ಗ್ರಾ.ಪಂ ಚುನಾವಣಾ ಪಲಿತಾಂಶ: ರಾಜಕೀಯ ಪಕ್ಷಗಳ ಪರ ಪಲಿತಾಂಶ ಘೋಷಣೆ ಮಾಡಿದ ಮಾಧ್ಯಮಗಳ ವಿರುದ್ಧ ಗರಂ ಆದ ಚುನಾವಣಾ ಆಯೋಗ

ಬೆಂಗಳೂರು: ಗ್ರಾಮ ಪಂಚಾಯತಿ ಚುನಾವಣೆಯ ಫಲಿತಾಂಶ ಪ್ರಕಟಣೆ ವಿಚಾರದಲ್ಲಿ ಟಿವಿ ವಾಹಿನಿಗಳಿಗೆ ಚುನಾವಣಾ ಆಯೋಗ ಸೂಚನೆ ನೀಡಿದೆ.

ಗ್ರಾಮ ಪಂಚಾಯತಿ ಚುನಾವಣೆ ಪಕ್ಷ ರಹಿತವಾಗಿರುತ್ತದೆ‌. ಆದರೆ, ಕೆಲವು ಟಿವಿ ವಾಹಿನಿಗಳು ಗ್ರಾಪಂ ಚುನಾವಣೆಯ ಫಲಿತಾಂಶ ಪ್ರಕಟಣೆಯ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಆಧಾರಿತ ಚುನಾವಣೆಯ ರೀತಿ ಪ್ರಸಾರ ಮಾಡುತ್ತಿದೆ. ಇದರಿಂದ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿದಂತಾಗುತ್ತದೆ.

ಪಕ್ಷ ರಹಿತ ಚುನಾವಣೆ ಆಗಿರುವ ಸಂದರ್ಭದಲ್ಲಿ ಯಾವುದೇ ಆಧಾರ ಇಲ್ಲದೆ ರಾಜಕೀಯ ಪಕ್ಷಗಳ ಪರ ಫಲಿತಾಂಶ ಪ್ರಸಾರ ಮಾಡಬಾರದು‌. ಈ ಬಗ್ಗೆ ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗೆ ಸೂಚನೆ ನೀಡುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಿಗೆ ರಾಜ್ಯ ಚುನಾವಣಾ ಆಯೋಗದಿಂದ ಸುತ್ತೋಲೆ ಮೂಲಕ ನಿರ್ದೇಶನ ನೀಡಲಾಗಿದೆ.

ಗ್ರಾಪಂ ಚುನಾವಣೆ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಡಿ.31 ರ ವರೆಗೂ ನಡೆಯಲಿದೆ. ಈ ಮಧ್ಯೆ ಪ್ರಸಾರ ಮಾಧ್ಯಮಗಳು ನಿರ್ದಿಷ್ಟ ರಾಜಕೀಯ ಪಕ್ಷಗಳು ಗ್ರಾಪಂ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾಗಿ ಪ್ರಕಟ ಮಾಡುವಂತಿಲ್ಲ ಎಂದಿದ್ದರೂ, ಪಕ್ಷಗಳ ಬೆಂಬಲಿತರು ಎನ್ನುವ ನೆಲೆಯಲ್ಲಿ ಪ್ರಸಾರ ಮಾಡುತ್ತಿವೆ. ಈ ವೇಳೆ, ಹೆಚ್ಚಿನ ಬಾರಿ ರಾಜಕೀಯ ಪಕ್ಷಗಳ ನಾಯಕರು ಕೂಡ ತಮ್ಮ ಪಕ್ಷಗಳಿಗೇ ಗೆಲುವು ಅನ್ನುವ ನೆಲೆಯಲ್ಲಿ ಹೇಳಿಕೆ ನೀಡುತ್ತಾರೆ. ಅಲ್ಲದೆ, ಗೆದ್ದ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸುತ್ತಾರೆ. ಅಭ್ಯರ್ಥಿಗಳ ಪರವಾಗಿ ರಾಜಕೀಯ ಪಕ್ಷಗಳ ಬಾವುಟ ಹಿಡಿದು ವಿಜಯೋತ್ಸವ ಆಚರಣೆಯೂ ನಡೆಯುತ್ತದೆ. ಈ ವೇಳೆ, ಮಾಧ್ಯಮಗಳು ಕೂಡ ಅದನ್ನೇ ಪ್ರಸಾರ ಮಾಡುತ್ತಿರುವುದು ಸಾಮಾನ್ಯ ಎಂಬಂತಾಗಿದೆ. ಈ ಬಗ್ಗೆ ಎಚ್ಚರಿಸಬೇಕಾದ ಮಾಧ್ಯಮಗಳು ಅದನ್ನೇ ಪ್ರಸಾರ ಮಾಡುತ್ತಿರುವ ಬಗ್ಗೆ ಚುನಾವಣಾ ಆಯೋಗ ಪರೋಕ್ಷವಾಗಿ ಚಾಟಿ ಬೀಸಿದೆ.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 60 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ