ಬೆಳ್ತಂಗಡಿ ತಾಲೂಕಿನಾದ್ಯಂತ 8000 ಮಕ್ಕಳಿಗೆ ಪುಸ್ತಕ ವಿತರಣೆ ಮಾಡಿ ಶಿಕ್ಷಣ ಕ್ರಾಂತಿಗೆ ಮುನ್ನುಡಿ ಬರೆದ ನವಚೇತನ ಟ್ರಸ್ಟ್ ಬೆಂಗಳೂರು

ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ (ರಿ.) ಕಾನರ್ಪ, ಕಡಿರುದ್ಯಾವರ ಮತ್ತು ಸೇವಾಭಾರತಿ ಟ್ರಸ್ಟ್ (ರಿ.) ಕನ್ಯಾಡಿ, ಸರ್ಕಾರಿ ಹಿರಿಯ ಪ್ರಾಥಮಿಕ ‌ಶಾಲೆ ಕೋಡಿಯಾಲಬೈಲು ಇದರ ಸಂಯುಕ್ತ ಆಶ್ರಯದಲ್ಲಿ ನವಚೇತನ ಟ್ರಸ್ಟ್ ಬೆಂಗಳೂರು ಇವರ ಕೊಡುಗೆಯ ಬರಹ ಪುಸ್ತಕಗಳ ವಿತರಣಾ ಕಾರ್ಯಕ್ರಮ ಕೋಡಿಯಾಲಬೈಲು ಶಾಲಾ ವಠಾರದಲ್ಲಿ ಜರುಗಿತು. ಶಾಲೆಯ 109 ಮಕ್ಕಳಿಗೆ ಬರಹ ಪುಸ್ತಕ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಎಸ್ .ಡಿ.ಎಮ್ ಕಾಲೇಜಿನ ಸ್ನಾತಕೋತ್ತರ ಅಧ್ಯಯನದ ಮನಃಶಾಸ್ತ್ರ ವಿಭಾಗದ ಉಪನ್ಯಾಸಕರಾದ ಕುಮಾರಿ ಅಶ್ವಿನಿ ಶೆಟ್ಟಿ ಯವರು ಸೇರಿದ್ದ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಮೊಬೈಲ್ ‌ನಿಂದ ಅಗುತ್ತಿರುವ ದುಷ್ಪರಿಣಾಮ ಹಾಗೂ ಪೋಷಕರು ತಮ್ಮ ಮಕ್ಕಳ ಜೊತೆ ವ್ರದ್ದಿಸಬೇಕಾದ ಸಂಬಂಧಗಳ ಬಗ್ಗೆ ವಿವರವಾದ ಮಾರ್ಗದರ್ಶನ ಮಾಡಿದರು.

ಸೇವಾಭಾರತಿ ಕನ್ಯಾಡಿಯ ಅಧ್ಯಕ್ಷರಾದ ಶ್ರೀ ಕೆ ವಿನಾಯಕ ರಾವ್ ಅವರು ಸಮಾಜದಲ್ಲಿ ಪರೋಪಕಾರ ಗುಣವನ್ನು ಮಕ್ಕಳಲ್ಲಿ ವ್ರದ್ದಿಸುವುದು ಪೋಷಕರ ಜವಬ್ದಾರಿ ಮತ್ತು ಸಮಾಜದಲ್ಲಿ ವಿಶೇಷ ಚೇತನರಾಗಿ ನವಚೇತನ ಟ್ರಸ್ಟ್ ನ ಮಂಜುನಾಥ ಅವರ ಸಾಧನೆಯ ಬಗ್ಗೆ ವಿವರಿಸಿ ಬೆಳ್ತಂಗಡಿ ತಾಲೂಕಿನ ಸರ್ಕಾರಿ ಶಾಲೆಯ 8000 ಮಕ್ಕಳಿಗೆ ಉಚಿತ ಬರಹ ಪುಸ್ತಕ ವಿತರಣೆ ಮಾಡಿರುತ್ತಾರೆ ಹಾಗೂ ಕರ್ನಾಟಕ ರಾಜ್ಯಾಂದ್ಯಂತ ಸುತ್ತಿ ಬಡ ಮಕ್ಕಳಿಗೆ ಪುಸ್ತಕ ತಲುಪಿಸುವ ಕಾರ್ಯ ಮಾಡುತ್ತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಶಾಲಾ ಎಸ್ .ಡಿ .ಎಮ್ .ಸಿ ಅಧ್ಯಕ್ಷರಾದ ಶ್ರೀ ಲಕ್ಷಣ ಗೌಡ, ಚಿರಂಜೀವಿ ಯುವಕ ಮಂಡಲ ಅಧ್ಯಕ್ಷರಾದ ಶ್ರೀ ಜನಾರ್ದನ ಕಾನರ್ಪ , ಸೇವಾ ಭಾರತೀಯ ಕಾರ್ಯದರ್ಶಿ ಶ್ರೀಮತಿ ಸ್ವರ್ಣ ಗೌರಿ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪಿಲೋಮಿನಾ ಸಿ.ಜೆ , ನೆಹರು ಯುವ ಕೇಂದ್ರ ಪ್ರತಿನಿಧಿ ಶ್ರೀ ಸಾಂತಪ್ಪ ಕಲ್ಮಂಜ , ಶ್ರೀ ದುರ್ಗಾ ಶಕ್ತಿ ಮಹಿಳಾ ಸಂಘದ ಅಧ್ಯಕ್ಷರಾದ ಶ್ರೀಮತಿ ಸುಮಿತ್ರಾ ವೆಂಕಟೇಶ್, ಉಪಸ್ಥಿತಿರಿದ್ದರು
ಸಹ ಶಿಕ್ಷಕರಾದ ಜಯದೇವ್ ರವರು ಕಾರ್ಯಕ್ರಮ ನಿರೂಪಿಸಿ ಶ್ರೀ ಜಯರಾಜ್ ಸಾಲಿಯಾನ್ ವಂದಿಸಿದರು.

Spread the love
  • Related Posts

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ಬೆಳ್ತಂಗಡಿ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.ಸಂಘದ ಅಧ್ಯಕ್ಷ ವಿಜಯ ಆರ್. ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಒಂಜರೆಬೈಲು ಅಂಗನವಾಡಿ ಕೇಂದ್ರದ ಪುಷ್ಪಾ, ಕೊಟ್ರೊಟ್ಟು ಅಂಗನವಾಡಿ ಕೇಂದ್ರದ ಪುಷ್ಪಾ,…

    Spread the love

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬೆಂಗಳೂರು: ನೀಟ್ ಪರೀಕ್ಷೆಯಲ್ಲಿ ನಿರಂತರ ಅತ್ಯುತ್ತಮ ಸಾಧನೆ ದಾಖಲಿಸಿ, ಕರ್ನಾಟಕದಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಮುನ್ನಡೆಸಿದ ಖ್ಯಾತಿ ಪಡೆದಿರುವ ಎಕ್ಸೆಲ್ ಪಿಯು ಕಾಲೇಜು, ಗುರುವಾಯನಕೆರೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗ್ಯಾರಂಟಿ ನ್ಯೂಸ್ ಕನ್ನಡ ವತಿಯಿಂದ…

    Spread the love

    You Missed

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 6 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 21 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 11 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 6 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    • By admin
    • August 11, 2026
    • 16 views
    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!