ಮೂಢನಂಬಿಕೆಯನ್ನು ಬದಿಗೊತ್ತಿ ರುಧ್ರಭೂಮಿಯನ್ನು ಸ್ವಚ್ಛಗೊಳಿಸಿದ ಧರ್ಮಸ್ಥಳದ ತರುಣರು

ಧರ್ಮಸ್ಥಳ: ದಕ್ಷಿಣ ಕನ್ನಡ ವಿದ್ಯಾವಂತ, ಬುದ್ದಿವಂತ ಜನರಿರುವ ಜಿಲ್ಲೆಯಾದರೂ ಮೂಢನಂಬಿಕೆಗೆ ಕುಖ್ಯಾತವಾಗಿದೆ. ಇಲ್ಲಿನ ಜನರು ಸ್ಮಶಾನದ ವಿಚಾರ ಎತ್ತಿದರೆ ಬಹುದೂರ ಓಡುತ್ತಾರೆ. ಇದಕ್ಕೆ ತದ್ವಿರುದ್ಧವಾಗಿ ಯುವಕರ ಗುಂಪೊಂದು ಸ್ಮಶಾನದಲ್ಲಿ ಶ್ರಮದಾನದೊಂದಿಗೆ ಉಪಹಾರ ಸೇವಿಸುವ ಮೂಲಕ ಮೂಢನಂಬಿಕೆಗೆ ಸಡ್ಡು ಹೊಡೆದು ಉಳಿದವರಿಗೆ ಮಾದರಿಯಾಗುವ ಘಟನೆ ಧರ್ಮಸ್ಥಳ ಗ್ರಾಮದ ಪಾಂಗಳದಲ್ಲಿ ನಡೆದಿದೆ.

ಹೌದು ವಿಜ್ಞಾನ ಎಷ್ಟೇ ಮುಂದುವರಿದರೂ ಕೂಡ ಸ್ಮಶಾನ ಎಂದಾಕ್ಷಣ ಜನರು ಎದ್ದುಬಿದ್ದು ಓಡುತ್ತಾರೆ. ಅದರಲ್ಲೂ ದ.ಕ ಜಿಲ್ಲೆಯ ಜನರು ಎಷ್ಟೇ ವಿದ್ಯಾವಂತ , ಬುದ್ದಿವಂತರಾದರೂ ಮೂಢನಂಬಿಕೆಗೆ ಬಲಿಯಾಗಿರುವುದು ಇತಿಹಾಸದ ದುರಂತ. ಆದರೆ ಇತಿಹಾಸ ಪ್ರಸಿದ್ಧ ಧರ್ಮಸ್ಥಳದ ಯುವಕರು ಧರ್ಮಸ್ಥಳ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಸ್ಮಶಾನ ಅಭಿವೃದ್ಧಿ ಸಮಿತಿ ಹಾಗೂ ಊರವರ ಜಂಟಿ ಆಶ್ರಯದಲ್ಲಿ ಇತ್ತೀಚೆಗೆ ಧರ್ಮಸ್ಥಳ ಗ್ರಾಮದ ಪಾಂಗಳದಲ್ಲಿರುವ ಸ್ಮಶಾನದಲ್ಲಿ ಶ್ರಮದಾನ ನಡೆಯಿತು.

ಊರಿನ ಪ್ರಮುಖ ಸ್ಮಶಾನವು ಗಿಡಗಂಟಿ , ಪೊದೆಗಳಿಂದ ಆವೃತ್ತವಾಗಿತ್ತು. ಇಲ್ಲಿಗೆ ಬರುವವರಿಗೆ ಭಯವನ್ನು ಹುಟ್ಟಿಸುವಂತೆ ಪೊದೆಗಳಿತ್ತು. ಇದನ್ನರಿತ ಸ್ಥಳೀಯ ಗ್ರಾಮ ಪಂಚಾಯತ್ , ಸ್ಮಶಾನ ಅಭಿವೃದ್ಧಿ ಸಮಿತಿ ಹಾಗೂ ಊರವರು ಗಿಡಗಂಟಿ ಪೊದೆಗಳನ್ನು ತೆರವುಗೊಳಿಸಿ ಸ್ವಚ್ಛಗೊಳಿಸಿದರು. ಜೊತೆಗೆ ಸ್ಮಶಾನದಲ್ಲೇ ಉಪಹಾರ ಸೇವಿಸುವ ಮೂಲಕ ಜನ ಮಾನಸದಲ್ಲಿದ್ದ ಮೂಢನಂಬಿಕೆಗೆ ಸಡ್ಡು ಹೊಡೆದು ಧರ್ಮಸ್ಥಳ ಪರಿಸರದಲ್ಲಿ ಹೊಸ ಇತಿಹಾಸ ನಿರ್ಮಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ನ ಆಡಳಿತಾಧಿಕಾರಿ ಡಾ| ಜಯಕೀರ್ತಿ ಜೈನ್,ಪಂ ಅಭಿವೃದ್ಧಿ ಅಧಿಕಾರಿ ಉಮೇಶ್,ತಾಲೂಕು ಪಂ,ಸದಸ್ಯೆ ಧನಲಕ್ಷ್ಮಿ ಜನಾರ್ಧನ,ಬೆಳ್ತಂಗಡಿ ಬಿಜೆಪಿ ಮಂಡಲ ಪ್ರದಾನ ಕಾರ್ಯದರ್ಶಿ ಶ್ರೀನಿವಾಸ ರಾವ್, ಪಂ ಮಾಜಿ ಸದಸ್ಯ ಸುಧಾಕರ ಗೌಡ,ಸೇವಾ ಸಹಕಾರಿ ಬ್ಯಾಂಕ್ ನಿರ್ದೇಶಕ ಪ್ರೀತಮ್, ಸಮಾಜ ಸೇವಕ ಪ್ರಭಾಕರ ರಾವ್ ಕನ್ಯಾಡಿ, ರಾಜೇಂದ್ರ ದಾಸ್, ಸ್ಮಶಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು, ಸೇರಿದಂತೆ ಊರಿನ ಪ್ರಮುಖರು ಉಪಸ್ಥಿತರಿದ್ದು ಸಾಕ್ಷಿಯಾಗಿದ್ದರು.

Spread the love
  • Related Posts

    ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

    ಬೆಳಾಲು : ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ ಜ. 12 ರಂದು ಜರಗಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿ ಮಕ್ಕಳ ಗ್ರಾಮ ಸಭೆಯ ಮಹತ್ವ ಮಕ್ಕಳ ಹಕ್ಕುಗಳು ಮತ್ತು ಸಮಸ್ಯೆಗಳು ಸೂಕ್ತ ಪರಿಹಾರದ ಬಗ್ಗೆ…

    Spread the love

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    Ujire: ಜನವರಿ 11ನೇ ಆದಿತ್ಯವಾರದಂದು ಬೆಲಾಲು ಗುತ್ತು ಮನೆಯಲ್ಲಿ ಇದೇ ಬರುವ 24ನೇ ತಾರೀಕು ಶನಿವಾರದಂದು ನಡೆಯುವ ರಾಜನ್ ದೈವವಾದ ಕೊಡಮಣಿತ್ತಾಯ, ವ್ಯಾಘ್ರ ಚಾಮುಂಡಿ” ಕಲ್ಕುಡ ಕಲ್ಲುರ್ಟಿ ದೈವಗಳ ಉತ್ಸವ ಹಾಗೂ ಮಾರಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ…

    Spread the love

    You Missed

    ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

    • By admin
    • January 12, 2026
    • 12 views
    ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    • By admin
    • January 12, 2026
    • 16 views
    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    ಜನಸ್ಪಂದನ ಸಭೆಯ ಫಲಶ್ರುತಿ108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜನ ಸ್ಪಂದನ ಸಭೆ ನಡೆದಿರುವುದು ಬೆಳ್ತಂಗಡಿಯಲ್ಲಿ: ಶಾಸಕ ಹರೀಶ್ ಪೂಂಜಾ

    • By admin
    • January 10, 2026
    • 36 views
    ಜನಸ್ಪಂದನ ಸಭೆಯ ಫಲಶ್ರುತಿ108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜನ ಸ್ಪಂದನ ಸಭೆ ನಡೆದಿರುವುದು ಬೆಳ್ತಂಗಡಿಯಲ್ಲಿ: ಶಾಸಕ ಹರೀಶ್ ಪೂಂಜಾ

    ಎಕ್ಸೆಲ್ ಬೆಳಕು ಫೌಂಡೇಶನ್ ವತಿಯಿಂದ SSLC ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿಶೇಷ ಕಾರ್ಯಾಗಾರ

    • By admin
    • January 10, 2026
    • 101 views
    ಎಕ್ಸೆಲ್ ಬೆಳಕು ಫೌಂಡೇಶನ್ ವತಿಯಿಂದ SSLC ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿಶೇಷ ಕಾರ್ಯಾಗಾರ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗೆ ದೇಶದ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ ಪ್ರಧಾನ

    • By admin
    • January 10, 2026
    • 87 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ  ಬಿಸಿ ಟ್ರಸ್ಟ್ ಗೆ ದೇಶದ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ ಪ್ರಧಾನ

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

    • By admin
    • January 8, 2026
    • 40 views
    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ