ಶೀಘ್ರದಲ್ಲೇ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಎಲೆಕ್ಟ್ರಿಕ್ ಟಾಟಾ ಅಲ್ಟ್ರೋಜ್ ಕಾರು!

ಮುಂಬೈ: ದೇಶದಲ್ಲಿ ಅತ್ಯಂತ ಸುರಕ್ಷಿತ ಕಾರು ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿರುವ ಟಾಟಾ ಮೋಟಾರ್ಸ್, ಅತ್ಯಾಕರ್ಷಕ ವಿನ್ಯಾಸ ಹಾಗೂ ತಂತ್ರಜ್ಞಾನ ಹೊಂದಿದೆ. ಟಾಟಾ ಮೋಟಾರ್ಸ್ ಈಗಾಗಲೇ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡಿ ಭಾರಿ ಸಂಚಲನ ಸೃಷ್ಟಿಸಿದೆ. ಇದೀಗ ಟಾಟಾ ಅಲ್ಟ್ರೋಜ್ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಜ್ಜಾಗಿದೆ. ನೂತನ ಕಾರಿನ ಮೈಲೇಜ್ ಸಂಪೂರ್ಣ ಚಾರ್ಜ್‌ಗೆ 500 ಕಿ.ಮೀ ಅನ್ನೋದು ಬಯಲಾಗಿದೆ.

ಅಲ್ಟ್ರೋಜ್ ಎಲೆಕ್ಟ್ರಿಕ್ ಕಾರು ಘೋಷಣೆ ಮಾಡಿ  ವರ್ಷಗಳು ಉರುಳಿವೆ. ಆದರೆ ಕೊರೋನಾ ಸೇರಿದಂತೆ ಹಲವು ಸಮಸ್ಯೆಗಳಿಂದ ಟಾಟಾ ಅಲ್ಟ್ರೋಜ್ ಎಲೆಕ್ಟ್ರಿಕ್ ಕಾರಿಗೆ ಬಿಡುಗಡೆ ಭಾಗ್ಯ ಸಿಗಲಿಲ್ಲ. ಇದೀಗ ಅಲ್ಟ್ರೋಜ್ ಬಿಡುಗಡೆಗ ಸಜ್ಜಾಗಿದೆ. ನೂತನ ಕಾರಿನ ಮೈಲೇಜ್ 500 ಕಿ.ಮೀ ಎಂದು ಹೇಳಲಾಗುತ್ತಿದೆ.

ಸದ್ಯ ಮಾರುಕಟ್ಟೆಯಲ್ಲಿರುವ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಮೈಲೇಜ್ 312 ಕಿ.ಮೀ. ಅಲ್ಟ್ರೋಜ್ ಬಿಡುಗಡೆಯಾಗುವ ವೇಳೆ ನೆಕ್ಸಾನ್ ಕಾರಿನ ಮೈಲೇಜ್ ಕೂಡ ಅಪ್‌ಗ್ರೇಡ್ ಮಾಡಲು ಟಾಟಾ ಮುಂದಾಗಿದೆ.  ಈ ಮೂಲಕ ಟಾಟಾ ಕಾರು ಕೂಡ ದುಬಾರಿ ಎಲೆಕ್ಟ್ರಿಕ್ ಕಾರುಗಳಂತೆ 500 ಕಿ.ಮೀ ಮೈಲೇಜ್ ನೀಡಲಿದೆ.

ಅಲ್ಟ್ರೋಜ್ ಎಲೆಕ್ಟ್ರಿಕ್ ಕಾರಿನ ಬೆಲೆ 12 ಲಕ್ಷ ರೂಪಾಯಿಯಿಂದ ಆರಂಭಗೊಳ್ಳಲಿದೆ. ಕೇಂದ್ರ ಸರ್ಕಾರದ FEMA ಯೋಜನೆಯಡಿ ಅಲ್ಟ್ರೋಜ್ ಎಲೆಕ್ಟ್ರಿಕ್ ಕಾರಿನ ಆರಂಭಿಕ ಬೆಲೆ 10 ಲಕ್ಷ ರೂಪಾಯಿ ಆಗಲಿದೆ. ಭಾರತದಲ್ಲಿ ಕಡಿಮೆ ಬೆಲೆ, ಗರಿಷ್ಠ ಮೈಲೇಜ್, ಗರಿಷ್ಠ ಸುರಕ್ಷತೆಯ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡಿ ಸಂಚಲನ ಸೃಷ್ಟಿಸಿದ್ದ ಟಾಟಾ ಇದೀಗ, ಅಲ್ಟ್ರೋಜ್ ಮೂಲಕ ದೇಶದ ಎಲೆಕ್ಟ್ರಿಕ್ ಮಾರುಕಟ್ಟೆ ಸಂಪೂರ್ಣ ಆಕ್ರಮಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ