ಸೈನಿಕರ ಶೌರ್ಯ, ಸಾಹಸ ದೇಶದ ಜನತೆಗೆ ಯುವಪಡೆಗೆ ಸ್ಪೂರ್ತಿದಾಯಕವಾಗಲಿದೆ ‘ಫೆಬ್ರವರಿ 14ರ ಈ ದಿನವನ್ನು ಯಾವೊಬ್ಬ ಭಾರತೀಯನೂ ಮರೆಯಲು ಸಾಧ್ಯವಿಲ್ಲ’: ಪುಲ್ವಾಮಾ ದಾಳಿಯನ್ನು ನೆನೆದ ಪ್ರಧಾನಿ ಮೋದಿ

ಚೆನ್ನೈ: ಫೆಬ್ರವರಿ 14ರ ಈ ದಿನವನ್ನು ಯಾವ ಭಾರತೀಯನೂ ಮರೆಯಲು ಸಾಧ್ಯವಿಲ್ಲ. ಎರಡು ವರ್ಷಗಳ ಹಿಂದೆ ಜಮ್ಮು-ಕಾಶ್ಮೀರದ ಪುಲ್ವಾಮಾ ದಾಳಿ ನಡೆಯಿತು. ಆ ದಾಳಿಯಲ್ಲಿ ಹುತಾತ್ಮರಾದ ಎಲ್ಲಾ ಯೋಧರಿಗೆ ನಾವು ಶ್ರದ್ಧಾಂಜಲಿ ಸಲ್ಲಿಸುತ್ತೇವೆ. ನಮ್ಮ ಸೇನಾಪಡೆಯ ಮೇಲೆ ನಮಗೆ ಹೆಮ್ಮೆಯಿದೆ. ಸೈನಿಕರ ಶೌರ್ಯ, ಸಾಹಸ ತಲೆಮಾರುಗಳವರೆಗೆ ದೇಶದ ಜನತೆಗೆ ಅದರಲ್ಲೂ ಯುವಪಡೆಗೆ ಸ್ಪೂರ್ತಿದಾಯಕವಾಗಲಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

2019ರ ಫೆಬ್ರವರಿ 14ರಂದು ಜಮ್ಮು-ಕಾಶ್ಮೀರದ ಪುಲ್ವಾಮಾ ಮೇಲೆ ನಡೆದ ಭಯೋತ್ಪಾದಕರ ಆತ್ಮಹತ್ಯಾ ದಾಳಿಯಲ್ಲಿ 40 ಮಂದಿ ಸೈನಿಕರು ಹುತಾತ್ಮರಾಗಿದ್ದರು. ನಂತರ ಉಗ್ರರನ್ನು ಸದೆಬಡಿಯುವಲ್ಲಿ ಭಾರತೀಯ ಸೈನಿಕರು ತೋರಿಸಿದ ಧೈರ್ಯವನ್ನು ಮೆಚ್ಚುವಂಥಹದ್ದು ಎಂದು ಪ್ರಧಾನಿ ಮೋದಿ ಇಂದು ಚೆನ್ನೈಯಲ್ಲಿ ಅರ್ಜುನ್ ಯುದ್ಧ ಟ್ಯಾಂಕ್ ನ್ನು ಸೇನಾ ಮುಖ್ಯಸ್ಥ ಜನರಲ್ ಎಂ ಎಂ ನರವಣೆ ಅವರಿಗೆ ಹಸ್ತಾಂತರಿಸಿ ಮಾತನಾಡಿದರು.

ನಂತರ ಉಗ್ರರನ್ನು ಸದೆಬಡಿಯುವಲ್ಲಿ ಭಾರತೀಯ ಸೈನಿಕರು ತೋರಿಸಿದ ಧೈರ್ಯ ಮೆಚ್ಚುವಂಥಹದ್ದು ಎಂದು ಪ್ರಧಾನಿ ಮೋದಿ ಇಂದು ಚೆನ್ನೈಯಲ್ಲಿ ಅರ್ಜುನ್ ಯುದ್ಧ ಟ್ಯಾಂಕ್ ನ್ನು ಸೇನಾ ಮುಖ್ಯಸ್ಥ ಜನರಲ್ ಎಂ ಎಂ ನರವಣೆ ಅವರಿಗೆ ಹಸ್ತಾಂತರಿಸಿ ನುಡಿದರು.

ತಮಿಳಿನ ಖ್ಯಾತ ಲೇಖಕ ಮತ್ತು ಕವಿ ಸುಬ್ರಹ್ಮಣ್ಯ ಭಾರತಿ ಅವರ ಮಾತುಗಳನ್ನು ಉಲ್ಲೇಖಿಸಿದ ಪ್ರಧಾನಿ, ಸುಬ್ರಹ್ಮಣ್ಯ ಭಾರತಿ ಅವರ ದೃಷ್ಟಿಕೋನದಿಂದ ಸ್ಪೂರ್ತಿ ಪಡೆದು ರಕ್ಷಣಾ ವಲಯದಲ್ಲಿ ಇಂದು ಭಾರತ ಸ್ವಾವಲಂಬಿಯಾಗಲು ಸಾಕಷ್ಟು ಪ್ರಯತ್ನ ಮಾಡುತ್ತಿದೆ ಎಂದರು.

‘ನಾವು ಶಸ್ತ್ರಾಸ್ತ್ರಗಳನ್ನು ತಯಾರಿಸೋಣ, ಪೇಪರ್ ಗಳನ್ನು ತಯಾರಿಸೋಣ, ಫ್ಯಾಕ್ಟರಿಗಳನ್ನು ಮಾಡೋಣ, ಶಾಲೆಗಳು, ವಾಹನಗಳು, ಹಡಗು ನಿರ್ಮಿಸೋಣ, ಸ್ವಾವಲಂಬಿಗಳಾಗೋಣ’ ಎಂದು ಸುಬ್ರಹ್ಮಣ್ಯ ಭಾರತಿ ಹೇಳಿದ್ದರು. ಅವರ ಉಲ್ಲೇಖವನ್ನು ಪ್ರಧಾನಿ ನೆನಪು ಮಾಡಿಕೊಂಡರು.

ಎರಡು ರಕ್ಷಣಾ ಕಾರಿಡಾರ್ ಗಳಲ್ಲಿ ಒಂದು ತಮಿಳು ನಾಡಿನಲ್ಲಿದೆ. ಹೂಡಿಕೆಯ ಮೊತ್ತ ಅದಕ್ಕೆ 8 ಸಾವಿರದ 100 ಕೋಟಿ ರೂಪಾಯಿಯಾಗಿದೆ. ನಮ್ಮ ಗಡಿಗಳನ್ನು ಕಾಪಾಡಲು ಸೈನಿಕರಿಗೆ ಅಗತ್ಯವಾಗಿರುವ ಮತ್ತೊಂದು ಕಾರಿಡಾರನ್ನು ದೇಶಕ್ಕೆ ಸಮರ್ಪಿಸಲು ನನಗೆ ಇಂದು ಹೆಮ್ಮೆಯಾಗುತ್ತಿದೆ ಎಂದು ಮೋದಿ ಹೇಳಿದರು.

ಜಗತ್ತಿನಲ್ಲಿಯೇ ಅತ್ಯಂತ ಆಧುನಿಕ ಶಸ್ತ್ರಪಡೆಗಳನ್ನು ಹೊಂದಿದ ಸೇನಾಪಡೆಯನ್ನಾಗಿ ಭಾರತವನ್ನು ಮಾಡಲು ಸರ್ಕಾರ ಬದ್ಧವಾಗಿದ್ದು ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ, ಅದರೊಟ್ಟಿಗೆ ರಕ್ಷಣಾ ವಲಯದಲ್ಲಿ ಅತ್ಯಂತ ವೇಗವಾಗಿ ಸ್ವಾವಲಂಬನೆ ಸಾಧಿಸಲು ಒತ್ತು ನೀಡಲಾಗುತ್ತಿದೆ ಎಂದು ಪ್ರಧಾನಿ ಹೇಳಿದರು.

Spread the love
  • Related Posts

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17ರಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.…

    Spread the love

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ಬೆಳ್ತಂಗಡಿ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.ಸಂಘದ ಅಧ್ಯಕ್ಷ ವಿಜಯ ಆರ್. ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಒಂಜರೆಬೈಲು ಅಂಗನವಾಡಿ ಕೇಂದ್ರದ ಪುಷ್ಪಾ, ಕೊಟ್ರೊಟ್ಟು ಅಂಗನವಾಡಿ ಕೇಂದ್ರದ ಪುಷ್ಪಾ,…

    Spread the love

    You Missed

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 3 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 7 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 22 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 12 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 7 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ