ಲಕ್ಷದೀಪೋತ್ಸವದಲ್ಲಿ ಶಿಕ್ಷಣ, ಜಾಗೃತಿಯ ಭಕ್ತಿ ಸಂದೇಶ ಶಿಕ್ಷಣ, ಮಾಹಿತಿ ಮತ್ತು ಜಾಗೃತಿಯೊಂದಿಗೆ ಭಕ್ತಿ ಮತ್ತು ಶರಣಾಗತಿ ಮೂಲಕ ದೇವರಿಗೆ ಕೃತಜ್ಞತೆ ಸಲ್ಲಿಸುವ ಉತ್ಸವವಾಗಿದೆ: ಡಾ,ಕೆ.ಸುಧಾಕರ್

ಧರ್ಮಸ್ಥಳ: ದೀಪ ಬೆಳಕಿನ ಸಂಕೇತ. ಲಕ್ಷದೀಪೋತ್ಸವ ಬರೀ ಉತ್ಸವ ಅಲ್ಲ. ಶಿಕ್ಷಣ, ಮಾಹಿತಿ ಮತ್ತು ಜಾಗೃತಿಯೊಂದಿಗೆ ಭಕ್ತಿ ಮತ್ತು ಶರಣಾಗತಿ ಮೂಲಕ ದೇವರಿಗೆ ಕೃತಜ್ಞತೆ ಸಲ್ಲಿಸುವ ಉತ್ಸವವಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ, ಕೆ.ಸುಧಾಕರ್ ಹೇಳಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವ ಪ್ರಯುಕ್ತ ಶುಕ್ರವಾರ ಸಾಹಿತ್ಯ ಸಮ್ಮೇಳನದ 89ನೇ ಅಧಿವೇಶನ ಉದ್ಘಾಟಿಸಿ ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲೆಯ ಕಲೆ, ಸಾಹಿತ್ಯ, ಸಂಸ್ಕೃತಿ ಮತ್ತು ಜಾನಪದ ಸೊಗಡನ್ನು ಶ್ಲಾಘಿಸಿದ ಅವರು, ಸಾಹಿತ್ಯ ಕ್ಷೇತ್ರಕ್ಕೆ ಮಹಾಕವಿ ರತ್ನಾಕರವರ್ಣಿ, ಮಂಜೇಶ್ವರ ಗೋವಿಂದ ಪೈ, ಶಿವರಾಮ ಕಾರಂತ ಮೊದಲಾದವರು ಅಮೂಲ್ಯ ಕೊಡುಗೆ ನೀಡಿದ್ದಾರೆ ಎಂದು ಯಕ್ಷಗಾನ, ಭೂತ ಕೋಲ, ಕಂಬಳ ಮೊದಲಾದ ಜಾನಪದ ಕ್ರೀಡೆಗಳು ಹಾಗೂ ಕಲೆಗಳನ್ನು ನೆನಪಿಸಿಕೊಂಡರು.

ಸಾಹಿತಿಗಳು ಸಮಾಜವನ್ನು ತಿದ್ದುವ ದಾರ್ಶನಿಕರು. ನಾನು ಸಾಹಿತಿ ಅಲ್ಲವಾದರೂ ಸಾಹಿತ್ಯ ಮತ್ತು ಸಾಹಿತಿಗಳ ಬಗ್ಗೆ ಅಭಿಮಾನ ಮತ್ತು ಗೌರವ ಇದೆ. ಸಾಹಿತ್ಯದಿಂದ ಮಾತ್ರ ಸುಸ್ಥಿರ ಸಮಾಜ ನಿರ್ಮಾಣ ಎಂದ ಸಚಿವರು ಎಲ್ಲರಲ್ಲೂ ಪುಸ್ತಕ ಓದುವ ಹವ್ಯಾಸ ಕಡಿಮೆಯಾಗಿರುವುದಕ್ಕೆ ವಿಷಾದಿಸಿದರು.

ಸಾಹಿತ್ಯಕ್ಕೆ ಕ್ಷೇತ್ರದಿಂದ ಪ್ರೋತ್ಸಾಹ ಎಸ್.ಡಿ.ಎಂ. ಪುಸ್ತಕ ಪ್ರಕಾಶನ ಮಾಲಿಕೆ ಮೂಲಕ ಅನೇಕ ಕೃತಿಗಳನ್ನು ಪ್ರಕಟಿಸಿ ಓದುವ ಹವ್ಯಾಸ ಬೆಳೆಸ ಪ್ರೋತ್ಸಾಹ ನೀಡಲಾಗುತ್ತದೆ ಎಂದು ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಧರ್ಮಸ್ಥಳದಿಂದ ಮಂಜುವಾಣಿ ಮತ್ತು ನಿರಂತರ ಎಂಬ ಎರಡು ಮಾಸ ಪತ್ರಿಕೆಗಳನ್ನು ಪ್ರಕಟಿಸಿ ಜ್ಞಾನ ದಾಸೋಹ ನೀಡಲಾಗುತ್ತದೆ. ಸುಜ್ಞಾನ ನಿಧಿ ಯೋಜನೆಯಡಿ 37,194 ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡಿ ಪ್ರೋತ್ಸಾಹಿಸಲಾಗುತ್ತದೆ. ಶ್ರೀ ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನದ ಗ್ರಂಥಾಲಯದ ಅನೇಕ ಪುರಾತನ ಹಸ್ತಪ್ರತಿಗಳು, ಅಮೂಲ್ಯ ಗ್ರಂಥಗಳ ಹಾಗೂ ಅನುವಾದಿತ ಕೃತಿಗಳ ಸಂಗ್ರಹವಿದೆ. ಆಸಕ್ತರು ಇದರ ಸದುಪಯೋಗ ಪಡೆಯಬಹುದು. ಭಾಷಾ ಸಾಮರಸ್ಯ, ಸಹಬಾಳ್ವೆ ಹಾಗೂ ಭಾಷಾಭಿಮಾನದ ಜತೆಗೆ ಸಾಹಿತ್ಯದ ಮೂಲಕ ಆರೋಗ್ಯಪೂರ್ಣ ಸಮಾಶ ನಿರ್ಮಾಣಕ್ಕೆ ಧರ್ಮಸ್ಥಳದಿಂದ ನಿರಂತರ ಪ್ರೋತ್ಸಾಹ, ಸಹಕಾರ ನೀಡಲಾಗುತ್ತದೆ ಎಂದರು. ಧರ್ಮ ಮತ್ತು ಸಾಹಿತ್ಯ ಸಮಸ್ತ ಮಾನವ ಸಮಾಜದ ಏಳಿಗೆಗೆ ಪೂರಕ ಮತ್ತು ಪ್ರೇರಕವಾಗಿದೆ. ವ್ಯಕ್ತಿ ಮತ್ತು ಸಮಾಜಕ್ಕೆ ಹಿತವನ್ನು ಉಂಟುಮಾಡುವುದೇ ಸಾಹಿತ್ಯ ಎಂದು ಹೆಗ್ಗಡೆ ಹೇಳಿದರು.

ಅಧ್ಯಕ್ಷತೆ ವಹಿಸಿದ ಪ್ರೊ.ಮಲ್ಲೇಪುರಂ ಜಿ. ವೆಂಕಟೇಶ ಮಾತನಾಡಿ, ಸಾಹಿತ್ಯದಿಂದ ಅಂತರಂಗದ ಶುದ್ದೀಕರಣವಾಗುತ್ತದೆ. ಸಾಹಿತ್ಯ ರಚನೆಯಲ್ಲಿ ಶಿ ತತ್ವದ ಧಾತು ಇರಬೇಕು. ಅಧ್ಯಾತ್ಮ ಸಾಹಿತ್ಯ ಮತ್ತು ರಂಜನೀಯ ಸಾಹಿತ್ಯದ ಮಧ್ಯೆ ಸಮನ್ವಯ ಅಗತ್ಯ. ಅಂತಃಕರಣದ ಶುದ್ದೀಕರಣದಿಂದ ಲೋಕದ ಶುದ್ದೀಕರಣವೂ ಆಗುತ್ತದೆ ಎಂದು ಅಭಿಪ್ರಾಯಪಟ್ಟರು. ಐತಿಹಾಸಿಕ ಸಾಹಿತ್ಯ ಸೃಷ್ಟಿಯಲ್ಲಿ ಎದುರಾಗುವ ಸವಾಲುಗಳು ಎಂಬ ವಿಷಯದ ಬಗ್ಗೆ ಸಾಗರದ ಡಾ. ಗಜಾನನ ಶರ್ಮಾ, ಸಾಹಿತ್ಯ ಸಂವೇದನೆ ಮತ್ತು ಮಹಿಳಾ ಅಭಿವ್ಯಕ್ತಿ ವಿಷಯದಲ್ಲಿ ಚಿತ್ರದುರ್ಗದ ಡಾ. ಪಿ.ಚಂದ್ರಿಕಾ ಹಾಗೂ ಶಿಕ್ಷಣ ಮತ್ತು ಸಂಸ್ಕೃತಿ ರಕ್ಷಣೆಯಲ್ಲಿ ಸಾಹಿತ್ಯದ ಪಾತ್ರ ಎಂಬ ವಿಷಯದ ಬಗ್ಗೆ ಡಾ. ಕೆ.ಪಿ. ಪುತ್ತೂರಾಯ ಉಪನ್ಯಾಸ ನೀಡಿದರು.

ಧರ್ಮಸ್ಥಳದಲ್ಲಿ ಸಾಹಿತ್ಯ ಸಮ್ಮೇಳನವನ್ನು ಸಚಿವ ಡಾ.ಕೆ.ಸುಧಾಕರ್ ಉದ್ಘಾಟಿಸಿ ದರು. ಡಾ.ಡಿ.ವೀರೇಂದ್ರ ಹೆಗ್ಗಡೆ, ಪ್ರೊ.ಮಲ್ಲೇಪುರಂ ಜಿ. ವೆಂಕಟೇಶ, ಡಾ. ಗಜಾನನ ಶರ್ಮಾ, ಡಾ. ಪಿ.ಚಂದ್ರಿಕಾ, ಡಾ. ಕೆ.ಪಿ. ಪುತ್ತೂರಾಯ, ಹೇಮಾವತಿ ವಿ. ಹೆಗ್ಗಡೆ, ಡಿ.ಹರ್ಷೇಂದ್ರ ಕುಮಾರ್, ಡಿ.ಸುರೇಂದ್ರ ಕುಮಾರ್ ಉಪಸ್ಥಿತರಿದ್ದರು.

ಇಂದು ಸಮವಸರಣ ಪೂಜೆ

ಹೊಸಕಟ್ಟೆ, ಕೆರೆಕಟ್ಟೆ, ಲಲಿತೋದ್ಯಾನ, ಕಂಚಿಮಾರುಕಟ್ಟೆ, ಗೌರಿಮಾರುಕಟ್ಟೆ ಉತ್ಸವಗಳೊಂದಿಗೆ ಐದು ದಿನಗಳ ಲಕ್ಷದೀಪೋತ್ಸವ ಸಮಾಪನಗೊಂಡಿದೆ. ಶನಿವಾರ ಸಂಜೆ 6.30ರಿಂದ ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜಾ ಕಾರ್ಯಕ್ರಮ ನಡೆಯಲಿದೆ.

ಹೇಮಾವತಿ ವಿ. ಹೆಗ್ಗಡೆ, ಡಿ.ಹರ್ಷೇಂದ್ರ ಕುಮಾರ್, ಡಿ.ಸುರೇಂದ್ರ ಕುಮಾರ್, ಶ್ರದ್ಧಾ ಅಮಿತ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್ ಉಪಸ್ಥಿತರಿದ್ದರು. ಉಜಿರೆ ರುಡ್‌ಸೆಟ್ ಸಂಸ್ಥೆ ನಿರ್ದೇಶಕ ಎಂ.ಸುರೇಶ್ ವಂದಿಸಿದರು. ಎಸ್ ಡಿಎಂ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಸಂಪತ್ ಕುಮಾರ್ ನಿರೂಪಣೆ ಮಾಡಿದರು.

Spread the love
  • Related Posts

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ 2026ರಲ್ಲಿ ವಿವಿಧ ಗಣಪನ ಅಲಂಕಾರ ನೋಡೋಣ ಬನ್ನಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮುಂಡಾಜೆ ಇದರ ವತಿಯಿಂದ ಮುಂಡಾಜೆ ದೇವಸ್ಥಾನದಲ್ಲಿ ಆರಾಧಿಸಲ್ಪಟ್ಟ ಸುವರ್ಣ ಸಂಭ್ರಮದ ಗಣಪತಿ. ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಆರಾಧಿಸಲ್ಪಟ್ಟ…

    Spread the love

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    You Missed

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 6 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 19 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 9 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 13 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 10 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 15 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ