ವೈದ್ಯರು ಹಾಗೂ ಪತ್ರಕರ್ತರಿಗೆ ಶುಭಹಾರೈಸಿದ ಸಿ.ಎಂ. ಬಿ ಎಸ್ ವೈ

ಬೆಂಗಳೂರು: ಸಮಾಜ ಕಟ್ಟುವ ಮಹತ್ವದ ಜವಾಬ್ದಾರಿಯನ್ನು ನಿರ್ವಹಿಸುವ ಮಾಧ್ಯಮಗಳನ್ನು ಮುನ್ನೆಡೆಸುವ ಎಲ್ಲಾ ಪತ್ರಕರ್ತ ಬಂಧುಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ‘ಪತ್ರಿಕಾ ದಿನ’ದ ಶುಭಾಶಯಗಳನ್ನು ಕೋರಿದ್ದಾರೆ.

ಕನ್ನಡದ ಮೊದಲ ಪತ್ರಿಕೆ ‘ಮಂಗಳೂರು ಸಮಾಚಾರ’ ಆರಂಭವಾದ ಜುಲೈ 1ನೇ ತಾರೀಕಿನಂದು ಕರ್ನಾಟಕದಲ್ಲಿ ಪತ್ರಿಕಾ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಪ್ರಜಾಪ್ರಭುತ್ವದಲ್ಲಿ ಪತ್ರಿಕೆಗಳ ಮೂಲಕ ಪತ್ರಕರ್ತರು ರೂಪಿಸುವ ಸಾಮಾಜಿಕ ಅಭಿಪ್ರಾಯಗಳಿಗೆ ತುಂಬಾ ಮಹತ್ವವಿದೆ. ಪ್ರಜೆಗಳು ಮತ್ತು ಪ್ರಭುತ್ವದ ನಡುವಿನ ಕೊಂಡಿಯಂತೆ ಕೆಲಸ ಮಾಡುವ ಪತ್ರಿಕಾರಂಗ, ಪ್ರಜಾಪ್ರಭುತ್ವವನ್ನು ಬಲಗೊಳಿಸುವ ವಿಚಾರಗಳ ಮೂಲಕ ಸಾಮಾಜಿಕ ಸ್ವಾಸ್ಥ್ಯವನ್ನು ಕಾಪಾಡುವ ಮಹತ್ತರ ಜವಾಬ್ದಾರಿಯನ್ನು ಹೊತ್ತಿದೆ. ಇಂತಹ ಹೊಣೆಗಾರಿಕೆಯನ್ನು ನಿರ್ವಹಿಸುತ್ತಿರುವ ಪತ್ರಕರ್ತ ಪರಿವಾರಕ್ಕೆ ಮತ್ತೊಮ್ಮೆ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.

ಪತ್ರಕರ್ತರಿಗೆ  ಶುಭಾಶಯ ಸಲ್ಲಿಸಿದ ಸಿಎಂ ಬಿಎಸ್​ವೈ

ಪತ್ರಕರ್ತರಿಗೆ ಶುಭಾಶಯ ಸಲ್ಲಿಸಿದ ಸಿಎಂ ಬಿಎಸ್​ವೈ

ಅದೇ ರೀತಿ ಸಾರ್ವಜನಿಕರ ಆರೋಗ್ಯದ ಕಾವಲುಗಾರರಂತೆ ದಿನವಿಡೀ ಕೆಲಸ ಮಾಡುವ ವೈದ್ಯ ಸಮೂಹಕ್ಕೆ ಸಿಎಂ ಬಿಎಸ್​ವೈ ‘ರಾಷ್ಟ್ರೀಯ ವೈದ್ಯ’ರ ದಿನದ ಶುಭಾಶಯಗಳನ್ನು ಕೋರಿದ್ದಾರೆ.

ವೈದ್ಯರಿಗೆ ಶುಭಾಶಯ ಸಲ್ಲಿಸಿದ ಸಿಎಂ ಬಿಎಸ್​ವೈ

ವೈದ್ಯರಿಗೆ ಶುಭಾಶಯ ಸಲ್ಲಿಸಿದ ಸಿಎಂ ಬಿಎಸ್​ವೈ

ಆರೋಗ್ಯಪೂರ್ಣ ಸಮಾಜ ಕಟ್ಟುವಲ್ಲಿ ಆಂತರಿಕ ಸೈನಿಕರಂತೆ ಕೆಲಸ ಮಾಡುವ ವೈದ್ಯ ವೃಂದಕ್ಕೆ ಸಮಾಜ ಯಾವಾಗಲೂ ಋಣಿಯಾಗಿರುತ್ತಿದ್ದೆ. ಸಾಂಕ್ರಾಮಿಕ ರೋಗಗಳ ಸವಾಲಿನ ಸನ್ನಿವೇಶಗಳಲ್ಲಿ ತಮ್ಮ ಜೀವವನ್ನೇ ಪಣಕ್ಕಿಟ್ಟು ಕೆಲಸ ಮಾಡುವ ವೈದ್ಯಕೀಯ ಸಿಬ್ಬಂದಿ ತ್ಯಾಗ ದೊಡ್ಡದು. ವೈದ್ಯಕೀಯ ಕ್ಷೇತ್ರಕ್ಕೆ ಭಾರತರತ್ನ ಡಾ. ಬಿ.ಸಿ.ರಾಯ್ ಅವರು ನೀಡಿದ ಕೊಡುಗೆಯ ಸ್ಮರಣಾರ್ಥವಾಗಿ ಅವರ ಜನ್ಮದಿನದಂದು ಆಚರಿಸಲಾಗುವ ‘ರಾಷ್ಟ್ರೀಯ ವೈದ್ಯರ ದಿನ’ದ ಸಂದರ್ಭದಲ್ಲಿ ವೈದ್ಯರು ಸಮೂಹಕ್ಕೆ ಹೃತ್ಪೂರ್ವಕ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.

Spread the love
  • Related Posts

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಮುಂಬೈ: ಐಸಿಸಿ ಟಿ–20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಸಮಗ್ರ ಆಟದ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ…

    Spread the love

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ: ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಇಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ ನೀಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಮಹಾಸ್ವಾಮಿಗಳು ಶಾಸಕ ಹರೀಶ್…

    Spread the love

    You Missed

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 11 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 33 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 49 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 22 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 15 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ

    • By admin
    • March 4, 2026
    • 20 views
    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ