ಮೂಢನಂಬಿಕೆಯನ್ನು ಬದಿಗೊತ್ತಿ ರುಧ್ರಭೂಮಿಯನ್ನು ಸ್ವಚ್ಛಗೊಳಿಸಿದ ಧರ್ಮಸ್ಥಳದ ತರುಣರು

ಧರ್ಮಸ್ಥಳ: ದಕ್ಷಿಣ ಕನ್ನಡ ವಿದ್ಯಾವಂತ, ಬುದ್ದಿವಂತ ಜನರಿರುವ ಜಿಲ್ಲೆಯಾದರೂ ಮೂಢನಂಬಿಕೆಗೆ ಕುಖ್ಯಾತವಾಗಿದೆ. ಇಲ್ಲಿನ ಜನರು ಸ್ಮಶಾನದ ವಿಚಾರ ಎತ್ತಿದರೆ ಬಹುದೂರ ಓಡುತ್ತಾರೆ. ಇದಕ್ಕೆ ತದ್ವಿರುದ್ಧವಾಗಿ ಯುವಕರ ಗುಂಪೊಂದು ಸ್ಮಶಾನದಲ್ಲಿ ಶ್ರಮದಾನದೊಂದಿಗೆ ಉಪಹಾರ ಸೇವಿಸುವ ಮೂಲಕ ಮೂಢನಂಬಿಕೆಗೆ ಸಡ್ಡು ಹೊಡೆದು ಉಳಿದವರಿಗೆ ಮಾದರಿಯಾಗುವ ಘಟನೆ ಧರ್ಮಸ್ಥಳ ಗ್ರಾಮದ ಪಾಂಗಳದಲ್ಲಿ ನಡೆದಿದೆ.

ಹೌದು ವಿಜ್ಞಾನ ಎಷ್ಟೇ ಮುಂದುವರಿದರೂ ಕೂಡ ಸ್ಮಶಾನ ಎಂದಾಕ್ಷಣ ಜನರು ಎದ್ದುಬಿದ್ದು ಓಡುತ್ತಾರೆ. ಅದರಲ್ಲೂ ದ.ಕ ಜಿಲ್ಲೆಯ ಜನರು ಎಷ್ಟೇ ವಿದ್ಯಾವಂತ , ಬುದ್ದಿವಂತರಾದರೂ ಮೂಢನಂಬಿಕೆಗೆ ಬಲಿಯಾಗಿರುವುದು ಇತಿಹಾಸದ ದುರಂತ. ಆದರೆ ಇತಿಹಾಸ ಪ್ರಸಿದ್ಧ ಧರ್ಮಸ್ಥಳದ ಯುವಕರು ಧರ್ಮಸ್ಥಳ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಸ್ಮಶಾನ ಅಭಿವೃದ್ಧಿ ಸಮಿತಿ ಹಾಗೂ ಊರವರ ಜಂಟಿ ಆಶ್ರಯದಲ್ಲಿ ಇತ್ತೀಚೆಗೆ ಧರ್ಮಸ್ಥಳ ಗ್ರಾಮದ ಪಾಂಗಳದಲ್ಲಿರುವ ಸ್ಮಶಾನದಲ್ಲಿ ಶ್ರಮದಾನ ನಡೆಯಿತು.

ಊರಿನ ಪ್ರಮುಖ ಸ್ಮಶಾನವು ಗಿಡಗಂಟಿ , ಪೊದೆಗಳಿಂದ ಆವೃತ್ತವಾಗಿತ್ತು. ಇಲ್ಲಿಗೆ ಬರುವವರಿಗೆ ಭಯವನ್ನು ಹುಟ್ಟಿಸುವಂತೆ ಪೊದೆಗಳಿತ್ತು. ಇದನ್ನರಿತ ಸ್ಥಳೀಯ ಗ್ರಾಮ ಪಂಚಾಯತ್ , ಸ್ಮಶಾನ ಅಭಿವೃದ್ಧಿ ಸಮಿತಿ ಹಾಗೂ ಊರವರು ಗಿಡಗಂಟಿ ಪೊದೆಗಳನ್ನು ತೆರವುಗೊಳಿಸಿ ಸ್ವಚ್ಛಗೊಳಿಸಿದರು. ಜೊತೆಗೆ ಸ್ಮಶಾನದಲ್ಲೇ ಉಪಹಾರ ಸೇವಿಸುವ ಮೂಲಕ ಜನ ಮಾನಸದಲ್ಲಿದ್ದ ಮೂಢನಂಬಿಕೆಗೆ ಸಡ್ಡು ಹೊಡೆದು ಧರ್ಮಸ್ಥಳ ಪರಿಸರದಲ್ಲಿ ಹೊಸ ಇತಿಹಾಸ ನಿರ್ಮಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ನ ಆಡಳಿತಾಧಿಕಾರಿ ಡಾ| ಜಯಕೀರ್ತಿ ಜೈನ್,ಪಂ ಅಭಿವೃದ್ಧಿ ಅಧಿಕಾರಿ ಉಮೇಶ್,ತಾಲೂಕು ಪಂ,ಸದಸ್ಯೆ ಧನಲಕ್ಷ್ಮಿ ಜನಾರ್ಧನ,ಬೆಳ್ತಂಗಡಿ ಬಿಜೆಪಿ ಮಂಡಲ ಪ್ರದಾನ ಕಾರ್ಯದರ್ಶಿ ಶ್ರೀನಿವಾಸ ರಾವ್, ಪಂ ಮಾಜಿ ಸದಸ್ಯ ಸುಧಾಕರ ಗೌಡ,ಸೇವಾ ಸಹಕಾರಿ ಬ್ಯಾಂಕ್ ನಿರ್ದೇಶಕ ಪ್ರೀತಮ್, ಸಮಾಜ ಸೇವಕ ಪ್ರಭಾಕರ ರಾವ್ ಕನ್ಯಾಡಿ, ರಾಜೇಂದ್ರ ದಾಸ್, ಸ್ಮಶಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು, ಸೇರಿದಂತೆ ಊರಿನ ಪ್ರಮುಖರು ಉಪಸ್ಥಿತರಿದ್ದು ಸಾಕ್ಷಿಯಾಗಿದ್ದರು.

Spread the love
  • Related Posts

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    ಬಂಗಾಡಿ, ಆ.7: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಬಂಗಾಡಿಯ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಆಗಸ್ಟ್ 29, 2026ರ ಶನಿವಾರ ಬೆಳಿಗ್ಗೆ 9.30 ಗಂಟೆಗೆ ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯವರು…

    Spread the love

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    🖊️• ವರದಿ: ರಾಜೇಶ್ ಎಂ ಕಾನರ್ಪ ಬೆಳ್ತಂಗಡಿಯ ಶೈಕ್ಷಣಿಕ ಘನತೆಗೆ ಕಪ್ಪುಚುಕ್ಕೆಯಾಗುತ್ತಿರುವ ಮಾದಕ ದ್ರವ್ಯ ಜಾಲ: ಈಗಲೇ ಎಚ್ಚೆತ್ತುಕೊಳ್ಳಬೇಕಾದ ಸಮಯ ಒಂದು ಕಾಲದಲ್ಲಿ ಶಿಕ್ಷಣ, ಸಂಸ್ಕಾರ ಮತ್ತು ಶಾಂತಿಯ ನೆಲವೆಂದು ಗುರುತಿಸಿಕೊಂಡಿದ್ದ ಬೆಳ್ತಂಗಡಿ ತಾಲೂಕು ಇಂದು ರಾಜ್ಯದ ಶೈಕ್ಷಣಿಕ ನಕ್ಷೆಯಲ್ಲಿ ತನ್ನದೇ…

    Spread the love

    You Missed

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 3 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    • By admin
    • August 6, 2026
    • 9 views
    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    • By admin
    • August 6, 2026
    • 5 views
    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    • By admin
    • August 6, 2026
    • 7 views
    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    • By admin
    • August 6, 2026
    • 5 views
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    • By admin
    • August 4, 2026
    • 6 views
    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ