ಫೇಸಬುಕ್‌ನ ಪಕ್ಷಪಾತ ನೀತಿ – ಹಿಂದುತ್ವವಾದಿ ಭಾಜಪ ಶಾಸಕ ಟಿ. ರಾಜಾಸಿಂಹ ಇವರ ‘ಫೇಸಬುಕ್ ಪೇಜ್’ ನಿಷೇಧ! – HJS ಖಂಡನೆ

ಭಾಗ್ಯನಗರದ ಭಾಜಪ ಶಾಸಕ ಮತ್ತು ಪ್ರಖರ ಹಿಂದುತ್ವನಿಷ್ಠ ಟಿ. ರಾಜಾಸಿಂಹ ಇವರ ‘ಫೇಸಬುಕ್ ಪೇಜ್’ಅನ್ನು ನಿಷೇಧಿಸುವ ಮೂಲಕ ಫೇಸಬುಕ್ ಭಾರತದ ‘ವಾಕ್ ಸ್ವಾತಂತ್ರ್ಯ’ವನ್ನು ನಿರ್ಬಂಧಿಸಿದೆ. ಅವರ ಪೇಜ್‌ನಲ್ಲಿ ದ್ವೇಷ ಹಬ್ಬಿಸುತ್ತಿದ್ದರೆ ಭಾರತದಲ್ಲಿ ‘ವಾಂಟೆಡ್’ ಆಗಿರುವ ಮತ್ತು ಮುಸಲ್ಮಾನ ಯುವಕರನ್ನು ಉಗ್ರರನ್ನಾಗಿಸಲು ಪ್ರೋತ್ಸಾಹಿಸುವ ಜಿಹಾದಿ ಡಾ. ಝಾಕೀರ್ ನಾಯಿಕ್ ಇವರ ಹಾಗೂ 100 ಕೋಟಿ ಹಿಂದೂಗಳನ್ನು ಮುಗಿಸುವ ಬಹಿರಂಗ ಬೆದರಿಕೆಯೊಡ್ಡುವ ‘ಎಮ್‌ಐ.ಎಮ್’ನ ಶಾಸಕ ಅಕ್ಬರುದ್ದೀನ್ ಓವೈಸಿ ಇವರ ‘ಫೇಸಬುಕ್ ಪೇಜ್’ ಮೇಲೆ ಏಕೆ ನಿಷೇಧ ಹೇರಿಲ್ಲ ? ಅನೇಕ ಜಿಹಾದಿ ಉಗ್ರವಾದಿ ಸಂಘಟನೆಗಳ ‘ಫೇಸಬುಕ್ ಪೇಜ್’ ಇಂದಿಗೂ ಜಿಹಾದ್‌ನ ಪ್ರಚಾರ ಮಾಡುತ್ತಿವೆ. ಆದುದರಿಂದ ‘ಫೇಸಬುಕ್’ ಭಾರತದಲ್ಲಿ ಮುಸಲ್ಮಾನರಿಗೊಂದು ಹಿಂದೂಗಳಿಗೆ ಮತ್ತೊಂದು ನಿಯಮ ಅಳವಡಿಸಿ ಧಾರ್ಮಿಕ ಪಕ್ಷಪಾತ ಮಾಡುತ್ತಿದ್ದಾರೆ ಎಂದು ಹಿಂದೂ ಜನಜಾಗೃತಿಸ ಸಮಿತಿಯ ರಾಷ್ಟ್ರೀಯ ವಕ್ತಾರರಾದ ಶ್ರೀ. ರಮೇಶ ಶಿಂದೆಯವರು ಈ ಪ್ರಕರಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ಫೇಸಬುಕ್’ ತಕ್ಷಣವೇ ಟಿ. ರಾಜಾಸಿಂಹ ಇವರ ‘ಫೇಸಬುಕ್ ಪೇಜ್’ ಮುಂಚಿನಂತೆ ಆರಂಭಿಸಬೇಕು, ಇಲ್ಲದಿದ್ದರೆ ಹಿಂದೂ ಸಮಾಜಕ್ಕೇ ಫೇಸಬುಕ್ ನಿಷೇಧಿಸುವಂತೆ ಕರೆ ನೀಡಬೇಕಾಗುವುದು, ಎಂದು ಶ್ರೀ. ಶಿಂದೆಯವರು ಎಚ್ಚರಿಕೆ ನೀಡಿದರು.

ದೆಹಲಿಯಲ್ಲಿ ಮತ್ತು ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಗಲಭೆಗಳ ಸಮಯದಲ್ಲಿಯೂ ಮತಾಂಧರು ತಮ್ಮ ‘ಫೇಸ್‌ಬುಕ್ ಪೇಜ್’ನಲ್ಲಿ ಒಟ್ಟಿಗೆ ಸೇರಲು ಕರೆ ನೀಡಿದ್ದರು ಎಂಬುದು ತಿಳಿದುಬಂದಿದೆ. ಭಾರತದ ನಗರಗಳಲ್ಲಿ ಗಲಭೆಗಳಿಗೆ ಭುಗಿಲೆಬ್ಬಿಸಿದ ‘ಫೇಸ್‌ಬುಕ್ ಪೇಜ್’ನಲ್ಲಿ ಫೇಸ್‌ಬುಕ್ ಯಾವುದೇ ಕ್ರಮ ಕೈಗೊಂಡಂತೆ ಕಾಣುತ್ತಿಲ್ಲ. ಅದೇ ರೀತಿ ‘ಫೇಸಬುಕ್’ನಲ್ಲಿ ಇದುವರೆಗೆ ಅನೇಕ ಸಲ ಹಿಂದೂ ದೇವತೆಗಳು, ರಾಷ್ಟ್ರಪುರುಷರ ವಿಷಯದಲ್ಲಿ ಅಶ್ಲೀಲ ಮತ್ತು ಆಕ್ಷೇಪಾರ್ಹ ಪೋಸ್ಟ್ ಪ್ರಸಾರಿತವಾಗುತ್ತಿವೆ. ಇದರ ಬಗ್ಗೆ ಹಿಂದೂತ್ವವಾದಿ ಸಂಘಟನೆಗಳು ಅನೇಕ ಬಾರಿ ‘ಫೇಸ್‌ಬುಕ್’ ಇಂತಹ ಪೋಸ್ಟ್ ಅಥವಾ ಪೇಜ್ ನಿರ್ಬಂಧಿಸುವಂತೆ ವಿನಂತಿಸಿವೆ; ಆದರೆ ಅದರ ಬಗ್ಗೆ ‘ಫೇಸಬುಕ್’ ಎಂದೂ ಕ್ರಮಕೈಗೊಂಡಿಲ್ಲ, ಇದು ‘ಫೇಸಬುಕ್’ನ ಪಕ್ಷಪಾತ!

ಹಿಂದೂ ಜನಜಾಗೃತಿ ಸಮಿತಿಯ ಅಧಿಕೃತ ‘ಪುಟ’ವನ್ನೂ ಇದೇ ರೀತಿ 2012 ರಲ್ಲಿ ಯಾವುದೇ ರೀತಿಯ ಕಾರಣವನ್ನು ನೀಡದೇ ಫೇಸ್‌ಬುಕ್’ ಬಂದ್ ಮಾಡಿತ್ತು. ಇದರಿಂದ ‘ಫೇಸ್‌ಬುಕ್’ನ ಹಿಂದೂದ್ವೇಷ ಸ್ಪಷ್ಟವಾಗಿ ಕಾಣುತ್ತದೆ. ಶಾಸಕ ಟಿ. ರಾಜಾಸಿಂಹ ಇವರು ಜನಪ್ರತಿನಿಧಿಯಾಗಿದ್ದಾರೆ, ಅವರ ‘ಪೇಜ್’ ಬಂದ್ ಮಾಡಿದ್ದರಿಂದ ಜನಸಾಮಾನ್ಯರಿಗೆ ಅವರೊಂದಿಗೆ ನೇರ ಸಂಪರ್ಕ ಮಾಡಿ ಸಮಸ್ಯೆಗಳನ್ನು ಬಿಡಿಸುವಲ್ಲಿ ಅಡಚಣೆಯಾಗಲಿದೆ. ಆದ್ದರಿಂದ ಭಾರತ ಸರಕಾರವು ‘ಫೇಸ್‌ಬುಕ್’ನ ಈ ಹಿಂದೂವಿರೋಧಿ ಕೃತ್ಯಕ್ಕೆ ನಿರ್ಬಂಧ ಹೇರಬೇಕು, ಎಂದು ಕೇಂದ್ರ ಸರಕಾರದ ಬಳಿ ನಾವು ಆಗ್ರಹಿಸುತ್ತೇವೆ. ಶಾಸಕ ಟಿ. ರಾಜಾ ಸಿಂಹ ಇವರ ಫೇಸ್‌ಬುಕ್ ಪೇಜ್ ಬಂದ್ ಮಾಡುವುದೆಂದರೆ ಒಂದು ರೀತಿಯಲ್ಲಿ ಹಿಂದೂಜನರ ಧ್ವನಿಯನ್ನು ಅದುಮುವ ಕೆಲಸವನ್ನು ‘ಫೇಸ್‌ಬುಕ್’ ಮಾಡುತ್ತಿದೆ. ಭಾರತದಲ್ಲಿ ಕೋಟಿಗಟ್ಟಲೆ ರೂಪಾಯಿಯನ್ನು ಸಂಪಾಧಿಸುವ ಫೇಸ್‌ಬುಕ್ ಒಂದು ವೇಳೆ ಬಹುಸಂಖ್ಯಾತ ಹಿಂದೂಗಳ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಲ್ಲಿ, ಹಿಂದೂಗಳೂ ‘ಫೇಸ್‌ಬುಕ್’ನ್ನು ಬಹಿಷ್ಕರಿಸುವರು, ಎಂಬುದು ‘ಫೇಸ್‌ಬುಕ್’ನವರು ಗಮನದಲ್ಲಿಡಬೇಕು.

Spread the love
  • Related Posts

    ಕನ್ಯಾಡಿಯ ಸೇವಾನಿಕೇತನಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ:

    ಕನ್ಯಾಡಿ : ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಸದಸ್ಯರಾಗಿರುವ ಶ್ರೀ ಕ್ಯಾಪ್ಟನ್ ಬ್ರಿಜೇಶ್ ಚೌಟ ತಂಡವು ಕನ್ಯಾಡಿಯ ಸೇವಾನಿಕೇತನಕ್ಕೆ ಫೆಬ್ರವರಿ 8 ರಂದು ಭೇಟಿ ನೀಡಿದರು. ಸೇವಾಭಾರತಿ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ. ವಿನಾಯಕ ರಾವ್ ಸಂಸ್ಥೆಯ ಬಗ್ಗೆ ಮಾತನಾಡಿ, ಬೆನ್ನುಹುರಿ…

    Spread the love

    ಯುವ ಸಿರಿ ರೈತ ಭಾರತದ ಐಸಿರಿ ಎಂಬ ಪರಿಕಲ್ಪನೆಯೊಂದಿಗೆ ಏಕಕಾಲದಲ್ಲಿ 1000ಕ್ಕೂ ಮಿಕ್ಕಿ ಯುವ ಜನತೆಯಿಂದ ಭತ್ತ ಕಟಾವು ಕಾರ್ಯಕ್ರಮ

    ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರ ಹಾಗೂ ಮಾತೃ ಶ್ರೀ ಹೇಮಾವತಿ.ವಿ.ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಶ್ರೀ.ಧ.ಮಂ.ಕಾಲೇಜು(ಸ್ವಾಯತ್ತ) ಉಜಿರೆ, ಶ್ರೀ.ಧ.ಮಂ.ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು, ಶ್ರೀ.ಧ.ಮಂ.ಸ್ಪೋರ್ಟ್ಸ್ ಕ್ಲಬ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ(ರಿ) ಬೆಳ್ತಂಗಡಿ, ವ್ಯವಸ್ಥಾಪನಾ ಸಮಿತಿ…

    Spread the love

    You Missed

    ಕನ್ಯಾಡಿಯ ಸೇವಾನಿಕೇತನಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ:

    • By admin
    • February 9, 2025
    • 16 views
    ಕನ್ಯಾಡಿಯ ಸೇವಾನಿಕೇತನಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ:

    ಯುವ ಸಿರಿ ರೈತ ಭಾರತದ ಐಸಿರಿ ಎಂಬ ಪರಿಕಲ್ಪನೆಯೊಂದಿಗೆ ಏಕಕಾಲದಲ್ಲಿ 1000ಕ್ಕೂ ಮಿಕ್ಕಿ ಯುವ ಜನತೆಯಿಂದ ಭತ್ತ ಕಟಾವು ಕಾರ್ಯಕ್ರಮ

    • By admin
    • February 9, 2025
    • 15 views
    ಯುವ ಸಿರಿ ರೈತ ಭಾರತದ ಐಸಿರಿ ಎಂಬ ಪರಿಕಲ್ಪನೆಯೊಂದಿಗೆ ಏಕಕಾಲದಲ್ಲಿ 1000ಕ್ಕೂ ಮಿಕ್ಕಿ ಯುವ ಜನತೆಯಿಂದ ಭತ್ತ ಕಟಾವು ಕಾರ್ಯಕ್ರಮ

    ರಾಷ್ಟ್ರಮಟ್ಟದ ರಸ್ತೆ ಸುರಕ್ಷತಾ ಕಾರ್ಟೂನ್ ಸ್ಪರ್ಧೆಯಲ್ಲಿ ವಿಶೇಷ ಬಹುಮಾನ ಪಡೆದ ಶೈಲೇಶ್ ಉಜಿರೆ

    • By admin
    • February 7, 2025
    • 46 views
    ರಾಷ್ಟ್ರಮಟ್ಟದ ರಸ್ತೆ ಸುರಕ್ಷತಾ ಕಾರ್ಟೂನ್ ಸ್ಪರ್ಧೆಯಲ್ಲಿ ವಿಶೇಷ ಬಹುಮಾನ ಪಡೆದ ಶೈಲೇಶ್ ಉಜಿರೆ

    ಮೈಕ್ರೋ ಫೈನಾನ್ಸ್ ವಿರುದ್ಧದ ಸುಗ್ರೀವಾಜ್ಞೆಗಿಲ್ಲ ರಾಜ್ಯಪಾಲರ ಅಂಕಿತ

    • By admin
    • February 7, 2025
    • 35 views
    ಮೈಕ್ರೋ ಫೈನಾನ್ಸ್ ವಿರುದ್ಧದ ಸುಗ್ರೀವಾಜ್ಞೆಗಿಲ್ಲ ರಾಜ್ಯಪಾಲರ ಅಂಕಿತ

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮ ಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರ ಶಿಶಿಲದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

    • By admin
    • February 2, 2025
    • 85 views
    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮ ಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರ ಶಿಶಿಲದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

    ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಆಡಳಿತ ಮಂಡಳಿ ಚುನಾವಣೆಯಲ್ಲಿ ಸಹಕಾರ ಭಾರತೀಯ ಅಭ್ಯರ್ಥಿಗಳ ಪ್ರಚಂಡ ಗೆಲುವು

    • By admin
    • February 2, 2025
    • 276 views
    ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಆಡಳಿತ ಮಂಡಳಿ ಚುನಾವಣೆಯಲ್ಲಿ   ಸಹಕಾರ ಭಾರತೀಯ ಅಭ್ಯರ್ಥಿಗಳ ಪ್ರಚಂಡ ಗೆಲುವು