ವೈದ್ಯರು ಹಾಗೂ ಪತ್ರಕರ್ತರಿಗೆ ಶುಭಹಾರೈಸಿದ ಸಿ.ಎಂ. ಬಿ ಎಸ್ ವೈ

ಬೆಂಗಳೂರು: ಸಮಾಜ ಕಟ್ಟುವ ಮಹತ್ವದ ಜವಾಬ್ದಾರಿಯನ್ನು ನಿರ್ವಹಿಸುವ ಮಾಧ್ಯಮಗಳನ್ನು ಮುನ್ನೆಡೆಸುವ ಎಲ್ಲಾ ಪತ್ರಕರ್ತ ಬಂಧುಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ‘ಪತ್ರಿಕಾ ದಿನ’ದ ಶುಭಾಶಯಗಳನ್ನು ಕೋರಿದ್ದಾರೆ.

ಕನ್ನಡದ ಮೊದಲ ಪತ್ರಿಕೆ ‘ಮಂಗಳೂರು ಸಮಾಚಾರ’ ಆರಂಭವಾದ ಜುಲೈ 1ನೇ ತಾರೀಕಿನಂದು ಕರ್ನಾಟಕದಲ್ಲಿ ಪತ್ರಿಕಾ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಪ್ರಜಾಪ್ರಭುತ್ವದಲ್ಲಿ ಪತ್ರಿಕೆಗಳ ಮೂಲಕ ಪತ್ರಕರ್ತರು ರೂಪಿಸುವ ಸಾಮಾಜಿಕ ಅಭಿಪ್ರಾಯಗಳಿಗೆ ತುಂಬಾ ಮಹತ್ವವಿದೆ. ಪ್ರಜೆಗಳು ಮತ್ತು ಪ್ರಭುತ್ವದ ನಡುವಿನ ಕೊಂಡಿಯಂತೆ ಕೆಲಸ ಮಾಡುವ ಪತ್ರಿಕಾರಂಗ, ಪ್ರಜಾಪ್ರಭುತ್ವವನ್ನು ಬಲಗೊಳಿಸುವ ವಿಚಾರಗಳ ಮೂಲಕ ಸಾಮಾಜಿಕ ಸ್ವಾಸ್ಥ್ಯವನ್ನು ಕಾಪಾಡುವ ಮಹತ್ತರ ಜವಾಬ್ದಾರಿಯನ್ನು ಹೊತ್ತಿದೆ. ಇಂತಹ ಹೊಣೆಗಾರಿಕೆಯನ್ನು ನಿರ್ವಹಿಸುತ್ತಿರುವ ಪತ್ರಕರ್ತ ಪರಿವಾರಕ್ಕೆ ಮತ್ತೊಮ್ಮೆ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.

ಪತ್ರಕರ್ತರಿಗೆ  ಶುಭಾಶಯ ಸಲ್ಲಿಸಿದ ಸಿಎಂ ಬಿಎಸ್​ವೈ

ಪತ್ರಕರ್ತರಿಗೆ ಶುಭಾಶಯ ಸಲ್ಲಿಸಿದ ಸಿಎಂ ಬಿಎಸ್​ವೈ

ಅದೇ ರೀತಿ ಸಾರ್ವಜನಿಕರ ಆರೋಗ್ಯದ ಕಾವಲುಗಾರರಂತೆ ದಿನವಿಡೀ ಕೆಲಸ ಮಾಡುವ ವೈದ್ಯ ಸಮೂಹಕ್ಕೆ ಸಿಎಂ ಬಿಎಸ್​ವೈ ‘ರಾಷ್ಟ್ರೀಯ ವೈದ್ಯ’ರ ದಿನದ ಶುಭಾಶಯಗಳನ್ನು ಕೋರಿದ್ದಾರೆ.

ವೈದ್ಯರಿಗೆ ಶುಭಾಶಯ ಸಲ್ಲಿಸಿದ ಸಿಎಂ ಬಿಎಸ್​ವೈ

ವೈದ್ಯರಿಗೆ ಶುಭಾಶಯ ಸಲ್ಲಿಸಿದ ಸಿಎಂ ಬಿಎಸ್​ವೈ

ಆರೋಗ್ಯಪೂರ್ಣ ಸಮಾಜ ಕಟ್ಟುವಲ್ಲಿ ಆಂತರಿಕ ಸೈನಿಕರಂತೆ ಕೆಲಸ ಮಾಡುವ ವೈದ್ಯ ವೃಂದಕ್ಕೆ ಸಮಾಜ ಯಾವಾಗಲೂ ಋಣಿಯಾಗಿರುತ್ತಿದ್ದೆ. ಸಾಂಕ್ರಾಮಿಕ ರೋಗಗಳ ಸವಾಲಿನ ಸನ್ನಿವೇಶಗಳಲ್ಲಿ ತಮ್ಮ ಜೀವವನ್ನೇ ಪಣಕ್ಕಿಟ್ಟು ಕೆಲಸ ಮಾಡುವ ವೈದ್ಯಕೀಯ ಸಿಬ್ಬಂದಿ ತ್ಯಾಗ ದೊಡ್ಡದು. ವೈದ್ಯಕೀಯ ಕ್ಷೇತ್ರಕ್ಕೆ ಭಾರತರತ್ನ ಡಾ. ಬಿ.ಸಿ.ರಾಯ್ ಅವರು ನೀಡಿದ ಕೊಡುಗೆಯ ಸ್ಮರಣಾರ್ಥವಾಗಿ ಅವರ ಜನ್ಮದಿನದಂದು ಆಚರಿಸಲಾಗುವ ‘ರಾಷ್ಟ್ರೀಯ ವೈದ್ಯರ ದಿನ’ದ ಸಂದರ್ಭದಲ್ಲಿ ವೈದ್ಯರು ಸಮೂಹಕ್ಕೆ ಹೃತ್ಪೂರ್ವಕ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.

Spread the love
  • Related Posts

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ ಭಜನಾ ತಂಡ,…

    Spread the love

    You Missed

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 4 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 10 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 5 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 11 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 17 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 14 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು