ಸಾಯೋದು ಬೇಡಪ್ಪಾ ಎನ್ನುತ್ತಿರುವ ಮಗಳು, ಸಾವಿನ ಮನೆಕಡೆ ಮುಖ ಮಾಡಿದ ತಂದೆ, ಮಗಳ ಪಾಲಿಗೆ ದೇವರಾಗಿ ಬಂದ ಪೋಲಿಸರು

ಮಂಗಳೂರು: ಕುಟುಂಬದಲ್ಲಿ ದಂಪತಿಗಳಿಬ್ಬರ ನಡುವೆ ನಡೆದ ಕಲಹದಿಂದ ಬೇಸತ್ತ ವಿವಾಹಿತ ಯುವಕನೊಬ್ಬ ತನ್ನ ನಾಲ್ಕು ವರ್ಷದ ಮಗಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದು, ಪಣಂಬೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಇಬ್ಬರನ್ನು ರಕ್ಷಣೆ ಮಾಡಿದ್ದಾರೆ.

ಕಾವೂರು ಅಂಬಿಕಾ ನಗರ ನಿವಾಸಿಯೋರ್ವರು ಸಾಯಲು ಹೋಗಿ ಪೊಲೀಸರಿಂದ ರಕ್ಷಿಸಲ್ಪಟ್ಟವರಾಗಿದ್ದು ಹೆಂಡತಿ ಜೊತೆ ಜಗಳಕ್ಕೆ ಬೇಸತ್ತ ಪತಿ ಸೋಮವಾರ ಸಂಜೆ ತನ್ನ ಮಗಳನ್ನು ತಣ್ಣೀರುಬಾವಿ ಬೀಚ್ ಗೆ ಕರೆದುಕೊಂಡು ಹೋಗಿದ್ದು ನಾವು ಸಾಯೋಣ ಮಗಳೇ, ನಿನ್ನ ತಾಯಿ ಅವಳಿಗೆ ಬೇಕಾದ ರೀತಿ ಇರಲಿ, ನಿನ್ನ ತಾಯಿ ಸರಿ ಇಲ್ಲ ನಮಗೆ ಯಾರೂ ಬೇಡ ಎನ್ನುತ್ತಾ ಸಮುದ್ರದ ನೀರಿನತ್ತ ನಡೆಯುತ್ತಾ ಈ ರೀತಿ ವಿಡಿಯೋ ಮಾಡಿದ್ದಾನೆ.

ವಿಡಿಯೋದಲ್ಲಿ ತುಳುವಿನಲ್ಲಿ ಮಾತನಾಡುತ್ತ ಸಮುದ್ರ ಕಡೆಗೆ ಹೋಗುವುದು ಮಾತ್ರ ಇತ್ತು. ಎಲ್ಲಿಯ ವಿಡಿಯೋ ಎಂದು ಗೊತ್ತಾಗುತ್ತಿರಲಿಲ್ಲ. ಆದರೆ ಸಣ್ಣ ಮಗು ಸಾಯೋದು ಬೇಡಪ್ಪಾ ಎನ್ನುತ್ತಿರುವುದು ವಿಡಿಯೋದಲ್ಲಿ ಕೇಳಿಸುತ್ತಿದ್ದು ಎಂತವರನ್ನು ಮನಕಲುಕುವಂತೆ ಮಾಡುವಂತ್ತಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಈ ವಿಡಿಯೋ ಪಣಂಬೂರು ಪೊಲೀಸರಿಗೆ ತಲುಪಿತ್ತು.‌ ಆದರೆ ವಿಡಿಯೋದಲ್ಲಿ ಆ ವ್ಯಕ್ತಿಯ ಮುಖ ಚಹರೆ ಕಾಣುತ್ತಿರಲಿಲ್ಲ. ಕೇವಲ ಸಮುದ್ರದ ನೀರಿನ ಕಡೆಗೆ ನಡೆಯುತ್ತಾ ಹೋಗುವುದು, ಅದರಲ್ಲಿ ತಂದೆ- ಮಗಳ ನೆರಳು ಮಾತ್ರ ಇತ್ತು. ಪಣಂಬೂರು ಬೀಚ್ ಇರಬೇಕೆಂದು ಪೊಲೀಸರು ಕೂಡಲೇ ಅಲ್ಲಿಗೆ ತೆರಳಿ ಹುಡುಕಾಟ ನಡೆಸಿದ್ದಾರೆ. ಅಲ್ಲದೆ ತಣ್ಣೀರುಬಾವಿ ಸಮುದ್ರ ತೀರಕ್ಕೂ ಪೊಲೀಸ್ ಸಿಬ್ಬಂದಿ ತೆರಳಿ ಅಲ್ಲಿಯೂ ಹುಡುಕಿದ್ದಾರೆ. ಈ ವೇಳೆ ಮಗುವಿನ ಜೊತೆಗೆ ಒಬ್ಬಾತ ಬಂದಿದ್ದು ಹೌದು ಎನ್ನುವ ಮಾಹಿತಿ ಲಭಿಸಿತ್ತು. ಕೂಡಲೇ ಪೊಲೀಸರು ಯುವಕನ ವಿಳಾಸ ಪತ್ತೆ ಹಚ್ಚಿ ಕಾವೂರು ಅಂಬಿಕಾ ನಗರದಲ್ಲಿರುವ ಯುವಕನ ಮನೆ ವಿಳಾಸಕ್ಕೆ ತೆರಳಿದ ಪೊಲೀಸರು, ಮನೆಯ ಒಳಗೆ ತೆರಳಿದಾಗ ತಂದೆ ಪಕ್ಕಾಸಿಗೆ ನೇಣು ಹಗ್ಗ ಹಾಕಿ ಮಗಳ ಜೊತೆಗೆ ನೇಣಿಗೆ ಶರಣಾಗಲು ರೆಡಿಯಾಗಿದ್ದ ಇದನ್ನು ಕಂಡ ಪೊಲೀಸರು ಕೂಡಲೇ ಆತನನ್ನು ಹಿಡಿದುಕೊಂಡಿದ್ದು ಕೆಲವೇ ಕ್ಷಣಗಳಲ್ಲಿ ಸಾಯುತ್ತಿದ್ದ ತಂದೆ- ಮಗಳನ್ನು ರಕ್ಷಣೆ ಮಾಡಿದ್ದಾರೆ. ಕೆಲವೇ ಕ್ಷಣ ತಡವಾದರೂ ಇಬ್ಬರ ಪ್ರಾಣ ಹೋಗುತ್ತಿತ್ತು. ಇದೀಗ ಪೋಲೀಸರ ತುರ್ತು ಸ್ಪಂದನೆಯಿಂದ ಎರಡು ಜೀವಗಳು ಬದುಕುಳಿದಂತಾಗಿದೆ. ಈ ಬಗ್ಗೆ ಪೋಲೀಸರ ಮಹಾತ್ಕಾರ್ಯಕ್ಕೆ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

Spread the love
  • Related Posts

    ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಸಕಲೇಶಪುರ ಹಾಗೂ ಜನಜಾಗೃತಿ ಪ್ರಾದೇಶಿಕ ವಿಭಾಗ, ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಸಕಲೇಶಪುರ ತಾಲೂಕಿನ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಗಾಗಿ ಒಂದು ದಿನದ ವಿಶೇಷ ತರಬೇತಿ…

    Spread the love

    ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ

    ಬೆಳ್ತಂಗಡಿ: ತಾಲೂಕಿನ ಪ್ರಮುಖ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳನ್ನು ಹೊಂದಿರುವ ಮಿತ್ತಬಾಗಿಲು, ಮಲವಂತಿಗೆ ಮತ್ತು ಕಡಿರುದ್ಯಾವರ ಗ್ರಾಮಗಳಲ್ಲಿ ಪದೇಪದೇ ವಿದ್ಯುತ್ ವ್ಯತ್ಯಯ ಉಂಟಾಗುತ್ತಿರುವುದು ಗ್ರಾಮಸ್ಥರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಕಾಜೂರು ದರ್ಗಾ ಶರೀಫ್, ಶ್ರೀ ಕ್ಷೇತ್ರ ಕೊಲ್ಲಿ ದುರ್ಗಾಪರಮೇಶ್ವರಿ ದೇವಸ್ಥಾನ ಸೇರಿದಂತೆ…

    Spread the love

    You Missed

    ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ

    • By admin
    • August 24, 2026
    • 5 views
    ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ

    ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ

    • By admin
    • August 24, 2026
    • 9 views
    ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್

    • By admin
    • August 23, 2026
    • 10 views
    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್

    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    • By admin
    • August 20, 2026
    • 9 views
    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    • By admin
    • August 20, 2026
    • 15 views
    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 11 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ