ಬೆಳ್ತಂಗಡಿ ತಾಲೂಕಿನಾದ್ಯಂತ 8000 ಮಕ್ಕಳಿಗೆ ಪುಸ್ತಕ ವಿತರಣೆ ಮಾಡಿ ಶಿಕ್ಷಣ ಕ್ರಾಂತಿಗೆ ಮುನ್ನುಡಿ ಬರೆದ ನವಚೇತನ ಟ್ರಸ್ಟ್ ಬೆಂಗಳೂರು

ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ (ರಿ.) ಕಾನರ್ಪ, ಕಡಿರುದ್ಯಾವರ ಮತ್ತು ಸೇವಾಭಾರತಿ ಟ್ರಸ್ಟ್ (ರಿ.) ಕನ್ಯಾಡಿ, ಸರ್ಕಾರಿ ಹಿರಿಯ ಪ್ರಾಥಮಿಕ ‌ಶಾಲೆ ಕೋಡಿಯಾಲಬೈಲು ಇದರ ಸಂಯುಕ್ತ ಆಶ್ರಯದಲ್ಲಿ ನವಚೇತನ ಟ್ರಸ್ಟ್ ಬೆಂಗಳೂರು ಇವರ ಕೊಡುಗೆಯ ಬರಹ ಪುಸ್ತಕಗಳ ವಿತರಣಾ ಕಾರ್ಯಕ್ರಮ ಕೋಡಿಯಾಲಬೈಲು ಶಾಲಾ ವಠಾರದಲ್ಲಿ ಜರುಗಿತು. ಶಾಲೆಯ 109 ಮಕ್ಕಳಿಗೆ ಬರಹ ಪುಸ್ತಕ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಎಸ್ .ಡಿ.ಎಮ್ ಕಾಲೇಜಿನ ಸ್ನಾತಕೋತ್ತರ ಅಧ್ಯಯನದ ಮನಃಶಾಸ್ತ್ರ ವಿಭಾಗದ ಉಪನ್ಯಾಸಕರಾದ ಕುಮಾರಿ ಅಶ್ವಿನಿ ಶೆಟ್ಟಿ ಯವರು ಸೇರಿದ್ದ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಮೊಬೈಲ್ ‌ನಿಂದ ಅಗುತ್ತಿರುವ ದುಷ್ಪರಿಣಾಮ ಹಾಗೂ ಪೋಷಕರು ತಮ್ಮ ಮಕ್ಕಳ ಜೊತೆ ವ್ರದ್ದಿಸಬೇಕಾದ ಸಂಬಂಧಗಳ ಬಗ್ಗೆ ವಿವರವಾದ ಮಾರ್ಗದರ್ಶನ ಮಾಡಿದರು.

ಸೇವಾಭಾರತಿ ಕನ್ಯಾಡಿಯ ಅಧ್ಯಕ್ಷರಾದ ಶ್ರೀ ಕೆ ವಿನಾಯಕ ರಾವ್ ಅವರು ಸಮಾಜದಲ್ಲಿ ಪರೋಪಕಾರ ಗುಣವನ್ನು ಮಕ್ಕಳಲ್ಲಿ ವ್ರದ್ದಿಸುವುದು ಪೋಷಕರ ಜವಬ್ದಾರಿ ಮತ್ತು ಸಮಾಜದಲ್ಲಿ ವಿಶೇಷ ಚೇತನರಾಗಿ ನವಚೇತನ ಟ್ರಸ್ಟ್ ನ ಮಂಜುನಾಥ ಅವರ ಸಾಧನೆಯ ಬಗ್ಗೆ ವಿವರಿಸಿ ಬೆಳ್ತಂಗಡಿ ತಾಲೂಕಿನ ಸರ್ಕಾರಿ ಶಾಲೆಯ 8000 ಮಕ್ಕಳಿಗೆ ಉಚಿತ ಬರಹ ಪುಸ್ತಕ ವಿತರಣೆ ಮಾಡಿರುತ್ತಾರೆ ಹಾಗೂ ಕರ್ನಾಟಕ ರಾಜ್ಯಾಂದ್ಯಂತ ಸುತ್ತಿ ಬಡ ಮಕ್ಕಳಿಗೆ ಪುಸ್ತಕ ತಲುಪಿಸುವ ಕಾರ್ಯ ಮಾಡುತ್ತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಶಾಲಾ ಎಸ್ .ಡಿ .ಎಮ್ .ಸಿ ಅಧ್ಯಕ್ಷರಾದ ಶ್ರೀ ಲಕ್ಷಣ ಗೌಡ, ಚಿರಂಜೀವಿ ಯುವಕ ಮಂಡಲ ಅಧ್ಯಕ್ಷರಾದ ಶ್ರೀ ಜನಾರ್ದನ ಕಾನರ್ಪ , ಸೇವಾ ಭಾರತೀಯ ಕಾರ್ಯದರ್ಶಿ ಶ್ರೀಮತಿ ಸ್ವರ್ಣ ಗೌರಿ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪಿಲೋಮಿನಾ ಸಿ.ಜೆ , ನೆಹರು ಯುವ ಕೇಂದ್ರ ಪ್ರತಿನಿಧಿ ಶ್ರೀ ಸಾಂತಪ್ಪ ಕಲ್ಮಂಜ , ಶ್ರೀ ದುರ್ಗಾ ಶಕ್ತಿ ಮಹಿಳಾ ಸಂಘದ ಅಧ್ಯಕ್ಷರಾದ ಶ್ರೀಮತಿ ಸುಮಿತ್ರಾ ವೆಂಕಟೇಶ್, ಉಪಸ್ಥಿತಿರಿದ್ದರು
ಸಹ ಶಿಕ್ಷಕರಾದ ಜಯದೇವ್ ರವರು ಕಾರ್ಯಕ್ರಮ ನಿರೂಪಿಸಿ ಶ್ರೀ ಜಯರಾಜ್ ಸಾಲಿಯಾನ್ ವಂದಿಸಿದರು.

Spread the love
  • Related Posts

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಬೆಳ್ತಂಗಡಿ : ತಾಲೂಕು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಬಹಳಷ್ಟು ಖ್ಯಾತಿ ಪಡೆದಿರುವ “ಸಾಲ್ಯಾನ್ ಎಲ್ ಇಡಿ” ಇಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಪ್ರಮಾಣಪತ್ರವನ್ನು ತನ್ನದಾಗಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ ದಿ| ಕಿಶೋರ್‌ಕುಮಾರ್‌ ಹಾಡುಗಳ ಗಾಯನ ದಾಖಲೆ, 100 ಗಾಯಕರು, ನಿರಂತರ 40…

    Spread the love

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

    Spread the love

    You Missed

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    • By admin
    • December 13, 2025
    • 36 views
    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ  ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 17 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 36 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 57 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 37 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 44 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ