ಫೇಸಬುಕ್‌ನ ಪಕ್ಷಪಾತ ನೀತಿ – ಹಿಂದುತ್ವವಾದಿ ಭಾಜಪ ಶಾಸಕ ಟಿ. ರಾಜಾಸಿಂಹ ಇವರ ‘ಫೇಸಬುಕ್ ಪೇಜ್’ ನಿಷೇಧ! – HJS ಖಂಡನೆ

ಭಾಗ್ಯನಗರದ ಭಾಜಪ ಶಾಸಕ ಮತ್ತು ಪ್ರಖರ ಹಿಂದುತ್ವನಿಷ್ಠ ಟಿ. ರಾಜಾಸಿಂಹ ಇವರ ‘ಫೇಸಬುಕ್ ಪೇಜ್’ಅನ್ನು ನಿಷೇಧಿಸುವ ಮೂಲಕ ಫೇಸಬುಕ್ ಭಾರತದ ‘ವಾಕ್ ಸ್ವಾತಂತ್ರ್ಯ’ವನ್ನು ನಿರ್ಬಂಧಿಸಿದೆ. ಅವರ ಪೇಜ್‌ನಲ್ಲಿ ದ್ವೇಷ ಹಬ್ಬಿಸುತ್ತಿದ್ದರೆ ಭಾರತದಲ್ಲಿ ‘ವಾಂಟೆಡ್’ ಆಗಿರುವ ಮತ್ತು ಮುಸಲ್ಮಾನ ಯುವಕರನ್ನು ಉಗ್ರರನ್ನಾಗಿಸಲು ಪ್ರೋತ್ಸಾಹಿಸುವ ಜಿಹಾದಿ ಡಾ. ಝಾಕೀರ್ ನಾಯಿಕ್ ಇವರ ಹಾಗೂ 100 ಕೋಟಿ ಹಿಂದೂಗಳನ್ನು ಮುಗಿಸುವ ಬಹಿರಂಗ ಬೆದರಿಕೆಯೊಡ್ಡುವ ‘ಎಮ್‌ಐ.ಎಮ್’ನ ಶಾಸಕ ಅಕ್ಬರುದ್ದೀನ್ ಓವೈಸಿ ಇವರ ‘ಫೇಸಬುಕ್ ಪೇಜ್’ ಮೇಲೆ ಏಕೆ ನಿಷೇಧ ಹೇರಿಲ್ಲ ? ಅನೇಕ ಜಿಹಾದಿ ಉಗ್ರವಾದಿ ಸಂಘಟನೆಗಳ ‘ಫೇಸಬುಕ್ ಪೇಜ್’ ಇಂದಿಗೂ ಜಿಹಾದ್‌ನ ಪ್ರಚಾರ ಮಾಡುತ್ತಿವೆ. ಆದುದರಿಂದ ‘ಫೇಸಬುಕ್’ ಭಾರತದಲ್ಲಿ ಮುಸಲ್ಮಾನರಿಗೊಂದು ಹಿಂದೂಗಳಿಗೆ ಮತ್ತೊಂದು ನಿಯಮ ಅಳವಡಿಸಿ ಧಾರ್ಮಿಕ ಪಕ್ಷಪಾತ ಮಾಡುತ್ತಿದ್ದಾರೆ ಎಂದು ಹಿಂದೂ ಜನಜಾಗೃತಿಸ ಸಮಿತಿಯ ರಾಷ್ಟ್ರೀಯ ವಕ್ತಾರರಾದ ಶ್ರೀ. ರಮೇಶ ಶಿಂದೆಯವರು ಈ ಪ್ರಕರಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ಫೇಸಬುಕ್’ ತಕ್ಷಣವೇ ಟಿ. ರಾಜಾಸಿಂಹ ಇವರ ‘ಫೇಸಬುಕ್ ಪೇಜ್’ ಮುಂಚಿನಂತೆ ಆರಂಭಿಸಬೇಕು, ಇಲ್ಲದಿದ್ದರೆ ಹಿಂದೂ ಸಮಾಜಕ್ಕೇ ಫೇಸಬುಕ್ ನಿಷೇಧಿಸುವಂತೆ ಕರೆ ನೀಡಬೇಕಾಗುವುದು, ಎಂದು ಶ್ರೀ. ಶಿಂದೆಯವರು ಎಚ್ಚರಿಕೆ ನೀಡಿದರು.

ದೆಹಲಿಯಲ್ಲಿ ಮತ್ತು ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಗಲಭೆಗಳ ಸಮಯದಲ್ಲಿಯೂ ಮತಾಂಧರು ತಮ್ಮ ‘ಫೇಸ್‌ಬುಕ್ ಪೇಜ್’ನಲ್ಲಿ ಒಟ್ಟಿಗೆ ಸೇರಲು ಕರೆ ನೀಡಿದ್ದರು ಎಂಬುದು ತಿಳಿದುಬಂದಿದೆ. ಭಾರತದ ನಗರಗಳಲ್ಲಿ ಗಲಭೆಗಳಿಗೆ ಭುಗಿಲೆಬ್ಬಿಸಿದ ‘ಫೇಸ್‌ಬುಕ್ ಪೇಜ್’ನಲ್ಲಿ ಫೇಸ್‌ಬುಕ್ ಯಾವುದೇ ಕ್ರಮ ಕೈಗೊಂಡಂತೆ ಕಾಣುತ್ತಿಲ್ಲ. ಅದೇ ರೀತಿ ‘ಫೇಸಬುಕ್’ನಲ್ಲಿ ಇದುವರೆಗೆ ಅನೇಕ ಸಲ ಹಿಂದೂ ದೇವತೆಗಳು, ರಾಷ್ಟ್ರಪುರುಷರ ವಿಷಯದಲ್ಲಿ ಅಶ್ಲೀಲ ಮತ್ತು ಆಕ್ಷೇಪಾರ್ಹ ಪೋಸ್ಟ್ ಪ್ರಸಾರಿತವಾಗುತ್ತಿವೆ. ಇದರ ಬಗ್ಗೆ ಹಿಂದೂತ್ವವಾದಿ ಸಂಘಟನೆಗಳು ಅನೇಕ ಬಾರಿ ‘ಫೇಸ್‌ಬುಕ್’ ಇಂತಹ ಪೋಸ್ಟ್ ಅಥವಾ ಪೇಜ್ ನಿರ್ಬಂಧಿಸುವಂತೆ ವಿನಂತಿಸಿವೆ; ಆದರೆ ಅದರ ಬಗ್ಗೆ ‘ಫೇಸಬುಕ್’ ಎಂದೂ ಕ್ರಮಕೈಗೊಂಡಿಲ್ಲ, ಇದು ‘ಫೇಸಬುಕ್’ನ ಪಕ್ಷಪಾತ!

ಹಿಂದೂ ಜನಜಾಗೃತಿ ಸಮಿತಿಯ ಅಧಿಕೃತ ‘ಪುಟ’ವನ್ನೂ ಇದೇ ರೀತಿ 2012 ರಲ್ಲಿ ಯಾವುದೇ ರೀತಿಯ ಕಾರಣವನ್ನು ನೀಡದೇ ಫೇಸ್‌ಬುಕ್’ ಬಂದ್ ಮಾಡಿತ್ತು. ಇದರಿಂದ ‘ಫೇಸ್‌ಬುಕ್’ನ ಹಿಂದೂದ್ವೇಷ ಸ್ಪಷ್ಟವಾಗಿ ಕಾಣುತ್ತದೆ. ಶಾಸಕ ಟಿ. ರಾಜಾಸಿಂಹ ಇವರು ಜನಪ್ರತಿನಿಧಿಯಾಗಿದ್ದಾರೆ, ಅವರ ‘ಪೇಜ್’ ಬಂದ್ ಮಾಡಿದ್ದರಿಂದ ಜನಸಾಮಾನ್ಯರಿಗೆ ಅವರೊಂದಿಗೆ ನೇರ ಸಂಪರ್ಕ ಮಾಡಿ ಸಮಸ್ಯೆಗಳನ್ನು ಬಿಡಿಸುವಲ್ಲಿ ಅಡಚಣೆಯಾಗಲಿದೆ. ಆದ್ದರಿಂದ ಭಾರತ ಸರಕಾರವು ‘ಫೇಸ್‌ಬುಕ್’ನ ಈ ಹಿಂದೂವಿರೋಧಿ ಕೃತ್ಯಕ್ಕೆ ನಿರ್ಬಂಧ ಹೇರಬೇಕು, ಎಂದು ಕೇಂದ್ರ ಸರಕಾರದ ಬಳಿ ನಾವು ಆಗ್ರಹಿಸುತ್ತೇವೆ. ಶಾಸಕ ಟಿ. ರಾಜಾ ಸಿಂಹ ಇವರ ಫೇಸ್‌ಬುಕ್ ಪೇಜ್ ಬಂದ್ ಮಾಡುವುದೆಂದರೆ ಒಂದು ರೀತಿಯಲ್ಲಿ ಹಿಂದೂಜನರ ಧ್ವನಿಯನ್ನು ಅದುಮುವ ಕೆಲಸವನ್ನು ‘ಫೇಸ್‌ಬುಕ್’ ಮಾಡುತ್ತಿದೆ. ಭಾರತದಲ್ಲಿ ಕೋಟಿಗಟ್ಟಲೆ ರೂಪಾಯಿಯನ್ನು ಸಂಪಾಧಿಸುವ ಫೇಸ್‌ಬುಕ್ ಒಂದು ವೇಳೆ ಬಹುಸಂಖ್ಯಾತ ಹಿಂದೂಗಳ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಲ್ಲಿ, ಹಿಂದೂಗಳೂ ‘ಫೇಸ್‌ಬುಕ್’ನ್ನು ಬಹಿಷ್ಕರಿಸುವರು, ಎಂಬುದು ‘ಫೇಸ್‌ಬುಕ್’ನವರು ಗಮನದಲ್ಲಿಡಬೇಕು.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 4 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 8 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 10 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 7 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 9 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 14 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ