
ಬೆಳ್ತಂಗಡಿ: ತಾಲೂಕಿನಲ್ಲಿ ಭಾರೀ ಮಳೆ ಮುಂದುವರಿದಿದ್ದು ಧರ್ಮಸ್ಥಳ ಗ್ರಾಮದ ಪೂರ್ಜೆ ಬೈಲಿನಲ್ಲಿ ಸಿಡಿಲುಬಡಿದು ವ್ಯಕ್ತೊಯೊಬ್ಬರು ಗಾಯಗೊಂಡ ಘಟನೆ ಸೋಮವಾರ ಬೆಳಗ್ಗೆ ಸಂಭವಿಸಿದೆ. ಗಾಯಾಳು ಸ್ಥಳೀಯ ನಿವಾಸಿ ಶೀನ ಎಂಬವರು ಮನೆಯಲ್ಲಿ ಇದ್ದ ವೇಳೆ ಒಂಬತ್ತು ಗಂಟೆ ಸುಮಾರಿಗೆ ಸಿಡಿಲು ಬಡಿದಿದೆ. ಗಾಯಾಳುವನ್ನು ಉಜಿರೆಯ ಬೆನಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಬೆಳ್ತಂಗಡಿ ತಹಶಿಲ್ದಾರ್ ಪೃಥ್ವಿ ಸಾನಿಕಮ್ ಭೇಟಿ ನೀಡಿದ್ದಾರೆ.