ಫೇಸಬುಕ್‌ನ ಪಕ್ಷಪಾತ ನೀತಿ – ಹಿಂದುತ್ವವಾದಿ ಭಾಜಪ ಶಾಸಕ ಟಿ. ರಾಜಾಸಿಂಹ ಇವರ ‘ಫೇಸಬುಕ್ ಪೇಜ್’ ನಿಷೇಧ! – HJS ಖಂಡನೆ

ಭಾಗ್ಯನಗರದ ಭಾಜಪ ಶಾಸಕ ಮತ್ತು ಪ್ರಖರ ಹಿಂದುತ್ವನಿಷ್ಠ ಟಿ. ರಾಜಾಸಿಂಹ ಇವರ ‘ಫೇಸಬುಕ್ ಪೇಜ್’ಅನ್ನು ನಿಷೇಧಿಸುವ ಮೂಲಕ ಫೇಸಬುಕ್ ಭಾರತದ ‘ವಾಕ್ ಸ್ವಾತಂತ್ರ್ಯ’ವನ್ನು ನಿರ್ಬಂಧಿಸಿದೆ. ಅವರ ಪೇಜ್‌ನಲ್ಲಿ ದ್ವೇಷ ಹಬ್ಬಿಸುತ್ತಿದ್ದರೆ ಭಾರತದಲ್ಲಿ ‘ವಾಂಟೆಡ್’ ಆಗಿರುವ ಮತ್ತು ಮುಸಲ್ಮಾನ ಯುವಕರನ್ನು ಉಗ್ರರನ್ನಾಗಿಸಲು ಪ್ರೋತ್ಸಾಹಿಸುವ ಜಿಹಾದಿ ಡಾ. ಝಾಕೀರ್ ನಾಯಿಕ್ ಇವರ ಹಾಗೂ 100 ಕೋಟಿ ಹಿಂದೂಗಳನ್ನು ಮುಗಿಸುವ ಬಹಿರಂಗ ಬೆದರಿಕೆಯೊಡ್ಡುವ ‘ಎಮ್‌ಐ.ಎಮ್’ನ ಶಾಸಕ ಅಕ್ಬರುದ್ದೀನ್ ಓವೈಸಿ ಇವರ ‘ಫೇಸಬುಕ್ ಪೇಜ್’ ಮೇಲೆ ಏಕೆ ನಿಷೇಧ ಹೇರಿಲ್ಲ ? ಅನೇಕ ಜಿಹಾದಿ ಉಗ್ರವಾದಿ ಸಂಘಟನೆಗಳ ‘ಫೇಸಬುಕ್ ಪೇಜ್’ ಇಂದಿಗೂ ಜಿಹಾದ್‌ನ ಪ್ರಚಾರ ಮಾಡುತ್ತಿವೆ. ಆದುದರಿಂದ ‘ಫೇಸಬುಕ್’ ಭಾರತದಲ್ಲಿ ಮುಸಲ್ಮಾನರಿಗೊಂದು ಹಿಂದೂಗಳಿಗೆ ಮತ್ತೊಂದು ನಿಯಮ ಅಳವಡಿಸಿ ಧಾರ್ಮಿಕ ಪಕ್ಷಪಾತ ಮಾಡುತ್ತಿದ್ದಾರೆ ಎಂದು ಹಿಂದೂ ಜನಜಾಗೃತಿಸ ಸಮಿತಿಯ ರಾಷ್ಟ್ರೀಯ ವಕ್ತಾರರಾದ ಶ್ರೀ. ರಮೇಶ ಶಿಂದೆಯವರು ಈ ಪ್ರಕರಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ಫೇಸಬುಕ್’ ತಕ್ಷಣವೇ ಟಿ. ರಾಜಾಸಿಂಹ ಇವರ ‘ಫೇಸಬುಕ್ ಪೇಜ್’ ಮುಂಚಿನಂತೆ ಆರಂಭಿಸಬೇಕು, ಇಲ್ಲದಿದ್ದರೆ ಹಿಂದೂ ಸಮಾಜಕ್ಕೇ ಫೇಸಬುಕ್ ನಿಷೇಧಿಸುವಂತೆ ಕರೆ ನೀಡಬೇಕಾಗುವುದು, ಎಂದು ಶ್ರೀ. ಶಿಂದೆಯವರು ಎಚ್ಚರಿಕೆ ನೀಡಿದರು.

ದೆಹಲಿಯಲ್ಲಿ ಮತ್ತು ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಗಲಭೆಗಳ ಸಮಯದಲ್ಲಿಯೂ ಮತಾಂಧರು ತಮ್ಮ ‘ಫೇಸ್‌ಬುಕ್ ಪೇಜ್’ನಲ್ಲಿ ಒಟ್ಟಿಗೆ ಸೇರಲು ಕರೆ ನೀಡಿದ್ದರು ಎಂಬುದು ತಿಳಿದುಬಂದಿದೆ. ಭಾರತದ ನಗರಗಳಲ್ಲಿ ಗಲಭೆಗಳಿಗೆ ಭುಗಿಲೆಬ್ಬಿಸಿದ ‘ಫೇಸ್‌ಬುಕ್ ಪೇಜ್’ನಲ್ಲಿ ಫೇಸ್‌ಬುಕ್ ಯಾವುದೇ ಕ್ರಮ ಕೈಗೊಂಡಂತೆ ಕಾಣುತ್ತಿಲ್ಲ. ಅದೇ ರೀತಿ ‘ಫೇಸಬುಕ್’ನಲ್ಲಿ ಇದುವರೆಗೆ ಅನೇಕ ಸಲ ಹಿಂದೂ ದೇವತೆಗಳು, ರಾಷ್ಟ್ರಪುರುಷರ ವಿಷಯದಲ್ಲಿ ಅಶ್ಲೀಲ ಮತ್ತು ಆಕ್ಷೇಪಾರ್ಹ ಪೋಸ್ಟ್ ಪ್ರಸಾರಿತವಾಗುತ್ತಿವೆ. ಇದರ ಬಗ್ಗೆ ಹಿಂದೂತ್ವವಾದಿ ಸಂಘಟನೆಗಳು ಅನೇಕ ಬಾರಿ ‘ಫೇಸ್‌ಬುಕ್’ ಇಂತಹ ಪೋಸ್ಟ್ ಅಥವಾ ಪೇಜ್ ನಿರ್ಬಂಧಿಸುವಂತೆ ವಿನಂತಿಸಿವೆ; ಆದರೆ ಅದರ ಬಗ್ಗೆ ‘ಫೇಸಬುಕ್’ ಎಂದೂ ಕ್ರಮಕೈಗೊಂಡಿಲ್ಲ, ಇದು ‘ಫೇಸಬುಕ್’ನ ಪಕ್ಷಪಾತ!

ಹಿಂದೂ ಜನಜಾಗೃತಿ ಸಮಿತಿಯ ಅಧಿಕೃತ ‘ಪುಟ’ವನ್ನೂ ಇದೇ ರೀತಿ 2012 ರಲ್ಲಿ ಯಾವುದೇ ರೀತಿಯ ಕಾರಣವನ್ನು ನೀಡದೇ ಫೇಸ್‌ಬುಕ್’ ಬಂದ್ ಮಾಡಿತ್ತು. ಇದರಿಂದ ‘ಫೇಸ್‌ಬುಕ್’ನ ಹಿಂದೂದ್ವೇಷ ಸ್ಪಷ್ಟವಾಗಿ ಕಾಣುತ್ತದೆ. ಶಾಸಕ ಟಿ. ರಾಜಾಸಿಂಹ ಇವರು ಜನಪ್ರತಿನಿಧಿಯಾಗಿದ್ದಾರೆ, ಅವರ ‘ಪೇಜ್’ ಬಂದ್ ಮಾಡಿದ್ದರಿಂದ ಜನಸಾಮಾನ್ಯರಿಗೆ ಅವರೊಂದಿಗೆ ನೇರ ಸಂಪರ್ಕ ಮಾಡಿ ಸಮಸ್ಯೆಗಳನ್ನು ಬಿಡಿಸುವಲ್ಲಿ ಅಡಚಣೆಯಾಗಲಿದೆ. ಆದ್ದರಿಂದ ಭಾರತ ಸರಕಾರವು ‘ಫೇಸ್‌ಬುಕ್’ನ ಈ ಹಿಂದೂವಿರೋಧಿ ಕೃತ್ಯಕ್ಕೆ ನಿರ್ಬಂಧ ಹೇರಬೇಕು, ಎಂದು ಕೇಂದ್ರ ಸರಕಾರದ ಬಳಿ ನಾವು ಆಗ್ರಹಿಸುತ್ತೇವೆ. ಶಾಸಕ ಟಿ. ರಾಜಾ ಸಿಂಹ ಇವರ ಫೇಸ್‌ಬುಕ್ ಪೇಜ್ ಬಂದ್ ಮಾಡುವುದೆಂದರೆ ಒಂದು ರೀತಿಯಲ್ಲಿ ಹಿಂದೂಜನರ ಧ್ವನಿಯನ್ನು ಅದುಮುವ ಕೆಲಸವನ್ನು ‘ಫೇಸ್‌ಬುಕ್’ ಮಾಡುತ್ತಿದೆ. ಭಾರತದಲ್ಲಿ ಕೋಟಿಗಟ್ಟಲೆ ರೂಪಾಯಿಯನ್ನು ಸಂಪಾಧಿಸುವ ಫೇಸ್‌ಬುಕ್ ಒಂದು ವೇಳೆ ಬಹುಸಂಖ್ಯಾತ ಹಿಂದೂಗಳ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಲ್ಲಿ, ಹಿಂದೂಗಳೂ ‘ಫೇಸ್‌ಬುಕ್’ನ್ನು ಬಹಿಷ್ಕರಿಸುವರು, ಎಂಬುದು ‘ಫೇಸ್‌ಬುಕ್’ನವರು ಗಮನದಲ್ಲಿಡಬೇಕು.

Spread the love
  • Related Posts

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ…

    Spread the love

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    You Missed

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    • By admin
    • July 22, 2026
    • 2 views
    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 7 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 9 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 11 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 10 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 16 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ