ಸಾಯೋದು ಬೇಡಪ್ಪಾ ಎನ್ನುತ್ತಿರುವ ಮಗಳು, ಸಾವಿನ ಮನೆಕಡೆ ಮುಖ ಮಾಡಿದ ತಂದೆ, ಮಗಳ ಪಾಲಿಗೆ ದೇವರಾಗಿ ಬಂದ ಪೋಲಿಸರು

ಮಂಗಳೂರು: ಕುಟುಂಬದಲ್ಲಿ ದಂಪತಿಗಳಿಬ್ಬರ ನಡುವೆ ನಡೆದ ಕಲಹದಿಂದ ಬೇಸತ್ತ ವಿವಾಹಿತ ಯುವಕನೊಬ್ಬ ತನ್ನ ನಾಲ್ಕು ವರ್ಷದ ಮಗಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದು, ಪಣಂಬೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಇಬ್ಬರನ್ನು ರಕ್ಷಣೆ ಮಾಡಿದ್ದಾರೆ.

ಕಾವೂರು ಅಂಬಿಕಾ ನಗರ ನಿವಾಸಿಯೋರ್ವರು ಸಾಯಲು ಹೋಗಿ ಪೊಲೀಸರಿಂದ ರಕ್ಷಿಸಲ್ಪಟ್ಟವರಾಗಿದ್ದು ಹೆಂಡತಿ ಜೊತೆ ಜಗಳಕ್ಕೆ ಬೇಸತ್ತ ಪತಿ ಸೋಮವಾರ ಸಂಜೆ ತನ್ನ ಮಗಳನ್ನು ತಣ್ಣೀರುಬಾವಿ ಬೀಚ್ ಗೆ ಕರೆದುಕೊಂಡು ಹೋಗಿದ್ದು ನಾವು ಸಾಯೋಣ ಮಗಳೇ, ನಿನ್ನ ತಾಯಿ ಅವಳಿಗೆ ಬೇಕಾದ ರೀತಿ ಇರಲಿ, ನಿನ್ನ ತಾಯಿ ಸರಿ ಇಲ್ಲ ನಮಗೆ ಯಾರೂ ಬೇಡ ಎನ್ನುತ್ತಾ ಸಮುದ್ರದ ನೀರಿನತ್ತ ನಡೆಯುತ್ತಾ ಈ ರೀತಿ ವಿಡಿಯೋ ಮಾಡಿದ್ದಾನೆ.

ವಿಡಿಯೋದಲ್ಲಿ ತುಳುವಿನಲ್ಲಿ ಮಾತನಾಡುತ್ತ ಸಮುದ್ರ ಕಡೆಗೆ ಹೋಗುವುದು ಮಾತ್ರ ಇತ್ತು. ಎಲ್ಲಿಯ ವಿಡಿಯೋ ಎಂದು ಗೊತ್ತಾಗುತ್ತಿರಲಿಲ್ಲ. ಆದರೆ ಸಣ್ಣ ಮಗು ಸಾಯೋದು ಬೇಡಪ್ಪಾ ಎನ್ನುತ್ತಿರುವುದು ವಿಡಿಯೋದಲ್ಲಿ ಕೇಳಿಸುತ್ತಿದ್ದು ಎಂತವರನ್ನು ಮನಕಲುಕುವಂತೆ ಮಾಡುವಂತ್ತಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಈ ವಿಡಿಯೋ ಪಣಂಬೂರು ಪೊಲೀಸರಿಗೆ ತಲುಪಿತ್ತು.‌ ಆದರೆ ವಿಡಿಯೋದಲ್ಲಿ ಆ ವ್ಯಕ್ತಿಯ ಮುಖ ಚಹರೆ ಕಾಣುತ್ತಿರಲಿಲ್ಲ. ಕೇವಲ ಸಮುದ್ರದ ನೀರಿನ ಕಡೆಗೆ ನಡೆಯುತ್ತಾ ಹೋಗುವುದು, ಅದರಲ್ಲಿ ತಂದೆ- ಮಗಳ ನೆರಳು ಮಾತ್ರ ಇತ್ತು. ಪಣಂಬೂರು ಬೀಚ್ ಇರಬೇಕೆಂದು ಪೊಲೀಸರು ಕೂಡಲೇ ಅಲ್ಲಿಗೆ ತೆರಳಿ ಹುಡುಕಾಟ ನಡೆಸಿದ್ದಾರೆ. ಅಲ್ಲದೆ ತಣ್ಣೀರುಬಾವಿ ಸಮುದ್ರ ತೀರಕ್ಕೂ ಪೊಲೀಸ್ ಸಿಬ್ಬಂದಿ ತೆರಳಿ ಅಲ್ಲಿಯೂ ಹುಡುಕಿದ್ದಾರೆ. ಈ ವೇಳೆ ಮಗುವಿನ ಜೊತೆಗೆ ಒಬ್ಬಾತ ಬಂದಿದ್ದು ಹೌದು ಎನ್ನುವ ಮಾಹಿತಿ ಲಭಿಸಿತ್ತು. ಕೂಡಲೇ ಪೊಲೀಸರು ಯುವಕನ ವಿಳಾಸ ಪತ್ತೆ ಹಚ್ಚಿ ಕಾವೂರು ಅಂಬಿಕಾ ನಗರದಲ್ಲಿರುವ ಯುವಕನ ಮನೆ ವಿಳಾಸಕ್ಕೆ ತೆರಳಿದ ಪೊಲೀಸರು, ಮನೆಯ ಒಳಗೆ ತೆರಳಿದಾಗ ತಂದೆ ಪಕ್ಕಾಸಿಗೆ ನೇಣು ಹಗ್ಗ ಹಾಕಿ ಮಗಳ ಜೊತೆಗೆ ನೇಣಿಗೆ ಶರಣಾಗಲು ರೆಡಿಯಾಗಿದ್ದ ಇದನ್ನು ಕಂಡ ಪೊಲೀಸರು ಕೂಡಲೇ ಆತನನ್ನು ಹಿಡಿದುಕೊಂಡಿದ್ದು ಕೆಲವೇ ಕ್ಷಣಗಳಲ್ಲಿ ಸಾಯುತ್ತಿದ್ದ ತಂದೆ- ಮಗಳನ್ನು ರಕ್ಷಣೆ ಮಾಡಿದ್ದಾರೆ. ಕೆಲವೇ ಕ್ಷಣ ತಡವಾದರೂ ಇಬ್ಬರ ಪ್ರಾಣ ಹೋಗುತ್ತಿತ್ತು. ಇದೀಗ ಪೋಲೀಸರ ತುರ್ತು ಸ್ಪಂದನೆಯಿಂದ ಎರಡು ಜೀವಗಳು ಬದುಕುಳಿದಂತಾಗಿದೆ. ಈ ಬಗ್ಗೆ ಪೋಲೀಸರ ಮಹಾತ್ಕಾರ್ಯಕ್ಕೆ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

Spread the love
  • Related Posts

    ಎಕ್ಸೆಲ್ ಪಿಯು ಕಾಲೇಜು ದ್ವಿತೀಯ ಪಿಯುಸಿ ವಿಜ್ಞಾನ & ವಾಣಿಜ್ಯ ವಿಭಾಗದಲ್ಲಿ ಶೇಕಡಾ 100 ಫಲಿತಾಂಶ

    ಗುರುವಾಯನಕೆರೆ: ಬೆಳ್ತಂಗಡಿ ತಾಲೂಕಿನ ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡುತ್ತಿರುವ ಎಕ್ಸೆಲ್ ಪಿ.ಯು ಕಾಲೇಜು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಾಲೇಜಿನ ವಿಜ್ಞಾನ ವಿಭಾಗ ಶೇಕಡಾ 100 ಫಲಿತಾಂಶ ದಾಖಲಿಸಿದೆ. ವಿಜ್ಞಾನ ವಿಭಾಗದ ಅಕ್ಷಯ್ 595 ಅಂಕ ಗಳಿಸಿದ್ರೆ, ಶಿಲ್ಪಿತಾ ಎಚ್ ಎಸ್…

    Spread the love

    ಇಂದು PU ಫಲಿತಾಂಶ ಪ್ರಕಟ – ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಪಡೆಯುವ ಅವಕಾಶ

    ಬೆಂಗಳೂರು: ದಿನಾಂಕ: 09-04-2026 ರಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ. https://karresults.nic.in KarnatakaOne Mobile App ಮೂಲಕವೂ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಾಪ್/ಎಸ್‌ಎಂಎಸ್ (SMS) ಮೂಲಕವೂ…

    Spread the love

    You Missed

    ಎಕ್ಸೆಲ್ ಪಿಯು ಕಾಲೇಜು ದ್ವಿತೀಯ ಪಿಯುಸಿ ವಿಜ್ಞಾನ & ವಾಣಿಜ್ಯ ವಿಭಾಗದಲ್ಲಿ ಶೇಕಡಾ 100 ಫಲಿತಾಂಶ

    • By admin
    • April 9, 2026
    • 22 views
    ಎಕ್ಸೆಲ್ ಪಿಯು ಕಾಲೇಜು ದ್ವಿತೀಯ ಪಿಯುಸಿ ವಿಜ್ಞಾನ & ವಾಣಿಜ್ಯ ವಿಭಾಗದಲ್ಲಿ ಶೇಕಡಾ 100 ಫಲಿತಾಂಶ

    ಇಂದು PU ಫಲಿತಾಂಶ ಪ್ರಕಟ – ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಪಡೆಯುವ ಅವಕಾಶ

    • By admin
    • April 9, 2026
    • 31 views
    ಇಂದು PU ಫಲಿತಾಂಶ ಪ್ರಕಟ – ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಪಡೆಯುವ ಅವಕಾಶ

    ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ MOU: ಕರ್ನಾಟಕ ಸರ್ಕಾರದ ಹೊಸ ಮಾರ್ಗಸೂಚಿ

    • By admin
    • April 7, 2026
    • 78 views
    ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ MOU: ಕರ್ನಾಟಕ ಸರ್ಕಾರದ ಹೊಸ ಮಾರ್ಗಸೂಚಿ

     ಒಂದು ಕಿಡಿ ಬೆಂಕಿ , ಒಂದು ಹಿಡಿ ಮಣ್ಣು, ಒಂದು ಕಾಡಿನ ಅಂತ್ಯ! 

    • By admin
    • April 7, 2026
    • 33 views
     ಒಂದು ಕಿಡಿ ಬೆಂಕಿ , ಒಂದು ಹಿಡಿ ಮಣ್ಣು, ಒಂದು ಕಾಡಿನ ಅಂತ್ಯ! 

    ದ್ವಿತೀಯ ಪಿಯುಸಿ ಫಲಿತಾಂಶ ಮುಂದೂಡಿಕೆ: ಚುನಾವಣಾ ನೀತಿ ಸಂಹಿತೆಯಿಂದ ವಿದ್ಯಾರ್ಥಿಗಳಿಗೆ ನಿರಾಶೆ

    • By admin
    • April 6, 2026
    • 56 views
    ದ್ವಿತೀಯ ಪಿಯುಸಿ ಫಲಿತಾಂಶ ಮುಂದೂಡಿಕೆ: ಚುನಾವಣಾ ನೀತಿ ಸಂಹಿತೆಯಿಂದ ವಿದ್ಯಾರ್ಥಿಗಳಿಗೆ ನಿರಾಶೆ

    ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಕುಟುಂಬಸ್ಥರ ಜೊತೆಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

    • By admin
    • April 6, 2026
    • 77 views
    ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಕುಟುಂಬಸ್ಥರ ಜೊತೆಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ