ವೈದ್ಯರು ಹಾಗೂ ಪತ್ರಕರ್ತರಿಗೆ ಶುಭಹಾರೈಸಿದ ಸಿ.ಎಂ. ಬಿ ಎಸ್ ವೈ

ಬೆಂಗಳೂರು: ಸಮಾಜ ಕಟ್ಟುವ ಮಹತ್ವದ ಜವಾಬ್ದಾರಿಯನ್ನು ನಿರ್ವಹಿಸುವ ಮಾಧ್ಯಮಗಳನ್ನು ಮುನ್ನೆಡೆಸುವ ಎಲ್ಲಾ ಪತ್ರಕರ್ತ ಬಂಧುಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ‘ಪತ್ರಿಕಾ ದಿನ’ದ ಶುಭಾಶಯಗಳನ್ನು ಕೋರಿದ್ದಾರೆ.

ಕನ್ನಡದ ಮೊದಲ ಪತ್ರಿಕೆ ‘ಮಂಗಳೂರು ಸಮಾಚಾರ’ ಆರಂಭವಾದ ಜುಲೈ 1ನೇ ತಾರೀಕಿನಂದು ಕರ್ನಾಟಕದಲ್ಲಿ ಪತ್ರಿಕಾ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಪ್ರಜಾಪ್ರಭುತ್ವದಲ್ಲಿ ಪತ್ರಿಕೆಗಳ ಮೂಲಕ ಪತ್ರಕರ್ತರು ರೂಪಿಸುವ ಸಾಮಾಜಿಕ ಅಭಿಪ್ರಾಯಗಳಿಗೆ ತುಂಬಾ ಮಹತ್ವವಿದೆ. ಪ್ರಜೆಗಳು ಮತ್ತು ಪ್ರಭುತ್ವದ ನಡುವಿನ ಕೊಂಡಿಯಂತೆ ಕೆಲಸ ಮಾಡುವ ಪತ್ರಿಕಾರಂಗ, ಪ್ರಜಾಪ್ರಭುತ್ವವನ್ನು ಬಲಗೊಳಿಸುವ ವಿಚಾರಗಳ ಮೂಲಕ ಸಾಮಾಜಿಕ ಸ್ವಾಸ್ಥ್ಯವನ್ನು ಕಾಪಾಡುವ ಮಹತ್ತರ ಜವಾಬ್ದಾರಿಯನ್ನು ಹೊತ್ತಿದೆ. ಇಂತಹ ಹೊಣೆಗಾರಿಕೆಯನ್ನು ನಿರ್ವಹಿಸುತ್ತಿರುವ ಪತ್ರಕರ್ತ ಪರಿವಾರಕ್ಕೆ ಮತ್ತೊಮ್ಮೆ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.

ಪತ್ರಕರ್ತರಿಗೆ  ಶುಭಾಶಯ ಸಲ್ಲಿಸಿದ ಸಿಎಂ ಬಿಎಸ್​ವೈ

ಪತ್ರಕರ್ತರಿಗೆ ಶುಭಾಶಯ ಸಲ್ಲಿಸಿದ ಸಿಎಂ ಬಿಎಸ್​ವೈ

ಅದೇ ರೀತಿ ಸಾರ್ವಜನಿಕರ ಆರೋಗ್ಯದ ಕಾವಲುಗಾರರಂತೆ ದಿನವಿಡೀ ಕೆಲಸ ಮಾಡುವ ವೈದ್ಯ ಸಮೂಹಕ್ಕೆ ಸಿಎಂ ಬಿಎಸ್​ವೈ ‘ರಾಷ್ಟ್ರೀಯ ವೈದ್ಯ’ರ ದಿನದ ಶುಭಾಶಯಗಳನ್ನು ಕೋರಿದ್ದಾರೆ.

ವೈದ್ಯರಿಗೆ ಶುಭಾಶಯ ಸಲ್ಲಿಸಿದ ಸಿಎಂ ಬಿಎಸ್​ವೈ

ವೈದ್ಯರಿಗೆ ಶುಭಾಶಯ ಸಲ್ಲಿಸಿದ ಸಿಎಂ ಬಿಎಸ್​ವೈ

ಆರೋಗ್ಯಪೂರ್ಣ ಸಮಾಜ ಕಟ್ಟುವಲ್ಲಿ ಆಂತರಿಕ ಸೈನಿಕರಂತೆ ಕೆಲಸ ಮಾಡುವ ವೈದ್ಯ ವೃಂದಕ್ಕೆ ಸಮಾಜ ಯಾವಾಗಲೂ ಋಣಿಯಾಗಿರುತ್ತಿದ್ದೆ. ಸಾಂಕ್ರಾಮಿಕ ರೋಗಗಳ ಸವಾಲಿನ ಸನ್ನಿವೇಶಗಳಲ್ಲಿ ತಮ್ಮ ಜೀವವನ್ನೇ ಪಣಕ್ಕಿಟ್ಟು ಕೆಲಸ ಮಾಡುವ ವೈದ್ಯಕೀಯ ಸಿಬ್ಬಂದಿ ತ್ಯಾಗ ದೊಡ್ಡದು. ವೈದ್ಯಕೀಯ ಕ್ಷೇತ್ರಕ್ಕೆ ಭಾರತರತ್ನ ಡಾ. ಬಿ.ಸಿ.ರಾಯ್ ಅವರು ನೀಡಿದ ಕೊಡುಗೆಯ ಸ್ಮರಣಾರ್ಥವಾಗಿ ಅವರ ಜನ್ಮದಿನದಂದು ಆಚರಿಸಲಾಗುವ ‘ರಾಷ್ಟ್ರೀಯ ವೈದ್ಯರ ದಿನ’ದ ಸಂದರ್ಭದಲ್ಲಿ ವೈದ್ಯರು ಸಮೂಹಕ್ಕೆ ಹೃತ್ಪೂರ್ವಕ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.

Spread the love
  • Related Posts

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಬೆಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಇಂದು ಸದನದಲ್ಲಿ ಕ್ಯಾನ್ಸರ್ ರೋಗಿಗಳಿಗೆ ಅನುಕೂಲ ಆಗುವಂತೆ ಕೆಲವು ನಿಯಮಾವಳಿಗಳನ್ನು ತರುವಂತೆ ಆಗ್ರಹಿಸಿದರು ಕೇಂದ್ರ ಸರ್ಕಾರವು ಬಡವರಿಗೋಸ್ಕರ ಯೋಜಿಸಿರುವ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆಯನ್ನು ಪಡೆಯಲು ಮಂಗಳೂರಿನಲ್ಲಿರುವ ಪ್ರಸಿದ್ಧ ಕ್ಯಾನ್ಸರ್ ಆಸ್ಪತ್ರೆ…

    Spread the love

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಬೆಳ್ತಂಗಡಿ: ಮೆಸ್ಕಾಂ ಎಂದರೆ ದೂರುವರೇ ಹೆಚ್ಚು ದಿನಬೇಳಗಾದ್ರೆ ಮನೆ ಮನೆಗಳಲ್ಲಿ ನಿರಂತರ ಬೆಳಕು ಉರಿಯುತ್ತಲೆ ಇರಬೇಕು ಇಲ್ಲದಿದ್ದರೆ ಮನೆ ಮಾಲೀಕನಿಂದ ಹಿಡಿದು ಕುಟುಂಬದ ಎಲ್ಲಾ ಸದಸ್ಯರು ಹಿಡಿಶಾಪ ಹಾಕೋದು ಮಾತ್ರ ಮೆಸ್ಕಾಂ ಇಲಾಖೆ ಅಥವಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಆದರೆ ಯಾವತ್ತೂ…

    Spread the love

    You Missed

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    • By admin
    • July 23, 2024
    • 56 views
    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    • By admin
    • July 22, 2024
    • 147 views
    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    • By admin
    • July 21, 2024
    • 65 views
    ಶಿರೂರು ಗುಡ್ಡ ಕುಸಿತ  ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ  ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    • By admin
    • July 21, 2024
    • 15 views
    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    • By admin
    • July 21, 2024
    • 18 views
    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು

    • By admin
    • July 21, 2024
    • 148 views
    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು