಮುಖಳನ್ನಾಗಿಸಬಹುದು, ಅದಕ್ಕಾಗಿ ಲಕ್ಷಾಂತರ ರೂಪಾಯಿ ವ್ಯಯವಾಗುತ್ತದೆ ಎಂದಿದ್ದಾರೆ.

ಬಡ ಕುಟುಂಬದಲ್ಲಿರುವ ಈ ದಂಪತಿಗಳು ದಿನಾ ಕೂಲಿ ಕೆಲಸಗಳನ್ನು ಮಾಡಿ, ಅಷ್ಟೊಂದು ಹಣ ಎಲ್ಲಿಂದ ಹೊಂದಿಸುವುದು ಎಂದು ಕಂಗಾಲಾಗಿದ್ದಾರೆ.

ಧೃತಿ 4 ತಿಂಗಳ ಮಗುವಿದ್ದಾಗಲೇ ತಿಂಗಳಿಗೊಮ್ಮ ಜ್ವರ ಬರುತ್ತಿತ್ತು ಚಿಕಿತ್ಸೆ ನೀಡಿದಾಗ ಕಡಿಮೆಯಾಗುತ್ತಿತ್ತು. ಆದರೆ ಈ ಒಂದು ವರ್ಷದಿಂದ ಬಿಳಿರಕ್ತ ಕಣ ಹಾಗೂ ಕೆಂಪು ರಕ್ತ ಕಣಗಳು ಕಡಿಮೆಯಾಗುತ್ತಿವೆ. ಅದು ಯಾವ ಕ್ಷಣದಲ್ಲಿ ಕಡಿಮೆ ಆಗುತ್ತೆ ಎಂಬುದು ತಿಳಿಯುವುದಿಲ್ಲ ವಾರಕ್ಕೊಮ್ಮೆ ಈ ಸಮಸ್ಯೆ ಈ ಮಗುವನ್ನು ಕಾಡುತ್ತಿದ್ದು, ಚಿಕಿತ್ಸೆಗೆ ಕಡಿಮೆ ಎಂದರೂ ಪ್ರತಿ ತಿಂಗಳಿಗೆ 50 ಸಾವಿರಕ್ಕಿಂತಲೂ ಅಧಿಕ ಹಣ ಬೇಕಾಗುತ್ತದೆ.

ತಿಂಗಳಿಗೆ 2ಬಾರಿಯಾದರೂ ಚಿಕಿತ್ಸೆ ಕೊಡಿಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ದಿನ ಕಳೆದಂತೆ ಮಗುವಿನ ಆರೋಗ್ಯ ಸ್ಥಿತಿ ಜಟಿಲವಾಗುತ್ತಿದೆ. ಈ ಸಂಕಟದ ಜೊತೆ ಮತ್ತೊಂದು ನೋವು ಆ ಮಗುವನ್ನು ಭಾಧಿಸುತ್ತಿದ್ದು, ಇತ್ತೀಚೆಗೆ ಮೂಗಿನಿಂದ ಅಥವಾ ಬಾಯಿಯಿಂದ ರಕ್ತ ಸುರಿಯಲು ಪ್ರಾರಂಭವಾಗಿದೆ ಇಂತಹ ಪರಿಸ್ಥಿತಿಯಲ್ಲಿ ತಕ್ಷಣ ಚಿಕಿತ್ಸೆಯ ಅಗತ್ಯ ಇದ್ದು, ಒಂದು ವೇಳೆ ಸೂಕ್ತ ಚಿಕಿತ್ಸೆ ಮಾಡದಿದ್ದಲ್ಲಿ ಮಗುವಿನ ಆರೋಗ್ಯ ಮತ್ತಷ್ಟು ಹಹದಗೆಡುವ ಸಾಧ್ಯತೆಯಿದೆ

ವೈದ್ಯರ ಸಲಹೆಯಂತೆ ಬೆಂಗಳೂರಿಗೆ ತೆರಳಿ ಮಗುವನ್ನು ಗುಣಪಡಿಸಬೇಕೆಂದರೆ ಈ ಬಡ ಕುಟುಂಬಕ್ಕೆ ಆರ್ಥಿಕ ಸಮಸ್ಯೆ ಏದುರಾಗಿದೆ. ಬೆಂಗಳೂರಿನಲ್ಲಿ ನಡೆಸುವ ಚಿಕಿತ್ಸೆಗೆ ಅಂದಾಜು 25ರಿಂದ 30ಲಕ್ಷ ದೊಡ್ಡ ಮೊತ್ತದ ಅವಶ್ಯಕತೆಯಿದೆ. ಈ ದೊಡ್ಡ ಮೊತ್ತವನ್ನು ಭರಿಸಲಾರದೆ ಮಗುವಿನ ತಂದೆ, ತಾಯಿ ಕಂಗಾಲಾಗಿದ್ದಾರೆ.

ಈ ಪುಟ್ಟ ಮಗುವಿನ ಆರೋಗ್ಯದ ಸಮಸ್ಯೆ ಪರಿಹರಿಸಲು ಕೊಡುಗೈ ದಾನಿಗಳ ಸಹಾಯ ಅತ್ಯಗತ್ಯವಾಗಿದೆ. ಈ ಮಗುವಿನ ವೈದ್ಯಕೀಯ ಚಿಕಿತ್ಸೆಗೆ ಸಹಕರಿಸಿ ಬಡ ಕುಟುಂಬಕ್ಕೆ ಆಸರೆಯಾಗಿ ಮಗುವಿಗೆ ಶೀಘ್ರದಲ್ಲಿಯೇ ಚಿಕಿತ್ಸೆ ನೀಡುವ ಸಲುವಾಗಿ ಧನ ಸಹಾಯ ಮಾಡುವವರು ಈ ಕೆಳಕಂಡ ಖಾತೆಗೆ ಹಣ ಜಮೆ ಮಾಡಬಹುದಾಗಿದೆ.

ಬ್ಯಾಂಕ್: ಸಿಂಡಿಕೇಟ್ ಬ್ಯಾಂಕ್, ಧರ್ಮಸ್ಥಳ ಶಾಖೆ ದಿನೇಶ್ ಧರ್ಮಸ್ಥಳ
ಖಾತೆ ಸಂಖ್ಯೆ: 02462200015461
IFSC CODE: SYNB0000246
ಸಂಪರ್ಕ ಸಂಖ್ಯೆ:9008995557

Spread the love
  • Related Posts

    “ಪ್ರಾಣಿಗಳ ಮೇಲೆ ದಯೆ ಇರಲಿ”… ಮಕ್ಕಳ ಬದುಕಿನ ಮೇಲೂ ಕಾಳಜಿ ಇರಲಿ! ಗ್ರಾಮೀಣ ಪ್ರದೇಶದ ಮಕ್ಕಳ ಪಯಣ ಪ್ರಾಣಕ್ಕೆ ಸಂಚಕಾರ ಆಗದಿರಲಿ

    🖊️• ವರದಿ: ರಾಜೇಶ್ ಎಂ ಕಾನರ್ಪ ಗ್ರಾಮೀಣ ಮಕ್ಕಳ ನಿತ್ಯದ ನರಕಯಾತನೆಗೆ ಕೊನೆಯೆಲ್ಲಿ? ಮಳೆ ಸುರಿಯುತ್ತಿದೆ, ರಸ್ತೆ ಒದ್ದೆಯಾಗಿದೆ ವಾಹನಗಳು ವೇಗವಾಗಿ ಸಂಚರಿಸುತ್ತಿವೆ. ಇಂತಹ ರಸ್ತೆಯಲ್ಲಿ ಪ್ರತಿದಿನ ಶಾಲೆಗೆ ಹೋಗುವ ಗ್ರಾಮೀಣ ಮಕ್ಕಳ ಪರಿಸ್ಥಿತಿ ಹೇಗಿರಬಹುದು ಎಂಬುದನ್ನು ಒಮ್ಮೆಯಾದರೂ ಯೋಚಿಸಿದ್ದೇವೆಯೇ? “ಪ್ರಾಣಿಗಳ…

    Spread the love

    ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ವಿಶೇಷ ಸಭೆ

    ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘ (ರಿ.) ವತಿಯಿಂದ ವಿಶೇಷ ಸಭೆಯು ಸುಳ್ಯ ವಕೀಲರ ಭವನದಲ್ಲಿ ಜಿಲ್ಲಾ ಅಧ್ಯಕ್ಷರಾದ ರಿಚರ್ಡ್ ಡಿ. ಕೊಸ್ತಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಯ ಮುಂದಿನ ರೂಪುರೇಷೆಗಳ ಕುರಿತು ವಿಸ್ತೃತವಾಗಿ…

    Spread the love

    You Missed

    “ಪ್ರಾಣಿಗಳ ಮೇಲೆ ದಯೆ ಇರಲಿ”… ಮಕ್ಕಳ ಬದುಕಿನ ಮೇಲೂ ಕಾಳಜಿ ಇರಲಿ! ಗ್ರಾಮೀಣ ಪ್ರದೇಶದ ಮಕ್ಕಳ ಪಯಣ ಪ್ರಾಣಕ್ಕೆ ಸಂಚಕಾರ ಆಗದಿರಲಿ

    • By admin
    • August 27, 2026
    • 5 views
    “ಪ್ರಾಣಿಗಳ ಮೇಲೆ ದಯೆ ಇರಲಿ”… ಮಕ್ಕಳ ಬದುಕಿನ ಮೇಲೂ ಕಾಳಜಿ ಇರಲಿ! ಗ್ರಾಮೀಣ ಪ್ರದೇಶದ ಮಕ್ಕಳ ಪಯಣ ಪ್ರಾಣಕ್ಕೆ ಸಂಚಕಾರ ಆಗದಿರಲಿ

    ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ವಿಶೇಷ ಸಭೆ

    • By admin
    • August 25, 2026
    • 5 views
    ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ವಿಶೇಷ ಸಭೆ

    “ಆರ್ಥಿಕ, ಸಾಮಾಜಿಕ ಹಾಗೂ ಮಹಿಳಾ ಸಬಲೀಕರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹತ್ತರ ಸಾಧನೆ” “ಉತ್ತಮ ನಾಯಕತ್ವ ಗುಣ ಬೆಳೆಸಿಕೊಂಡು ಒಕ್ಕೂಟಗಳನ್ನು ಪರಿಣಾಮಕಾರಿಯಾಗಿ ಮುನ್ನಡೆಸಿ” : ಡಾ. ನವೀನ್ ಚಂದ್ರ ಶೆಟ್ಟಿ

    • By admin
    • August 25, 2026
    • 5 views
    “ಆರ್ಥಿಕ, ಸಾಮಾಜಿಕ ಹಾಗೂ ಮಹಿಳಾ ಸಬಲೀಕರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹತ್ತರ ಸಾಧನೆ” “ಉತ್ತಮ ನಾಯಕತ್ವ ಗುಣ ಬೆಳೆಸಿಕೊಂಡು ಒಕ್ಕೂಟಗಳನ್ನು ಪರಿಣಾಮಕಾರಿಯಾಗಿ ಮುನ್ನಡೆಸಿ” : ಡಾ. ನವೀನ್ ಚಂದ್ರ ಶೆಟ್ಟಿ

    ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ

    • By admin
    • August 24, 2026
    • 9 views
    ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ

    ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ

    • By admin
    • August 24, 2026
    • 11 views
    ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್

    • By admin
    • August 23, 2026
    • 14 views
    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್