ವೈದ್ಯರು ಹಾಗೂ ಪತ್ರಕರ್ತರಿಗೆ ಶುಭಹಾರೈಸಿದ ಸಿ.ಎಂ. ಬಿ ಎಸ್ ವೈ

ಬೆಂಗಳೂರು: ಸಮಾಜ ಕಟ್ಟುವ ಮಹತ್ವದ ಜವಾಬ್ದಾರಿಯನ್ನು ನಿರ್ವಹಿಸುವ ಮಾಧ್ಯಮಗಳನ್ನು ಮುನ್ನೆಡೆಸುವ ಎಲ್ಲಾ ಪತ್ರಕರ್ತ ಬಂಧುಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ‘ಪತ್ರಿಕಾ ದಿನ’ದ ಶುಭಾಶಯಗಳನ್ನು ಕೋರಿದ್ದಾರೆ.

ಕನ್ನಡದ ಮೊದಲ ಪತ್ರಿಕೆ ‘ಮಂಗಳೂರು ಸಮಾಚಾರ’ ಆರಂಭವಾದ ಜುಲೈ 1ನೇ ತಾರೀಕಿನಂದು ಕರ್ನಾಟಕದಲ್ಲಿ ಪತ್ರಿಕಾ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಪ್ರಜಾಪ್ರಭುತ್ವದಲ್ಲಿ ಪತ್ರಿಕೆಗಳ ಮೂಲಕ ಪತ್ರಕರ್ತರು ರೂಪಿಸುವ ಸಾಮಾಜಿಕ ಅಭಿಪ್ರಾಯಗಳಿಗೆ ತುಂಬಾ ಮಹತ್ವವಿದೆ. ಪ್ರಜೆಗಳು ಮತ್ತು ಪ್ರಭುತ್ವದ ನಡುವಿನ ಕೊಂಡಿಯಂತೆ ಕೆಲಸ ಮಾಡುವ ಪತ್ರಿಕಾರಂಗ, ಪ್ರಜಾಪ್ರಭುತ್ವವನ್ನು ಬಲಗೊಳಿಸುವ ವಿಚಾರಗಳ ಮೂಲಕ ಸಾಮಾಜಿಕ ಸ್ವಾಸ್ಥ್ಯವನ್ನು ಕಾಪಾಡುವ ಮಹತ್ತರ ಜವಾಬ್ದಾರಿಯನ್ನು ಹೊತ್ತಿದೆ. ಇಂತಹ ಹೊಣೆಗಾರಿಕೆಯನ್ನು ನಿರ್ವಹಿಸುತ್ತಿರುವ ಪತ್ರಕರ್ತ ಪರಿವಾರಕ್ಕೆ ಮತ್ತೊಮ್ಮೆ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.

ಪತ್ರಕರ್ತರಿಗೆ  ಶುಭಾಶಯ ಸಲ್ಲಿಸಿದ ಸಿಎಂ ಬಿಎಸ್​ವೈ

ಪತ್ರಕರ್ತರಿಗೆ ಶುಭಾಶಯ ಸಲ್ಲಿಸಿದ ಸಿಎಂ ಬಿಎಸ್​ವೈ

ಅದೇ ರೀತಿ ಸಾರ್ವಜನಿಕರ ಆರೋಗ್ಯದ ಕಾವಲುಗಾರರಂತೆ ದಿನವಿಡೀ ಕೆಲಸ ಮಾಡುವ ವೈದ್ಯ ಸಮೂಹಕ್ಕೆ ಸಿಎಂ ಬಿಎಸ್​ವೈ ‘ರಾಷ್ಟ್ರೀಯ ವೈದ್ಯ’ರ ದಿನದ ಶುಭಾಶಯಗಳನ್ನು ಕೋರಿದ್ದಾರೆ.

ವೈದ್ಯರಿಗೆ ಶುಭಾಶಯ ಸಲ್ಲಿಸಿದ ಸಿಎಂ ಬಿಎಸ್​ವೈ

ವೈದ್ಯರಿಗೆ ಶುಭಾಶಯ ಸಲ್ಲಿಸಿದ ಸಿಎಂ ಬಿಎಸ್​ವೈ

ಆರೋಗ್ಯಪೂರ್ಣ ಸಮಾಜ ಕಟ್ಟುವಲ್ಲಿ ಆಂತರಿಕ ಸೈನಿಕರಂತೆ ಕೆಲಸ ಮಾಡುವ ವೈದ್ಯ ವೃಂದಕ್ಕೆ ಸಮಾಜ ಯಾವಾಗಲೂ ಋಣಿಯಾಗಿರುತ್ತಿದ್ದೆ. ಸಾಂಕ್ರಾಮಿಕ ರೋಗಗಳ ಸವಾಲಿನ ಸನ್ನಿವೇಶಗಳಲ್ಲಿ ತಮ್ಮ ಜೀವವನ್ನೇ ಪಣಕ್ಕಿಟ್ಟು ಕೆಲಸ ಮಾಡುವ ವೈದ್ಯಕೀಯ ಸಿಬ್ಬಂದಿ ತ್ಯಾಗ ದೊಡ್ಡದು. ವೈದ್ಯಕೀಯ ಕ್ಷೇತ್ರಕ್ಕೆ ಭಾರತರತ್ನ ಡಾ. ಬಿ.ಸಿ.ರಾಯ್ ಅವರು ನೀಡಿದ ಕೊಡುಗೆಯ ಸ್ಮರಣಾರ್ಥವಾಗಿ ಅವರ ಜನ್ಮದಿನದಂದು ಆಚರಿಸಲಾಗುವ ‘ರಾಷ್ಟ್ರೀಯ ವೈದ್ಯರ ದಿನ’ದ ಸಂದರ್ಭದಲ್ಲಿ ವೈದ್ಯರು ಸಮೂಹಕ್ಕೆ ಹೃತ್ಪೂರ್ವಕ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.

Spread the love
  • Related Posts

    ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

    ಮಡಿಕೇರಿ:- ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಶ್ರೀ ಕಾವೇರಿ ಕೃಪಾ ವಿಶ್ವಕಲ್ಯಾಣ ಸೇವಾ ಸಮಿತಿ(ರಿ.), ಅಶ್ವಿನಿ ಆಸ್ಪತ್ರೆ ಮಡಿಕೇರಿ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆ, ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಕೊಡಗು ಶಾಖೆ…

    Spread the love

    ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ’ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ’

    ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್‌ನ ನಿರ್ದೇಶನದಂತೆ ‘ಬ್ಯಾಂಕ್‌ಗಳ ವ್ಯವಹಾರ ಪ್ರತಿನಿಧಿ’ (Business Correspondence) ಆಗಿ ಸೇವೆಗೈಯುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ಗೆ ದೇಶದ ಬ್ಯಾಂಕಿಂಗ್ ಸೇವಾ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ‘ಭಾರತೀಯ ಆತೀ ಸಣ್ಣ ಮತ್ತು ಮಧ್ಯಮ…

    Spread the love

    You Missed

    ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

    • By admin
    • February 15, 2025
    • 13 views
    ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

    ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ’ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ’

    • By admin
    • February 15, 2025
    • 92 views
    ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ’ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ’

    ತುಳುನಾಡಿನ ಕೆಡ್ಡಸ ಹಬ್ಬದ ಆಚರಣೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, ತುಳುನಾಡ ಕಂಪನ್ನು ರಾಷ್ಟ್ರ ರಾಜಧಾನಿಯಲ್ಲಿ ಪಸರಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟರು

    • By admin
    • February 12, 2025
    • 34 views
    ತುಳುನಾಡಿನ ಕೆಡ್ಡಸ ಹಬ್ಬದ ಆಚರಣೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, ತುಳುನಾಡ ಕಂಪನ್ನು ರಾಷ್ಟ್ರ ರಾಜಧಾನಿಯಲ್ಲಿ ಪಸರಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟರು

    ಕಡಿರುದ್ಯಾವರ ಗ್ರಾಮದ ಬೆಳ್ಳೂರು ಕ್ರಾಸ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ

    • By admin
    • February 12, 2025
    • 122 views
    ಕಡಿರುದ್ಯಾವರ ಗ್ರಾಮದ ಬೆಳ್ಳೂರು ಕ್ರಾಸ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ

    ಕನ್ಯಾಡಿಯ ಸೇವಾನಿಕೇತನಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ:

    • By admin
    • February 9, 2025
    • 35 views
    ಕನ್ಯಾಡಿಯ ಸೇವಾನಿಕೇತನಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ:

    ಯುವ ಸಿರಿ ರೈತ ಭಾರತದ ಐಸಿರಿ ಎಂಬ ಪರಿಕಲ್ಪನೆಯೊಂದಿಗೆ ಏಕಕಾಲದಲ್ಲಿ 1000ಕ್ಕೂ ಮಿಕ್ಕಿ ಯುವ ಜನತೆಯಿಂದ ಭತ್ತ ಕಟಾವು ಕಾರ್ಯಕ್ರಮ

    • By admin
    • February 9, 2025
    • 33 views
    ಯುವ ಸಿರಿ ರೈತ ಭಾರತದ ಐಸಿರಿ ಎಂಬ ಪರಿಕಲ್ಪನೆಯೊಂದಿಗೆ ಏಕಕಾಲದಲ್ಲಿ 1000ಕ್ಕೂ ಮಿಕ್ಕಿ ಯುವ ಜನತೆಯಿಂದ ಭತ್ತ ಕಟಾವು ಕಾರ್ಯಕ್ರಮ