
ಧರ್ಮಸ್ಥಳ: ಧರ್ಮಸ್ಥಳದಲ್ಲಿ 54ನೇ ವರ್ಷದ ಪುರಾಣಪ್ರವಚನ ಕಾರ್ಯಕ್ರಮವು ಜುಲೈ 16 ರಿಂದ ಸೆಪ್ಟೆಂಬರ್ 16ರ ವರೆಗೆ ಪ್ರತಿದಿನ ಸಂಜೆ ಗಂಟೆ 6.30ರಿಂದ 8 ಗಂಟೆ ವರೆಗೆ ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ನಡೆಯಲಿದೆ.
ಖ್ಯಾತ ವಿದ್ವಾಂಸರು ಹಾಗೂ ಕಲಾವಿದರಿಂದ ಕುಮಾರವ್ಯಾಸ ವಿರಚಿತ “ಕರ್ಣಾಟ ಭಾರತ ಕಥಾಮಂಜರಿ” ಯ ವಾಚನ-ಪ್ರವಚನ ನಡೆಯುತ್ತದೆ. ಶನಿವಾರ ಮತ್ತು ಭಾನುವಾರಗಳಲ್ಲಿ ಕವಿ ರತ್ನಾಕರವರ್ಣಿಯ ಭರತೇಶವೈಭವ, ಮಂಕುತಿಮ್ಮನ ಕಗ್ಗ, ಶ್ರೀಮದ್ಭಾಗವತ, ಯಶೋಧರಚರಿತೆ, ತೊರವೆರಾಮಾಯಣ, ಮಹಾಭಾರತ, ಸೋಮೇಶ್ವರಶತಕ ಮೊದಲಾದ ವಿವಿಧ ಕಾವ್ಯಗಳ ಆಯ್ದ ಭಾಗಗಳನ್ನು ವಾಚನ-ಪ್ರವಚನಕ್ಕೆ ಬಳಸಲಾಗುವುದು.