ಕಾಡಾನೆಗೆ ಬೆಂಕಿ ಹಚ್ಚಿ ಹತ್ಯೆಗೈದ ಕಿರಾತಕರು! ಪ್ರಾಣಬಿಟ್ಟ ಆನೆಯ ಬಿಗಿದಪ್ಪಿಕೊಂಡು ಕಣ್ಣೀರಿಟ್ಟ ಅರಣ್ಯ ಸಿಬ್ಬಂದಿ!

ತಮಿಳುನಾಡು: ತಮಿಳುನಾಡಿನ ನೀಲಗಿರಿ ಜಿಲ್ಲೆಯ ಮಾಸಿನಗುಡಿಯಲ್ಲಿ ಅತ್ಯಂತ ಕ್ರೂರವಾಗಿ ಆನೆಯನ್ನು ಕೊಲ್ಲಲಾಗಿದೆ. ಕಾಡಿನಿಂದ ನಾಡಿಗೆ ಆಹಾರ ಹುಡುಕಿಕೊಂಡು ಬಂದ ಒಂಟಿ ಸಲಗವೊಂದಕ್ಕೆ ಬೆಂಕಿ ಹಚ್ಚಿ ಹತ್ಯೆಗೈದ ಘಟನೆ ವರದಿಯಾಗಿದೆ.

https://youtu.be/LQC-RmohkXc

ಮಾಸಿನಗುಡಿಯಲ್ಲಿನ ರೆಸಾರ್ಟ್ ಬಳಿ ಆನೆಯೊಂದು ಆಹಾರ ಹುಡುಕುತ್ತಾ ಬಂದಿದೆ. ರಾತ್ರಿ ವೇಳೆ ಬಂದ ಆನೆಗೆ ಇಲ್ಲಿನ ಮೂವರ ಗುಂಪು ಚಿತ್ರ ಹಿಂಸೆ ನೀಡಿದೆ.

ಬೆಂಕಿ ನಂದಿಸಲು ಆನೆ ಹರಸಾಹಸಪಟ್ಟಿದೆ. ಮರಗಳಿಗೆ ದೇಹವನ್ನು ಉಜ್ಜತೊಡಗಿದೆ. ಮೊದಲೆ ಬೆಂಕಿ ತಗುಲಿದ ಕಾರಣ ಆನೆಯ ಚರ್ಮ ಬೆಂದು ಹೋಗಿದೆ. ಇತ್ತ ಮರಗಳಿಗೆ ಉಜ್ಜಿದ ಕಾರಣ ಚರ್ಮ ಕಿತ್ತು ಹೋಗಿದೆ. ಕೆಲ ದಿನಗಳ ಬಳಿಕ ಅರಣ್ಯ ಸಿಬ್ಬಂದಿ 40 ವರ್ಷ ಆನೆ ಜಲಾಶಯದ ಸಮೀಪ ಬಿದ್ದಿರುವುದು ಕಣ್ಣಗೆ ಬಿದ್ದಿದೆ. ತಕ್ಷಣವೇ ಆನೆಯನ್ನು ರಕ್ಷಿಸಲು ಧಾವಿಸಿದ್ದಾರೆ.

ನೋವಿನಿಂದ ನರಳಿದ ಆನೆ ಪ್ರಾಣಬಿಟ್ಟಿದೆ. ಚರ್ಮ ಬೆಂದು ಹಾಗೂ ಕಿತ್ತು ಹೋದ ಕಾರಣ ಸೆಪ್ಟಿಕ್ ಆಗಿದೆ. ಇನ್ನು ಚರ್ಮ ಕೊಳೆಯಲು ಆರಂಭಿಸಿದೆ. ಆಹಾರ ಸೇವಿಸಲು ಸಾಧ್ಯವಾಗದೆ, ನೀರು ಸೇವಿಸದ ಆನೆ ನರಕ ವೇದನೆಯಿಂದ ಪ್ರಾಣ ಬಿಟ್ಟಿದೆ.

ಈ ಬಗ್ಗೆ ತಕ್ಷಣವೇ ಅರಣ್ಯ ಇಲಾಖೆ ತನಿಖೆ ಆರಂಭಿಸಿದ್ದು ಈ ಕುರಿತ ವಿಡಿಯೋ ಪಡೆದ ಇಲಾಖೆಯು ಪ್ರಶಾಂತ್ ಹಾಗೂ ರೇಮಂಡ್ ಡೀನ್ ಎಂಬ ಇಬ್ಬರನ್ನೂ ಅರೆಸ್ಟ್ ಮಾಡಿದ್ದಾರೆ. ಮತ್ತೊರ್ವ ಆರೋಪಿ ರಿಕ್ಕಿ ರಿಯಾನ್ ಕೂಡ ಈ ಕ್ರೂರ ಘಟನೆಯಲ್ಲಿ ಪಾಲು ಹೊಂದಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಾಣ ಬಿಟ್ಟ ಆನೆಯನ್ನು ಕೊಂಡೊಯ್ಯುವ ವೇಳೆ ಅರಣ್ಯ ಸಿಬ್ಬಂದಿ ಕಣ್ಣೀರಿಟ್ಟ ವಿಡಿಯೋ ಮತ್ತಷ್ಟು ನೋವುಂಟು ಮಾಡುತ್ತಿದೆ. ಆನೆ ಸೊಂಡಿಲ ಹಿಡಿದು ಅರಣ್ಯ ಸಿಬ್ಬಂದಿ ಅತ್ತಿದ್ದಾರೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಲು ಸಾಮಾಜಿಕ ಜಾಲತಾಣಲ್ಲಿ ಆಗ್ರಹಿಸಿದ್ದಾರೆ. ಇಷ್ಟೇ ಅಲ್ಲ ಕಾಡುಪ್ರಾಣಿಗಳ ಮೇಲಿನ ಕ್ರೌರ್ಯಕ್ಕೆ ಅಂತ್ಯಕಾಣಿಸಲು ಕಠಿಣ ಕಾನೂನಿನ ಅಗತ್ಯವಿದೆ ಎಂದು ಒತ್ತಾಯಿಸಿದ್ದಾರೆ.

Spread the love
  • Related Posts

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಮುಂಬೈ: ಐಸಿಸಿ ಟಿ–20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಸಮಗ್ರ ಆಟದ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ…

    Spread the love

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ: ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಇಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ ನೀಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಮಹಾಸ್ವಾಮಿಗಳು ಶಾಸಕ ಹರೀಶ್…

    Spread the love

    You Missed

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 11 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 34 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 49 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 22 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 15 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ

    • By admin
    • March 4, 2026
    • 20 views
    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ