ಶೀಘ್ರದಲ್ಲೇ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಎಲೆಕ್ಟ್ರಿಕ್ ಟಾಟಾ ಅಲ್ಟ್ರೋಜ್ ಕಾರು!

ಮುಂಬೈ: ದೇಶದಲ್ಲಿ ಅತ್ಯಂತ ಸುರಕ್ಷಿತ ಕಾರು ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿರುವ ಟಾಟಾ ಮೋಟಾರ್ಸ್, ಅತ್ಯಾಕರ್ಷಕ ವಿನ್ಯಾಸ ಹಾಗೂ ತಂತ್ರಜ್ಞಾನ ಹೊಂದಿದೆ. ಟಾಟಾ ಮೋಟಾರ್ಸ್ ಈಗಾಗಲೇ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡಿ ಭಾರಿ ಸಂಚಲನ ಸೃಷ್ಟಿಸಿದೆ. ಇದೀಗ ಟಾಟಾ ಅಲ್ಟ್ರೋಜ್ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಜ್ಜಾಗಿದೆ. ನೂತನ ಕಾರಿನ ಮೈಲೇಜ್ ಸಂಪೂರ್ಣ ಚಾರ್ಜ್‌ಗೆ 500 ಕಿ.ಮೀ ಅನ್ನೋದು ಬಯಲಾಗಿದೆ.

ಅಲ್ಟ್ರೋಜ್ ಎಲೆಕ್ಟ್ರಿಕ್ ಕಾರು ಘೋಷಣೆ ಮಾಡಿ  ವರ್ಷಗಳು ಉರುಳಿವೆ. ಆದರೆ ಕೊರೋನಾ ಸೇರಿದಂತೆ ಹಲವು ಸಮಸ್ಯೆಗಳಿಂದ ಟಾಟಾ ಅಲ್ಟ್ರೋಜ್ ಎಲೆಕ್ಟ್ರಿಕ್ ಕಾರಿಗೆ ಬಿಡುಗಡೆ ಭಾಗ್ಯ ಸಿಗಲಿಲ್ಲ. ಇದೀಗ ಅಲ್ಟ್ರೋಜ್ ಬಿಡುಗಡೆಗ ಸಜ್ಜಾಗಿದೆ. ನೂತನ ಕಾರಿನ ಮೈಲೇಜ್ 500 ಕಿ.ಮೀ ಎಂದು ಹೇಳಲಾಗುತ್ತಿದೆ.

ಸದ್ಯ ಮಾರುಕಟ್ಟೆಯಲ್ಲಿರುವ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಮೈಲೇಜ್ 312 ಕಿ.ಮೀ. ಅಲ್ಟ್ರೋಜ್ ಬಿಡುಗಡೆಯಾಗುವ ವೇಳೆ ನೆಕ್ಸಾನ್ ಕಾರಿನ ಮೈಲೇಜ್ ಕೂಡ ಅಪ್‌ಗ್ರೇಡ್ ಮಾಡಲು ಟಾಟಾ ಮುಂದಾಗಿದೆ.  ಈ ಮೂಲಕ ಟಾಟಾ ಕಾರು ಕೂಡ ದುಬಾರಿ ಎಲೆಕ್ಟ್ರಿಕ್ ಕಾರುಗಳಂತೆ 500 ಕಿ.ಮೀ ಮೈಲೇಜ್ ನೀಡಲಿದೆ.

ಅಲ್ಟ್ರೋಜ್ ಎಲೆಕ್ಟ್ರಿಕ್ ಕಾರಿನ ಬೆಲೆ 12 ಲಕ್ಷ ರೂಪಾಯಿಯಿಂದ ಆರಂಭಗೊಳ್ಳಲಿದೆ. ಕೇಂದ್ರ ಸರ್ಕಾರದ FEMA ಯೋಜನೆಯಡಿ ಅಲ್ಟ್ರೋಜ್ ಎಲೆಕ್ಟ್ರಿಕ್ ಕಾರಿನ ಆರಂಭಿಕ ಬೆಲೆ 10 ಲಕ್ಷ ರೂಪಾಯಿ ಆಗಲಿದೆ. ಭಾರತದಲ್ಲಿ ಕಡಿಮೆ ಬೆಲೆ, ಗರಿಷ್ಠ ಮೈಲೇಜ್, ಗರಿಷ್ಠ ಸುರಕ್ಷತೆಯ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡಿ ಸಂಚಲನ ಸೃಷ್ಟಿಸಿದ್ದ ಟಾಟಾ ಇದೀಗ, ಅಲ್ಟ್ರೋಜ್ ಮೂಲಕ ದೇಶದ ಎಲೆಕ್ಟ್ರಿಕ್ ಮಾರುಕಟ್ಟೆ ಸಂಪೂರ್ಣ ಆಕ್ರಮಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 48 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 83 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 36 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 604 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 148 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 62 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ