ನಿರಂತರ ಆನೆದಾಳಿಯಿಂದ ಕಂಗೆಟ್ಟ ರೈತರು, ಕೃಷಿ ಚಟುವಟಿಕೆಗಳಿಗೆ ಅಪಾರ ಹಾನಿ

ಬೆಳ್ತಂಗಡಿ: ಅರಣ್ಯ ಇಲಾಖೆಯಿಂದ ಆನೆ ದಾಳಿಗೆ ಸಂಬಂಧಿಸಿ ಆನೆ ಕಾಡಿಗಟ್ಟುವ ಅನೇಕ ಪ್ರಯತ್ನಗಳ ಮಧ್ಯೆಯೇ ಸೆ.30ರ ಶನಿವಾರ ರಾತ್ರಿ ತಾಲೂಕಿನ ಕಡಿರುದ್ಯಾವರ ಕಾನರ್ಪ ಸಮೀಪ ಗದ್ದೆ ಹಾಗೂ ಕೃಷಿ ಭೂಮಿಗಳಿಗೆ ದಾಳಿಯಿಟ್ಟು ಭತ್ತ ಹಾಗೂ ಇತರೆ ಕೃಷಿ ಸರ್ವನಾಶ ಮಾಡಿದೆ.

ಕಡಿರುದ್ಯಾವರ ಗ್ರಾಮದ ಕಾನರ್ಪ ಎರುಬಳ್ಳಿ ಬೊಮ್ಮಣ್ಣ ಗೌಡ ಹಾಗೂ ಬೆದ್ರಡಿ ನಾರಾಯಣ ಗೌಡ ಅವರ ಭತ್ತದ ಕೃಷಿಗೆ ಅನೆಗಳು ನುಗ್ಗಿ ಸುಮಾರು ಮೂರು ಎಕ್ರೆಗೂ ಅಧಿಕ ಸ್ಥಳದಲ್ಲಿ ಹಾನಿ ಮಾಡಿವೆ.

ಒಂದು ವಾರದಿಂದ ಈ ಭಾಗದ ಫಣಿಕಲ್, ಹಿತ್ತಿಲಕೊಡಿ ಪರಿಸರದಲ್ಲಿ ಆನೆಗಳು‌ ನಿರಂತರವಾಗಿ ಕೃಷಿಗೆ ಹಾನಿ ಮಾಡುತ್ತಿವೆ. ಅರಣ್ಯ ಇಲಾಖೆ ಮೆಣಸಿನ ಹೊಗೆ ಪ್ರಯೋಗದ ನಡುವೆಯೂ ಆನೆಗಳ ಹಿಂಡು ಊರಿಂದ ಊರಿಗೆ ಸಂಚರಿಸಿ ದಾಳಿ ಪ್ರಮಾಣ ಹೆಚ್ಚಿಸುತ್ತಲೇ ಇವೆ.

ಇದರಿಂದ ಕೃಷಿಕರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ಇಷ್ಟಾದರೂ ಸರಕಾರ ಅಥವಾ ಸಂಬಂಧಪಟ್ಟ ಸಚಿವರು ಗಮನ ಹರಿಸದಿರುವುದು ಕೃಷಿಕರನ್ನು ಆಕ್ರೋಶ ಹುಟ್ಟಿಸುವಂತೆ ಮಾಡಿದೆ.

ಈಗಾಗಲೇ ಇತ್ತೀಚೆಗೆ ರಾಜ್ಯದ ಬೇರೆ ಬೇರೆ ಪ್ರದೇಶಗಳಲ್ಲಿ ಆನೆ ದಾಳಿಯಿಂದ ರೈತರು ಪ್ರಾಣಕಳೆದುಕೊಂಡ ಘಟನೆ ಆಗಿದ್ದು ಇವೆಲ್ಲವೂ ಆಗುವ ಮುಂಚೆ ಸಂಬಂಧ ಪಟ್ಟ ಇಲಾಖೆ ಸೂಕ್ತ ಕ್ರಮ ಕೈಗೊಂಡು ಕೃಷಿ ಚಟುವಟಿಕೆಗಳಿಗೆ ಹಾಗೂ ಕೃಷಿಕರ ನಾಗರೀಕರ ರಕ್ಷಣೆಗೆ ನಿಲ್ಲಬೇಕಾಗಿದೆ.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 26 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 76 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ

    • By admin
    • April 28, 2026
    • 77 views
    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ

    ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ

    • By admin
    • April 27, 2026
    • 22 views
    ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ

    ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

    • By admin
    • April 26, 2026
    • 78 views
    ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

    ಜಾಗಕ್ಕೆ ಅಕ್ರಮ ಪ್ರವೇಶಗೈದು ಪರವಾನಿಗೆ ಇಲ್ಲದ ಗನ್ ನಿಂದ ಹಲ್ಲೆ!! 8ಮಂದಿಯ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

    • By admin
    • April 26, 2026
    • 78 views
    ಜಾಗಕ್ಕೆ ಅಕ್ರಮ ಪ್ರವೇಶಗೈದು ಪರವಾನಿಗೆ ಇಲ್ಲದ ಗನ್ ನಿಂದ ಹಲ್ಲೆ!! 8ಮಂದಿಯ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು