ಸೈನಿಕರ ಶೌರ್ಯ, ಸಾಹಸ ದೇಶದ ಜನತೆಗೆ ಯುವಪಡೆಗೆ ಸ್ಪೂರ್ತಿದಾಯಕವಾಗಲಿದೆ ‘ಫೆಬ್ರವರಿ 14ರ ಈ ದಿನವನ್ನು ಯಾವೊಬ್ಬ ಭಾರತೀಯನೂ ಮರೆಯಲು ಸಾಧ್ಯವಿಲ್ಲ’: ಪುಲ್ವಾಮಾ ದಾಳಿಯನ್ನು ನೆನೆದ ಪ್ರಧಾನಿ ಮೋದಿ

ಚೆನ್ನೈ: ಫೆಬ್ರವರಿ 14ರ ಈ ದಿನವನ್ನು ಯಾವ ಭಾರತೀಯನೂ ಮರೆಯಲು ಸಾಧ್ಯವಿಲ್ಲ. ಎರಡು ವರ್ಷಗಳ ಹಿಂದೆ ಜಮ್ಮು-ಕಾಶ್ಮೀರದ ಪುಲ್ವಾಮಾ ದಾಳಿ ನಡೆಯಿತು. ಆ ದಾಳಿಯಲ್ಲಿ ಹುತಾತ್ಮರಾದ ಎಲ್ಲಾ ಯೋಧರಿಗೆ ನಾವು ಶ್ರದ್ಧಾಂಜಲಿ ಸಲ್ಲಿಸುತ್ತೇವೆ. ನಮ್ಮ ಸೇನಾಪಡೆಯ ಮೇಲೆ ನಮಗೆ ಹೆಮ್ಮೆಯಿದೆ. ಸೈನಿಕರ ಶೌರ್ಯ, ಸಾಹಸ ತಲೆಮಾರುಗಳವರೆಗೆ ದೇಶದ ಜನತೆಗೆ ಅದರಲ್ಲೂ ಯುವಪಡೆಗೆ ಸ್ಪೂರ್ತಿದಾಯಕವಾಗಲಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

2019ರ ಫೆಬ್ರವರಿ 14ರಂದು ಜಮ್ಮು-ಕಾಶ್ಮೀರದ ಪುಲ್ವಾಮಾ ಮೇಲೆ ನಡೆದ ಭಯೋತ್ಪಾದಕರ ಆತ್ಮಹತ್ಯಾ ದಾಳಿಯಲ್ಲಿ 40 ಮಂದಿ ಸೈನಿಕರು ಹುತಾತ್ಮರಾಗಿದ್ದರು. ನಂತರ ಉಗ್ರರನ್ನು ಸದೆಬಡಿಯುವಲ್ಲಿ ಭಾರತೀಯ ಸೈನಿಕರು ತೋರಿಸಿದ ಧೈರ್ಯವನ್ನು ಮೆಚ್ಚುವಂಥಹದ್ದು ಎಂದು ಪ್ರಧಾನಿ ಮೋದಿ ಇಂದು ಚೆನ್ನೈಯಲ್ಲಿ ಅರ್ಜುನ್ ಯುದ್ಧ ಟ್ಯಾಂಕ್ ನ್ನು ಸೇನಾ ಮುಖ್ಯಸ್ಥ ಜನರಲ್ ಎಂ ಎಂ ನರವಣೆ ಅವರಿಗೆ ಹಸ್ತಾಂತರಿಸಿ ಮಾತನಾಡಿದರು.

ನಂತರ ಉಗ್ರರನ್ನು ಸದೆಬಡಿಯುವಲ್ಲಿ ಭಾರತೀಯ ಸೈನಿಕರು ತೋರಿಸಿದ ಧೈರ್ಯ ಮೆಚ್ಚುವಂಥಹದ್ದು ಎಂದು ಪ್ರಧಾನಿ ಮೋದಿ ಇಂದು ಚೆನ್ನೈಯಲ್ಲಿ ಅರ್ಜುನ್ ಯುದ್ಧ ಟ್ಯಾಂಕ್ ನ್ನು ಸೇನಾ ಮುಖ್ಯಸ್ಥ ಜನರಲ್ ಎಂ ಎಂ ನರವಣೆ ಅವರಿಗೆ ಹಸ್ತಾಂತರಿಸಿ ನುಡಿದರು.

ತಮಿಳಿನ ಖ್ಯಾತ ಲೇಖಕ ಮತ್ತು ಕವಿ ಸುಬ್ರಹ್ಮಣ್ಯ ಭಾರತಿ ಅವರ ಮಾತುಗಳನ್ನು ಉಲ್ಲೇಖಿಸಿದ ಪ್ರಧಾನಿ, ಸುಬ್ರಹ್ಮಣ್ಯ ಭಾರತಿ ಅವರ ದೃಷ್ಟಿಕೋನದಿಂದ ಸ್ಪೂರ್ತಿ ಪಡೆದು ರಕ್ಷಣಾ ವಲಯದಲ್ಲಿ ಇಂದು ಭಾರತ ಸ್ವಾವಲಂಬಿಯಾಗಲು ಸಾಕಷ್ಟು ಪ್ರಯತ್ನ ಮಾಡುತ್ತಿದೆ ಎಂದರು.

‘ನಾವು ಶಸ್ತ್ರಾಸ್ತ್ರಗಳನ್ನು ತಯಾರಿಸೋಣ, ಪೇಪರ್ ಗಳನ್ನು ತಯಾರಿಸೋಣ, ಫ್ಯಾಕ್ಟರಿಗಳನ್ನು ಮಾಡೋಣ, ಶಾಲೆಗಳು, ವಾಹನಗಳು, ಹಡಗು ನಿರ್ಮಿಸೋಣ, ಸ್ವಾವಲಂಬಿಗಳಾಗೋಣ’ ಎಂದು ಸುಬ್ರಹ್ಮಣ್ಯ ಭಾರತಿ ಹೇಳಿದ್ದರು. ಅವರ ಉಲ್ಲೇಖವನ್ನು ಪ್ರಧಾನಿ ನೆನಪು ಮಾಡಿಕೊಂಡರು.

ಎರಡು ರಕ್ಷಣಾ ಕಾರಿಡಾರ್ ಗಳಲ್ಲಿ ಒಂದು ತಮಿಳು ನಾಡಿನಲ್ಲಿದೆ. ಹೂಡಿಕೆಯ ಮೊತ್ತ ಅದಕ್ಕೆ 8 ಸಾವಿರದ 100 ಕೋಟಿ ರೂಪಾಯಿಯಾಗಿದೆ. ನಮ್ಮ ಗಡಿಗಳನ್ನು ಕಾಪಾಡಲು ಸೈನಿಕರಿಗೆ ಅಗತ್ಯವಾಗಿರುವ ಮತ್ತೊಂದು ಕಾರಿಡಾರನ್ನು ದೇಶಕ್ಕೆ ಸಮರ್ಪಿಸಲು ನನಗೆ ಇಂದು ಹೆಮ್ಮೆಯಾಗುತ್ತಿದೆ ಎಂದು ಮೋದಿ ಹೇಳಿದರು.

ಜಗತ್ತಿನಲ್ಲಿಯೇ ಅತ್ಯಂತ ಆಧುನಿಕ ಶಸ್ತ್ರಪಡೆಗಳನ್ನು ಹೊಂದಿದ ಸೇನಾಪಡೆಯನ್ನಾಗಿ ಭಾರತವನ್ನು ಮಾಡಲು ಸರ್ಕಾರ ಬದ್ಧವಾಗಿದ್ದು ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ, ಅದರೊಟ್ಟಿಗೆ ರಕ್ಷಣಾ ವಲಯದಲ್ಲಿ ಅತ್ಯಂತ ವೇಗವಾಗಿ ಸ್ವಾವಲಂಬನೆ ಸಾಧಿಸಲು ಒತ್ತು ನೀಡಲಾಗುತ್ತಿದೆ ಎಂದು ಪ್ರಧಾನಿ ಹೇಳಿದರು.

Spread the love
  • Related Posts

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಬೆಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಇಂದು ಸದನದಲ್ಲಿ ಕ್ಯಾನ್ಸರ್ ರೋಗಿಗಳಿಗೆ ಅನುಕೂಲ ಆಗುವಂತೆ ಕೆಲವು ನಿಯಮಾವಳಿಗಳನ್ನು ತರುವಂತೆ ಆಗ್ರಹಿಸಿದರು ಕೇಂದ್ರ ಸರ್ಕಾರವು ಬಡವರಿಗೋಸ್ಕರ ಯೋಜಿಸಿರುವ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆಯನ್ನು ಪಡೆಯಲು ಮಂಗಳೂರಿನಲ್ಲಿರುವ ಪ್ರಸಿದ್ಧ ಕ್ಯಾನ್ಸರ್ ಆಸ್ಪತ್ರೆ…

    Spread the love

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಬೆಳ್ತಂಗಡಿ: ಮೆಸ್ಕಾಂ ಎಂದರೆ ದೂರುವರೇ ಹೆಚ್ಚು ದಿನಬೇಳಗಾದ್ರೆ ಮನೆ ಮನೆಗಳಲ್ಲಿ ನಿರಂತರ ಬೆಳಕು ಉರಿಯುತ್ತಲೆ ಇರಬೇಕು ಇಲ್ಲದಿದ್ದರೆ ಮನೆ ಮಾಲೀಕನಿಂದ ಹಿಡಿದು ಕುಟುಂಬದ ಎಲ್ಲಾ ಸದಸ್ಯರು ಹಿಡಿಶಾಪ ಹಾಕೋದು ಮಾತ್ರ ಮೆಸ್ಕಾಂ ಇಲಾಖೆ ಅಥವಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಆದರೆ ಯಾವತ್ತೂ…

    Spread the love

    You Missed

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    • By admin
    • July 23, 2024
    • 56 views
    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    • By admin
    • July 22, 2024
    • 147 views
    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    • By admin
    • July 21, 2024
    • 65 views
    ಶಿರೂರು ಗುಡ್ಡ ಕುಸಿತ  ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ  ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    • By admin
    • July 21, 2024
    • 15 views
    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    • By admin
    • July 21, 2024
    • 18 views
    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು

    • By admin
    • July 21, 2024
    • 148 views
    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು