ಧರ್ಮಸ್ಥಳದ ಧೃತಿಯ ವೈದ್ಯಕೀಯ ಚಿಕಿತ್ಸೆಗೆ ಬೇಕಿದೆ ತುರ್ತು ಆರ್ಥಿಕ ನೆರವು

ಮಂಗಳೂರು: ಧರ್ಮಸ್ಥಳ ಗ್ರಾಮದ ಅಗುಳೆ ಬೈಲು ನಿವಾಸಿ ದಿನೇಶ್ ಹಾಗೂ ಭಾರತಿ ದಂಪತಿಯ ಪುತ್ರಿ ಧೃತಿ ರಕ್ತ ಕಣಗಳ ಕೊರತೆಯ ಕಾಯಿಲೆಯಿಂದ ಬಳಲುತ್ತಿರುವ ಬಾಲಕಿಗೆ ಆರ್ಥಿಕ ನೆರವಿನ ಆಸರೆ ಬೇಕಿದೆ

ರಕ್ತ ಹೀನತೆಯಿಂದ ಬಳಲಿದ ಮಗಳ ಸಂಕಟ ನೋಡಲಾಗದೇ ಆಕೆಗೆ ಚಿಕಿತ್ಸೆ ಕೊಡಿಸಲು ಸರಕಾರಿ, ಖಾಸಗಿ ಆಸ್ಪತ್ರೆಗಳಿಗೆ ಅಲೆದರೂ ಗುಣಮುಖಳಾಗಿಲ್ಲ ಈ ಬಾಲೆ,

ಬಾಲಕಿಯನ್ನು ಪರೀಕ್ಷಿಸಿದ ವೈದ್ಯರು, ಹೆಚ್ಚಿನ ಚಿಕಿತ್ಸೆ ನೀಡಿದಲ್ಲಿ ಗುಣಮುಖಳನ್ನಾಗಿಸಬಹುದು, ಅದಕ್ಕಾಗಿ ಲಕ್ಷಾಂತರ ರೂಪಾಯಿ ವ್ಯಯವಾಗುತ್ತದೆ ಎಂದಿದ್ದಾರೆ.

ಬಡ ಕುಟುಂಬದಲ್ಲಿರುವ ಈ ದಂಪತಿಗಳು ದಿನಾ ಕೂಲಿ ಕೆಲಸಗಳನ್ನು ಮಾಡಿ, ಅಷ್ಟೊಂದು ಹಣ ಎಲ್ಲಿಂದ ಹೊಂದಿಸುವುದು ಎಂದು ಕಂಗಾಲಾಗಿದ್ದಾರೆ.

ಧೃತಿ 4 ತಿಂಗಳ ಮಗುವಿದ್ದಾಗಲೇ ತಿಂಗಳಿಗೊಮ್ಮ ಜ್ವರ ಬರುತ್ತಿತ್ತು ಚಿಕಿತ್ಸೆ ನೀಡಿದಾಗ ಕಡಿಮೆಯಾಗುತ್ತಿತ್ತು. ಆದರೆ ಈ ಒಂದು ವರ್ಷದಿಂದ ಬಿಳಿರಕ್ತ ಕಣ ಹಾಗೂ ಕೆಂಪು ರಕ್ತ ಕಣಗಳು ಕಡಿಮೆಯಾಗುತ್ತಿವೆ. ಅದು ಯಾವ ಕ್ಷಣದಲ್ಲಿ ಕಡಿಮೆ ಆಗುತ್ತೆ ಎಂಬುದು ತಿಳಿಯುವುದಿಲ್ಲ ವಾರಕ್ಕೊಮ್ಮೆ ಈ ಸಮಸ್ಯೆ ಈ ಮಗುವನ್ನು ಕಾಡುತ್ತಿದ್ದು, ಚಿಕಿತ್ಸೆಗೆ ಕಡಿಮೆ ಎಂದರೂ ಪ್ರತಿ ತಿಂಗಳಿಗೆ 50 ಸಾವಿರಕ್ಕಿಂತಲೂ ಅಧಿಕ ಹಣ ಬೇಕಾಗುತ್ತದೆ.

ತಿಂಗಳಿಗೆ 2ಬಾರಿಯಾದರೂ ಚಿಕಿತ್ಸೆ ಕೊಡಿಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ದಿನ ಕಳೆದಂತೆ ಮಗುವಿನ ಆರೋಗ್ಯ ಸ್ಥಿತಿ ಜಟಿಲವಾಗುತ್ತಿದೆ. ಈ ಸಂಕಟದ ಜೊತೆ ಮತ್ತೊಂದು ನೋವು ಆ ಮಗುವನ್ನು ಭಾಧಿಸುತ್ತಿದ್ದು, ಇತ್ತೀಚೆಗೆ ಮೂಗಿನಿಂದ ಅಥವಾ ಬಾಯಿಯಿಂದ ರಕ್ತ ಸುರಿಯಲು ಪ್ರಾರಂಭವಾಗಿದೆ ಇಂತಹ ಪರಿಸ್ಥಿತಿಯಲ್ಲಿ ತಕ್ಷಣ ಚಿಕಿತ್ಸೆಯ ಅಗತ್ಯ ಇದ್ದು, ಒಂದು ವೇಳೆ ಸೂಕ್ತ ಚಿಕಿತ್ಸೆ ಮಾಡದಿದ್ದಲ್ಲಿ ಮಗುವಿನ ಆರೋಗ್ಯ ಮತ್ತಷ್ಟು ಹಹದಗೆಡುವ ಸಾಧ್ಯತೆಯಿದೆ

ವೈದ್ಯರ ಸಲಹೆಯಂತೆ ಬೆಂಗಳೂರಿಗೆ ತೆರಳಿ ಮಗುವನ್ನು ಗುಣಪಡಿಸಬೇಕೆಂದರೆ ಈ ಬಡ ಕುಟುಂಬಕ್ಕೆ ಆರ್ಥಿಕ ಸಮಸ್ಯೆ ಏದುರಾಗಿದೆ. ಬೆಂಗಳೂರಿನಲ್ಲಿ ನಡೆಸುವ ಚಿಕಿತ್ಸೆಗೆ ಅಂದಾಜು 25ರಿಂದ 30ಲಕ್ಷ ದೊಡ್ಡ ಮೊತ್ತದ ಅವಶ್ಯಕತೆಯಿದೆ. ಈ ದೊಡ್ಡ ಮೊತ್ತವನ್ನು ಭರಿಸಲಾರದೆ ಮಗುವಿನ ತಂದೆ, ತಾಯಿ ಕಂಗಾಲಾಗಿದ್ದಾರೆ.

ಈ ಪುಟ್ಟ ಮಗುವಿನ ಆರೋಗ್ಯದ ಸಮಸ್ಯೆ ಪರಿಹರಿಸಲು ಕೊಡುಗೈ ದಾನಿಗಳ ಸಹಾಯ ಅತ್ಯಗತ್ಯವಾಗಿದೆ. ಈ ಮಗುವಿನ ವೈದ್ಯಕೀಯ ಚಿಕಿತ್ಸೆಗೆ ಸಹಕರಿಸಿ ಬಡ ಕುಟುಂಬಕ್ಕೆ ಆಸರೆಯಾಗಿ ಮಗುವಿಗೆ ಶೀಘ್ರದಲ್ಲಿಯೇ ಚಿಕಿತ್ಸೆ ನೀಡುವ ಸಲುವಾಗಿ ಧನ ಸಹಾಯ ಮಾಡುವವರು ಈ ಕೆಳಕಂಡ ಖಾತೆಗೆ ಹಣ ಜಮೆ ಮಾಡಬಹುದಾಗಿದೆ.

ಬ್ಯಾಂಕ್: ಸಿಂಡಿಕೇಟ್ ಬ್ಯಾಂಕ್, ಧರ್ಮಸ್ಥಳ ಶಾಖೆ ದಿನೇಶ್ ಧರ್ಮಸ್ಥಳ
ಖಾತೆ ಸಂಖ್ಯೆ: 02462200015461
IFSC CODE: SYNB0000246
ಸಂಪರ್ಕ ಸಂಖ್ಯೆ:9008995557

Spread the love
  • Related Posts

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಬೆಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಇಂದು ಸದನದಲ್ಲಿ ಕ್ಯಾನ್ಸರ್ ರೋಗಿಗಳಿಗೆ ಅನುಕೂಲ ಆಗುವಂತೆ ಕೆಲವು ನಿಯಮಾವಳಿಗಳನ್ನು ತರುವಂತೆ ಆಗ್ರಹಿಸಿದರು ಕೇಂದ್ರ ಸರ್ಕಾರವು ಬಡವರಿಗೋಸ್ಕರ ಯೋಜಿಸಿರುವ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆಯನ್ನು ಪಡೆಯಲು ಮಂಗಳೂರಿನಲ್ಲಿರುವ ಪ್ರಸಿದ್ಧ ಕ್ಯಾನ್ಸರ್ ಆಸ್ಪತ್ರೆ…

    Spread the love

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಬೆಳ್ತಂಗಡಿ: ಮೆಸ್ಕಾಂ ಎಂದರೆ ದೂರುವರೇ ಹೆಚ್ಚು ದಿನಬೇಳಗಾದ್ರೆ ಮನೆ ಮನೆಗಳಲ್ಲಿ ನಿರಂತರ ಬೆಳಕು ಉರಿಯುತ್ತಲೆ ಇರಬೇಕು ಇಲ್ಲದಿದ್ದರೆ ಮನೆ ಮಾಲೀಕನಿಂದ ಹಿಡಿದು ಕುಟುಂಬದ ಎಲ್ಲಾ ಸದಸ್ಯರು ಹಿಡಿಶಾಪ ಹಾಕೋದು ಮಾತ್ರ ಮೆಸ್ಕಾಂ ಇಲಾಖೆ ಅಥವಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಆದರೆ ಯಾವತ್ತೂ…

    Spread the love

    You Missed

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    • By admin
    • July 23, 2024
    • 56 views
    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    • By admin
    • July 22, 2024
    • 147 views
    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    • By admin
    • July 21, 2024
    • 65 views
    ಶಿರೂರು ಗುಡ್ಡ ಕುಸಿತ  ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ  ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    • By admin
    • July 21, 2024
    • 15 views
    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    • By admin
    • July 21, 2024
    • 18 views
    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು

    • By admin
    • July 21, 2024
    • 148 views
    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು