ಎಣ್ಣೆ ಕುಡಿದ ನಂತರ ಜನರು ಇಂಗ್ಲೀಷ್ ಏಕೆ ಮಾತನಾಡುತ್ತಾರೆ? ಸಂಶೋಧನೆ ಏನು ಹೇಳಿದೆ ಗೊತ್ತಾ?

ಆಲ್ಕೋಹಾಲ್ ಸೇವಿಸಿದ ನಂತರ ಕೆಲವರ ಮಾತಿನ ವರಸೆ ಬದಲಾಗುತ್ತದೆ. ಅದರಲ್ಲೂ ಕೆಲವರು ಮಾತೃಭಾಷೆಯನ್ನು ಮಾತನಾಡುತ್ತಿದ್ದವರು ಎಣ್ಣೆ ಸೇವಿಸಿದ ನಂತರ ಆಂಗ್ಲ ಭಾಷೆ ಮಾತನಾಡಲು ಪ್ರಾರಂಭಿಸುತ್ತಾರೆ. ಹಾಗಂತ ಇಂಗ್ಲೀಷ್ ಮಾತ್ರವಲ್ಲ ಬಾಯಿಗೆ ಬಂದದನ್ನು ಹೇಳುತ್ತಾರೆ.

ಅಚ್ಚರಿ ವಿಚಾರವೆಂದರೆ ಆಲ್ಕೋಹಾಲ್ ಸೇವಿಸಿದ ನಂತರ ಜನ ಏಕೆ ಇಂಗ್ಲೀಷ್ ಮಾತನಾಡುತ್ತಾರೆ ಎಂಬ ಬಗ್ಗೆ ಸಂಶೋಧನೆಯನ್ನ ಮಾಡಲಾಗಿದೆ. ಅದರ ಮೂಲಕ ನಿಜವಾದ ಕಾರಣವನ್ನು ಅವರು ಕಂಡುಕೊಂಡಿದ್ದಾರೆ. ಹಾಗಾದರೆ ಎಣ್ಣೆ ಹೊಟ್ಟೆ ಒಳಕ್ಕೆ ಸೇರಿದ ನಂತರ ಜನ ಯಾಕೆ ಇಂಗ್ಲೀಷ್ ಮಾತನಾಡುತ್ತಾರೆ ?ಎಂಬುದಕ್ಕೆ ಕಾರಣ ತಿಳಿಯೋಣ.

ಜರ್ನಲ್ ಆಫ್ ಸೈಕೋಫಾರ್ಮಾಕಾಲಜಿಯಲ್ಲಿ ಪ್ರಕಟವಾದ ಸಂಶೋಧನೆಯ ಪ್ರಕಾರ, 1 ರಿಂದ 2 ಪೆಗ್ ಆಲ್ಕೋಹಾಲ್ ಸೇವಿಸಿ ಅಮಲು ಹತ್ತುತ್ತಿದ್ದಂತೆ ಜನರ ಮನಸ್ಸಿನಲ್ಲಿದ್ದ ಭಯ ಅಥವಾ ಹಿಂಜರಿಕೆ ಅಲ್ಲಿಗೆ ಕೊನೆಯಾಗುತ್ತದೆ.

ತನ್ನಿಂದ ಎಲ್ಲವೂ ಸಾಧ್ಯ ಎಂಬ ಮನೋಭಾವನೆ ಬರುತ್ತದೆ. ಮನಸ್ಸು ಮಾಡಿದರೆ ಏನು ಮಾಡಬಹುದು ಎಂಬುದು ಅವರಲ್ಲಿ ದೃಢವಾಗುತ್ತದೆ.

ಹಾಗಾಗಿ ಅಮಲು ಹೆಚ್ಚಾದಂತೆ ಅವರ ವರಸೆ ಬದಲಾಗುತ್ತದೆ. ಈ ವೇಲೆ ಮಾತನಾಡುವ ಭಾಷೆ, ಸ್ಟೈಲ್ ಕೂಡ ಬದಲಾಗುತ್ತದೆ. ಭಾರತೀಯರಾದರೆ ಕುಡಿದ ನಂತರ ಇಂಗ್ಲೀಷ್ ಭಾಷೆಯಲ್ಲಿ ಮಾತನಾಡಿಸಲು ಪ್ರಾರಂಭಿಸುತ್ತಾರೆ.

ಮತ್ತೊಂದು ವಿಚಾರವೆಂದರೆ ಆಲ್ಕೋಹಾಲ್ ಕುಡಿತ ನಂತರ ಸ್ಮರಣಶಕ್ತಿ ಮತ್ತು ಏಕಾಗ್ರತೆ ಹೆಚ್ಚಾಗುತ್ತದೆ. ಯಾವ ವಿಚಾರವನ್ನು ಮಾತನಾಡಲು ಹಿಂಜರಿಯುತ್ತೇವೆ ಅದನ್ನು ಧೈರ್ಯವಾಗಿ ಮಾತನಾಡಲು ಪ್ರಾರಂಭಿಸುತ್ತಾರೆ.

ಇನ್ನು ಕೆಲವರು ಆಲ್ಕೋಹಾಲ್ ಸೇವಿಸಿದ ನಂತರ ತಮಗಿಷ್ಟವಾದ ಕೆಲಸ ಮಾಡಲು ಮುಂದಾಗುತ್ತಾರೆ. ಆ ಸಮಯವನ್ನು ಸಂತೋಷದಿಂದ ಕಳೆಯಲು ಮುಂದಾಗುತ್ತಾರೆ. ಕುಡಿಯುವ ಸಮಯಕ್ಕೆ ನೃತ್ಯ ಮಾಡಲು ಕೆಲವರು ಹೊರಟರೆ. ಇನ್ನು ಕೆಲವರು ತಮ್ಮ ಬೇಸರವನ್ನು ಬೇರೆಯವರೊಂದಿಗೆ ಹಂಚಿಕೊಳ್ಳುತ್ತಾರೆ.

ಒಟ್ಟಿನಲ್ಲಿ ಅಮಲು ಒಳಗೆ ಹೋದಂತೆ ಕಾನ್ಫಿಡೆನ್ಸ್ ಬೂಸ್ಟ್ ಆಗುತ್ತದೆ. ಹಾಗಾಗಿ ಆಲ್ಕೋಹಾಲ್ ಕುಡಿದ ಜನರು ನಾಚಿಕೆಯನ್ನು ಬಿಟ್ಟು ಬೇರೆ ಭಾಷೆಯನ್ನು ಆ ಸಮಯದಲ್ಲಿ ಮಾತನಾಡುತ್ತಾರೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 62 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 102 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ