ಫೇಸಬುಕ್‌ನ ಪಕ್ಷಪಾತ ನೀತಿ – ಹಿಂದುತ್ವವಾದಿ ಭಾಜಪ ಶಾಸಕ ಟಿ. ರಾಜಾಸಿಂಹ ಇವರ ‘ಫೇಸಬುಕ್ ಪೇಜ್’ ನಿಷೇಧ! – HJS ಖಂಡನೆ

ಭಾಗ್ಯನಗರದ ಭಾಜಪ ಶಾಸಕ ಮತ್ತು ಪ್ರಖರ ಹಿಂದುತ್ವನಿಷ್ಠ ಟಿ. ರಾಜಾಸಿಂಹ ಇವರ ‘ಫೇಸಬುಕ್ ಪೇಜ್’ಅನ್ನು ನಿಷೇಧಿಸುವ ಮೂಲಕ ಫೇಸಬುಕ್ ಭಾರತದ ‘ವಾಕ್ ಸ್ವಾತಂತ್ರ್ಯ’ವನ್ನು ನಿರ್ಬಂಧಿಸಿದೆ. ಅವರ ಪೇಜ್‌ನಲ್ಲಿ ದ್ವೇಷ ಹಬ್ಬಿಸುತ್ತಿದ್ದರೆ ಭಾರತದಲ್ಲಿ ‘ವಾಂಟೆಡ್’ ಆಗಿರುವ ಮತ್ತು ಮುಸಲ್ಮಾನ ಯುವಕರನ್ನು ಉಗ್ರರನ್ನಾಗಿಸಲು ಪ್ರೋತ್ಸಾಹಿಸುವ ಜಿಹಾದಿ ಡಾ. ಝಾಕೀರ್ ನಾಯಿಕ್ ಇವರ ಹಾಗೂ 100 ಕೋಟಿ ಹಿಂದೂಗಳನ್ನು ಮುಗಿಸುವ ಬಹಿರಂಗ ಬೆದರಿಕೆಯೊಡ್ಡುವ ‘ಎಮ್‌ಐ.ಎಮ್’ನ ಶಾಸಕ ಅಕ್ಬರುದ್ದೀನ್ ಓವೈಸಿ ಇವರ ‘ಫೇಸಬುಕ್ ಪೇಜ್’ ಮೇಲೆ ಏಕೆ ನಿಷೇಧ ಹೇರಿಲ್ಲ ? ಅನೇಕ ಜಿಹಾದಿ ಉಗ್ರವಾದಿ ಸಂಘಟನೆಗಳ ‘ಫೇಸಬುಕ್ ಪೇಜ್’ ಇಂದಿಗೂ ಜಿಹಾದ್‌ನ ಪ್ರಚಾರ ಮಾಡುತ್ತಿವೆ. ಆದುದರಿಂದ ‘ಫೇಸಬುಕ್’ ಭಾರತದಲ್ಲಿ ಮುಸಲ್ಮಾನರಿಗೊಂದು ಹಿಂದೂಗಳಿಗೆ ಮತ್ತೊಂದು ನಿಯಮ ಅಳವಡಿಸಿ ಧಾರ್ಮಿಕ ಪಕ್ಷಪಾತ ಮಾಡುತ್ತಿದ್ದಾರೆ ಎಂದು ಹಿಂದೂ ಜನಜಾಗೃತಿಸ ಸಮಿತಿಯ ರಾಷ್ಟ್ರೀಯ ವಕ್ತಾರರಾದ ಶ್ರೀ. ರಮೇಶ ಶಿಂದೆಯವರು ಈ ಪ್ರಕರಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ಫೇಸಬುಕ್’ ತಕ್ಷಣವೇ ಟಿ. ರಾಜಾಸಿಂಹ ಇವರ ‘ಫೇಸಬುಕ್ ಪೇಜ್’ ಮುಂಚಿನಂತೆ ಆರಂಭಿಸಬೇಕು, ಇಲ್ಲದಿದ್ದರೆ ಹಿಂದೂ ಸಮಾಜಕ್ಕೇ ಫೇಸಬುಕ್ ನಿಷೇಧಿಸುವಂತೆ ಕರೆ ನೀಡಬೇಕಾಗುವುದು, ಎಂದು ಶ್ರೀ. ಶಿಂದೆಯವರು ಎಚ್ಚರಿಕೆ ನೀಡಿದರು.

ದೆಹಲಿಯಲ್ಲಿ ಮತ್ತು ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಗಲಭೆಗಳ ಸಮಯದಲ್ಲಿಯೂ ಮತಾಂಧರು ತಮ್ಮ ‘ಫೇಸ್‌ಬುಕ್ ಪೇಜ್’ನಲ್ಲಿ ಒಟ್ಟಿಗೆ ಸೇರಲು ಕರೆ ನೀಡಿದ್ದರು ಎಂಬುದು ತಿಳಿದುಬಂದಿದೆ. ಭಾರತದ ನಗರಗಳಲ್ಲಿ ಗಲಭೆಗಳಿಗೆ ಭುಗಿಲೆಬ್ಬಿಸಿದ ‘ಫೇಸ್‌ಬುಕ್ ಪೇಜ್’ನಲ್ಲಿ ಫೇಸ್‌ಬುಕ್ ಯಾವುದೇ ಕ್ರಮ ಕೈಗೊಂಡಂತೆ ಕಾಣುತ್ತಿಲ್ಲ. ಅದೇ ರೀತಿ ‘ಫೇಸಬುಕ್’ನಲ್ಲಿ ಇದುವರೆಗೆ ಅನೇಕ ಸಲ ಹಿಂದೂ ದೇವತೆಗಳು, ರಾಷ್ಟ್ರಪುರುಷರ ವಿಷಯದಲ್ಲಿ ಅಶ್ಲೀಲ ಮತ್ತು ಆಕ್ಷೇಪಾರ್ಹ ಪೋಸ್ಟ್ ಪ್ರಸಾರಿತವಾಗುತ್ತಿವೆ. ಇದರ ಬಗ್ಗೆ ಹಿಂದೂತ್ವವಾದಿ ಸಂಘಟನೆಗಳು ಅನೇಕ ಬಾರಿ ‘ಫೇಸ್‌ಬುಕ್’ ಇಂತಹ ಪೋಸ್ಟ್ ಅಥವಾ ಪೇಜ್ ನಿರ್ಬಂಧಿಸುವಂತೆ ವಿನಂತಿಸಿವೆ; ಆದರೆ ಅದರ ಬಗ್ಗೆ ‘ಫೇಸಬುಕ್’ ಎಂದೂ ಕ್ರಮಕೈಗೊಂಡಿಲ್ಲ, ಇದು ‘ಫೇಸಬುಕ್’ನ ಪಕ್ಷಪಾತ!

ಹಿಂದೂ ಜನಜಾಗೃತಿ ಸಮಿತಿಯ ಅಧಿಕೃತ ‘ಪುಟ’ವನ್ನೂ ಇದೇ ರೀತಿ 2012 ರಲ್ಲಿ ಯಾವುದೇ ರೀತಿಯ ಕಾರಣವನ್ನು ನೀಡದೇ ಫೇಸ್‌ಬುಕ್’ ಬಂದ್ ಮಾಡಿತ್ತು. ಇದರಿಂದ ‘ಫೇಸ್‌ಬುಕ್’ನ ಹಿಂದೂದ್ವೇಷ ಸ್ಪಷ್ಟವಾಗಿ ಕಾಣುತ್ತದೆ. ಶಾಸಕ ಟಿ. ರಾಜಾಸಿಂಹ ಇವರು ಜನಪ್ರತಿನಿಧಿಯಾಗಿದ್ದಾರೆ, ಅವರ ‘ಪೇಜ್’ ಬಂದ್ ಮಾಡಿದ್ದರಿಂದ ಜನಸಾಮಾನ್ಯರಿಗೆ ಅವರೊಂದಿಗೆ ನೇರ ಸಂಪರ್ಕ ಮಾಡಿ ಸಮಸ್ಯೆಗಳನ್ನು ಬಿಡಿಸುವಲ್ಲಿ ಅಡಚಣೆಯಾಗಲಿದೆ. ಆದ್ದರಿಂದ ಭಾರತ ಸರಕಾರವು ‘ಫೇಸ್‌ಬುಕ್’ನ ಈ ಹಿಂದೂವಿರೋಧಿ ಕೃತ್ಯಕ್ಕೆ ನಿರ್ಬಂಧ ಹೇರಬೇಕು, ಎಂದು ಕೇಂದ್ರ ಸರಕಾರದ ಬಳಿ ನಾವು ಆಗ್ರಹಿಸುತ್ತೇವೆ. ಶಾಸಕ ಟಿ. ರಾಜಾ ಸಿಂಹ ಇವರ ಫೇಸ್‌ಬುಕ್ ಪೇಜ್ ಬಂದ್ ಮಾಡುವುದೆಂದರೆ ಒಂದು ರೀತಿಯಲ್ಲಿ ಹಿಂದೂಜನರ ಧ್ವನಿಯನ್ನು ಅದುಮುವ ಕೆಲಸವನ್ನು ‘ಫೇಸ್‌ಬುಕ್’ ಮಾಡುತ್ತಿದೆ. ಭಾರತದಲ್ಲಿ ಕೋಟಿಗಟ್ಟಲೆ ರೂಪಾಯಿಯನ್ನು ಸಂಪಾಧಿಸುವ ಫೇಸ್‌ಬುಕ್ ಒಂದು ವೇಳೆ ಬಹುಸಂಖ್ಯಾತ ಹಿಂದೂಗಳ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಲ್ಲಿ, ಹಿಂದೂಗಳೂ ‘ಫೇಸ್‌ಬುಕ್’ನ್ನು ಬಹಿಷ್ಕರಿಸುವರು, ಎಂಬುದು ‘ಫೇಸ್‌ಬುಕ್’ನವರು ಗಮನದಲ್ಲಿಡಬೇಕು.

Spread the love
  • Related Posts

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    ಬಂಗಾಡಿ, ಆ.7: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಬಂಗಾಡಿಯ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಆಗಸ್ಟ್ 29, 2026ರ ಶನಿವಾರ ಬೆಳಿಗ್ಗೆ 9.30 ಗಂಟೆಗೆ ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯವರು…

    Spread the love

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    🖊️• ವರದಿ: ರಾಜೇಶ್ ಎಂ ಕಾನರ್ಪ ಬೆಳ್ತಂಗಡಿಯ ಶೈಕ್ಷಣಿಕ ಘನತೆಗೆ ಕಪ್ಪುಚುಕ್ಕೆಯಾಗುತ್ತಿರುವ ಮಾದಕ ದ್ರವ್ಯ ಜಾಲ: ಈಗಲೇ ಎಚ್ಚೆತ್ತುಕೊಳ್ಳಬೇಕಾದ ಸಮಯ ಒಂದು ಕಾಲದಲ್ಲಿ ಶಿಕ್ಷಣ, ಸಂಸ್ಕಾರ ಮತ್ತು ಶಾಂತಿಯ ನೆಲವೆಂದು ಗುರುತಿಸಿಕೊಂಡಿದ್ದ ಬೆಳ್ತಂಗಡಿ ತಾಲೂಕು ಇಂದು ರಾಜ್ಯದ ಶೈಕ್ಷಣಿಕ ನಕ್ಷೆಯಲ್ಲಿ ತನ್ನದೇ…

    Spread the love

    You Missed

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 3 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    • By admin
    • August 6, 2026
    • 9 views
    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    • By admin
    • August 6, 2026
    • 5 views
    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    • By admin
    • August 6, 2026
    • 7 views
    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    • By admin
    • August 6, 2026
    • 5 views
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    • By admin
    • August 4, 2026
    • 6 views
    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ