ಗುರುವಾಯನಕೆರೆ, ಆ.14: ಎಕ್ಸೆಲ್ ಪದವಿ ಪೂರ್ವ ಕಾಲೇಜು, ಗುರುವಾಯನಕೆರೆಯಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದ ಅಂಗವಾಗಿ ಆಗಸ್ಟ್ 15 ಹಾಗೂ 16ರಂದು ಎರಡು ದಿನಗಳ ಕಾಲ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಶೈಕ್ಷಣಿಕ ಸಾಧಕರ ಅಭಿನಂದನೆ ಹಾಗೂ “ರಕ್ಷಕ ನಮನ-2026” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಆಗಸ್ಟ್ 15ರಂದು ಬೆಳಿಗ್ಗೆ 9.30ಕ್ಕೆ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿಯಾಗಿ ಪೂರ್ವ ಸೇನಾ ವೈದ್ಯರು ಮೇ| ಡಾ| ಕುಶಾಂತ್ ಕೆ. ಎಸ್., ವಿಠಲ.ಎ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಂಟಿ ಕಾರ್ಯದರ್ಶಿ ಬೆಂಗಳೂರು ಭಾಗವಹಿಸಲಿದ್ದಾರೆ.

ನೀಟ್ ಜೆಇಇ ಮತ್ತು ಸಿಇಟಿ ಸಾಧಕರಿಗೆ ಅಭಿನಂದನಾ ಸಮಾರಂಭವೂ ಇದೇ ಸಂದರ್ಭದಲ್ಲಿ ನಡೆಯಲಿದೆ.
ಅಧ್ಯಕ್ಷತೆಯನ್ನು ಎಕ್ಸೆಲ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿ. ವಹಿಸಲಿದ್ದು, ಗೌರವ ಉಪಸ್ಥಿತರಾಗಿ ಡಾ. ಪ್ರಜ್ವಲ್ ಕೆಜೆ ಹಾಗೂ ಡಾ. ನವೀನ್ ಕುಮಾರ್ ಮರಿಕೆ ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ 2 ಗಂಟೆಗೆ “ಗೆಜೆ ಹೆಜ್ಜೆ – ನೃತ್ಯ ವೈಭವ” ಕಾರ್ಯಕ್ರಮ ನಡೆಯಲಿದೆ.
ಆಗಸ್ಟ್ 16ರಂದು ಬೆಳಿಗ್ಗೆ 9.30ಕ್ಕೆ ಭಾರತೀಯ ಸೇನೆ ಹಾಗೂ ಆಂತರಿಕ ಭದ್ರತಾ ವಿಭಾಗಗಳಲ್ಲಿ ರಾಷ್ಟ್ರಸೇವೆಗೈಯುವ ಎಕ್ಸೆಲ್ನ ವಿದ್ಯಾರ್ಥಿಗಳ ಪೋಷಕರಿಗೆ ಗೌರವ ಸಮರ್ಪಣೆ ನಡೆಯಲಿದೆ.
ಅಧ್ಯಕ್ಷತೆಯನ್ನು ಸುಮಂತ್ ಕುಮಾರ್ ಜೈನ್ ಬಿ. ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕುಮಾರ್ ಚಂದ್ರ ಉತ್ತರ ಕನ್ನಡ ಜಿಲ್ಲಾ ಲೋಕಾಯುಕ್ತ ಪೋಲೀಸ್ ಅಧೀಕ್ಷಕರು ಹಾಗೂ ಬೆಳ್ತಂಗಡಿ ಉಪಠಾಣಾಧಿಕಾರಿ ಸಿಕಂದರ್ ಪಾಷಾ ಭಾಗವಹಿಸಲಿದ್ದಾರೆ. ಗೌರವ ಉಪಸ್ಥಿತರಾಗಿ ಡಾ. ಪ್ರಜ್ವಲ್ ಕೆಜೆ ಮತ್ತು ಡಾ. ನವೀನ್ ಕುಮಾರ್ ಮರಿಕೆ ಉಪಸ್ಥಿತರಿರಲಿದ್ದಾರೆ.
ಮಧ್ಯಾಹ್ನ 2 ಗಂಟೆಗೆ “ನಾದತರಂಗ – ಸಂಗೀತ ಸಂಭ್ರಮ” ಕಾರ್ಯಕ್ರಮ ಜರುಗಲಿದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.






