ಸೈನಿಕರ ಶೌರ್ಯ, ಸಾಹಸ ದೇಶದ ಜನತೆಗೆ ಯುವಪಡೆಗೆ ಸ್ಪೂರ್ತಿದಾಯಕವಾಗಲಿದೆ ‘ಫೆಬ್ರವರಿ 14ರ ಈ ದಿನವನ್ನು ಯಾವೊಬ್ಬ ಭಾರತೀಯನೂ ಮರೆಯಲು ಸಾಧ್ಯವಿಲ್ಲ’: ಪುಲ್ವಾಮಾ ದಾಳಿಯನ್ನು ನೆನೆದ ಪ್ರಧಾನಿ ಮೋದಿ

ಚೆನ್ನೈ: ಫೆಬ್ರವರಿ 14ರ ಈ ದಿನವನ್ನು ಯಾವ ಭಾರತೀಯನೂ ಮರೆಯಲು ಸಾಧ್ಯವಿಲ್ಲ. ಎರಡು ವರ್ಷಗಳ ಹಿಂದೆ ಜಮ್ಮು-ಕಾಶ್ಮೀರದ ಪುಲ್ವಾಮಾ ದಾಳಿ ನಡೆಯಿತು. ಆ ದಾಳಿಯಲ್ಲಿ ಹುತಾತ್ಮರಾದ ಎಲ್ಲಾ ಯೋಧರಿಗೆ ನಾವು ಶ್ರದ್ಧಾಂಜಲಿ ಸಲ್ಲಿಸುತ್ತೇವೆ. ನಮ್ಮ ಸೇನಾಪಡೆಯ ಮೇಲೆ ನಮಗೆ ಹೆಮ್ಮೆಯಿದೆ. ಸೈನಿಕರ ಶೌರ್ಯ, ಸಾಹಸ ತಲೆಮಾರುಗಳವರೆಗೆ ದೇಶದ ಜನತೆಗೆ ಅದರಲ್ಲೂ ಯುವಪಡೆಗೆ ಸ್ಪೂರ್ತಿದಾಯಕವಾಗಲಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

2019ರ ಫೆಬ್ರವರಿ 14ರಂದು ಜಮ್ಮು-ಕಾಶ್ಮೀರದ ಪುಲ್ವಾಮಾ ಮೇಲೆ ನಡೆದ ಭಯೋತ್ಪಾದಕರ ಆತ್ಮಹತ್ಯಾ ದಾಳಿಯಲ್ಲಿ 40 ಮಂದಿ ಸೈನಿಕರು ಹುತಾತ್ಮರಾಗಿದ್ದರು. ನಂತರ ಉಗ್ರರನ್ನು ಸದೆಬಡಿಯುವಲ್ಲಿ ಭಾರತೀಯ ಸೈನಿಕರು ತೋರಿಸಿದ ಧೈರ್ಯವನ್ನು ಮೆಚ್ಚುವಂಥಹದ್ದು ಎಂದು ಪ್ರಧಾನಿ ಮೋದಿ ಇಂದು ಚೆನ್ನೈಯಲ್ಲಿ ಅರ್ಜುನ್ ಯುದ್ಧ ಟ್ಯಾಂಕ್ ನ್ನು ಸೇನಾ ಮುಖ್ಯಸ್ಥ ಜನರಲ್ ಎಂ ಎಂ ನರವಣೆ ಅವರಿಗೆ ಹಸ್ತಾಂತರಿಸಿ ಮಾತನಾಡಿದರು.

ನಂತರ ಉಗ್ರರನ್ನು ಸದೆಬಡಿಯುವಲ್ಲಿ ಭಾರತೀಯ ಸೈನಿಕರು ತೋರಿಸಿದ ಧೈರ್ಯ ಮೆಚ್ಚುವಂಥಹದ್ದು ಎಂದು ಪ್ರಧಾನಿ ಮೋದಿ ಇಂದು ಚೆನ್ನೈಯಲ್ಲಿ ಅರ್ಜುನ್ ಯುದ್ಧ ಟ್ಯಾಂಕ್ ನ್ನು ಸೇನಾ ಮುಖ್ಯಸ್ಥ ಜನರಲ್ ಎಂ ಎಂ ನರವಣೆ ಅವರಿಗೆ ಹಸ್ತಾಂತರಿಸಿ ನುಡಿದರು.

ತಮಿಳಿನ ಖ್ಯಾತ ಲೇಖಕ ಮತ್ತು ಕವಿ ಸುಬ್ರಹ್ಮಣ್ಯ ಭಾರತಿ ಅವರ ಮಾತುಗಳನ್ನು ಉಲ್ಲೇಖಿಸಿದ ಪ್ರಧಾನಿ, ಸುಬ್ರಹ್ಮಣ್ಯ ಭಾರತಿ ಅವರ ದೃಷ್ಟಿಕೋನದಿಂದ ಸ್ಪೂರ್ತಿ ಪಡೆದು ರಕ್ಷಣಾ ವಲಯದಲ್ಲಿ ಇಂದು ಭಾರತ ಸ್ವಾವಲಂಬಿಯಾಗಲು ಸಾಕಷ್ಟು ಪ್ರಯತ್ನ ಮಾಡುತ್ತಿದೆ ಎಂದರು.

‘ನಾವು ಶಸ್ತ್ರಾಸ್ತ್ರಗಳನ್ನು ತಯಾರಿಸೋಣ, ಪೇಪರ್ ಗಳನ್ನು ತಯಾರಿಸೋಣ, ಫ್ಯಾಕ್ಟರಿಗಳನ್ನು ಮಾಡೋಣ, ಶಾಲೆಗಳು, ವಾಹನಗಳು, ಹಡಗು ನಿರ್ಮಿಸೋಣ, ಸ್ವಾವಲಂಬಿಗಳಾಗೋಣ’ ಎಂದು ಸುಬ್ರಹ್ಮಣ್ಯ ಭಾರತಿ ಹೇಳಿದ್ದರು. ಅವರ ಉಲ್ಲೇಖವನ್ನು ಪ್ರಧಾನಿ ನೆನಪು ಮಾಡಿಕೊಂಡರು.

ಎರಡು ರಕ್ಷಣಾ ಕಾರಿಡಾರ್ ಗಳಲ್ಲಿ ಒಂದು ತಮಿಳು ನಾಡಿನಲ್ಲಿದೆ. ಹೂಡಿಕೆಯ ಮೊತ್ತ ಅದಕ್ಕೆ 8 ಸಾವಿರದ 100 ಕೋಟಿ ರೂಪಾಯಿಯಾಗಿದೆ. ನಮ್ಮ ಗಡಿಗಳನ್ನು ಕಾಪಾಡಲು ಸೈನಿಕರಿಗೆ ಅಗತ್ಯವಾಗಿರುವ ಮತ್ತೊಂದು ಕಾರಿಡಾರನ್ನು ದೇಶಕ್ಕೆ ಸಮರ್ಪಿಸಲು ನನಗೆ ಇಂದು ಹೆಮ್ಮೆಯಾಗುತ್ತಿದೆ ಎಂದು ಮೋದಿ ಹೇಳಿದರು.

ಜಗತ್ತಿನಲ್ಲಿಯೇ ಅತ್ಯಂತ ಆಧುನಿಕ ಶಸ್ತ್ರಪಡೆಗಳನ್ನು ಹೊಂದಿದ ಸೇನಾಪಡೆಯನ್ನಾಗಿ ಭಾರತವನ್ನು ಮಾಡಲು ಸರ್ಕಾರ ಬದ್ಧವಾಗಿದ್ದು ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ, ಅದರೊಟ್ಟಿಗೆ ರಕ್ಷಣಾ ವಲಯದಲ್ಲಿ ಅತ್ಯಂತ ವೇಗವಾಗಿ ಸ್ವಾವಲಂಬನೆ ಸಾಧಿಸಲು ಒತ್ತು ನೀಡಲಾಗುತ್ತಿದೆ ಎಂದು ಪ್ರಧಾನಿ ಹೇಳಿದರು.

Spread the love
  • Related Posts

    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    ಬೆಳ್ತಂಗಡಿ : ಬುರುಡೆ ಪ್ರಕರಣದ ಎಸ್ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬೆಳ್ತಂಗಡಿ ಎಸ್ಐಟಿ ಕಚೇರಿಯಿಂದ ಎಸ್ಪಿ ಸಿ.ಎ.ಸೈಮನ್ , ಇನ್ಸ್‌ಪೆಕ್ಟರ್ ಕುಸುಮಾಧರ್, ಸಿಬ್ಬಂದಿ ಮಂಜುನಾಥ್ ಸೇರಿ ಚಿಕ್ಕಮಗಳೂರು ಜಿಲ್ಲಾ…

    Spread the love

    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಡಬಲು ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ₹2 ಲಕ್ಷ ಅನುದಾನ ವಿತರಣೆ ಸಕಲೇಶಪುರ: ತಾಲೂಕಿನ ಮಡಬಲು ಗ್ರಾಮದ ಐತಿಹಾಸಿಕ ಹಾಗೂ ಭಕ್ತರ ಆರಾಧನಾ ಕೇಂದ್ರವಾಗಿರುವ ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕಾಗಿ ಶ್ರೀ…

    Spread the love

    You Missed

    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    • By admin
    • June 16, 2026
    • 90 views
    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    • By admin
    • June 16, 2026
    • 35 views
    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

    • By admin
    • June 15, 2026
    • 134 views
    ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

    ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಕೀರ್ತಿ HB ನಿಧನ

    • By admin
    • June 15, 2026
    • 76 views
    ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಕೀರ್ತಿ HB ನಿಧನ

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 47 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 84 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ