ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

🖊️• ಬರಹ: ರಾಜೇಶ್ ಎಂ ಕಾನರ್ಪ

ಮಂಗಗಳ ಕೈಯಲ್ಲಿ ಕುರುಕುರೇ ಪ್ಯಾಕೇಟ್!!!

ಪ್ರೀತಿಯ ಹೆಸರಿನಲ್ಲಿ ವಾನರಗಳಿಗೆ ವಿಷವಿಕ್ಕುತ್ತಿರುವ ಮನುಜಕುಲ???

ವಾನರಗಳಿಗೆ ಪ್ಯಾಕೆಟ್‌ ತಿಂಡಿ ಬೇಡ, ಪ್ರಕೃತಿಯ ಆಹಾರ ಬೇಕು!!!

ಪ್ರಕೃತಿಯ ಮಡಿಲಲ್ಲಿ ಸ್ವತಂತ್ರವಾಗಿ ಬದುಕಬೇಕಾದ ವಾನರಗಳು ಇಂದು ಮನುಷ್ಯರ ಕೈಯಲ್ಲಿರುವ ಕುರುಕುರೆ, ಚಿಪ್ಸ್‌, ಬಿಸ್ಕತ್‌ ಹಾಗೂ ಇತರ ಪ್ಯಾಕೆಟ್‌ ತಿಂಡಿಗಳಿಗಾಗಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನು ನೋಡಿ ನಗಬೇಕೋ, ಅಳಬೇಕೋ ಎಂಬ ಪ್ರಶ್ನೆ ಎದುರಾಗುತ್ತದೆ.

ವಾನರಗಳಿಗೆ ಆಹಾರ ನೀಡುತ್ತಿದ್ದೇವೆ ಎಂಬ ಸಂತೋಷದಲ್ಲಿ ಕೆಲವರು ತಮ್ಮ ಕೈಯಲ್ಲಿರುವ ಪ್ಯಾಕೆಟ್‌ ತಿಂಡಿಗಳನ್ನು ಅವುಗಳಿಗೆ ನೀಡುತ್ತಾರೆ. ಆದರೆ ಇದು ಪ್ರೀತಿ ಅಲ್ಲ; ತಿಳುವಳಿಕೆಯ ಕೊರತೆಯಿಂದಾಗುವ ಹಾನಿ. ಮನುಷ್ಯರಿಗೆ ತಯಾರಿಸಲಾದ ಹೆಚ್ಚು ಉಪ್ಪು, ಮಸಾಲೆ, ಸಕ್ಕರೆ ಮತ್ತು ಸಂಸ್ಕರಿತ ಆಹಾರ ವಾನರಗಳ ನೈಸರ್ಗಿಕ ಆಹಾರ ಪದ್ಧತಿಗೆ ಸೂಕ್ತವಲ್ಲ.

ಕಾಡಿನಲ್ಲಿ ಹಣ್ಣು, ಎಲೆ, ಬೀಜ, ಕಾಯಿ ಹಾಗೂ ಇತರ ನೈಸರ್ಗಿಕ ಆಹಾರಗಳನ್ನು ಹುಡುಕಿ ತಿನ್ನಬೇಕಾದ ವಾನರಗಳು ಮನುಷ್ಯರಿಂದ ಆಹಾರ ಪಡೆಯಲು ಒಗ್ಗಿಕೊಂಡರೆ, ಅವುಗಳ ಸಹಜ ಸ್ವಭಾವವೇ ಬದಲಾಗಬಹುದು.

ಆಹಾರಕ್ಕಾಗಿ ರಸ್ತೆಬದಿಗೆ, ಪ್ರವಾಸಿ ತಾಣಗಳಿಗೆ ಹಾಗೂ ಜನವಸತಿ ಪ್ರದೇಶಗಳಿಗೆ ಬರುವ ಪ್ರವೃತ್ತಿ ಹೆಚ್ಚಬಹುದು. ಇದರಿಂದ ವಾಹನ ಅಪಘಾತ, ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆರೋಗ್ಯ ಸಮಸ್ಯೆಗಳಿಗೂ ಕಾರಣವಾಗಬಹುದು.

ಇನ್ನೊಂದು ದೊಡ್ಡ ಅಪಾಯವೆಂದರೆ “ಕೊಟ್ಟರೆ ಬರುತ್ತದೆ” ಎಂಬ ಅಭ್ಯಾಸ. ಇಂದು ಒಂದು ಪ್ಯಾಕೆಟ್‌ ಕುರುಕುರೆ ಕೊಟ್ಟರೆ, ನಾಳೆ ಮತ್ತೊಂದು ಪ್ಯಾಕೆಟ್‌ಗಾಗಿ ವಾನರ ನಮ್ಮ ಬಳಿಗೆ ಬರಬಹುದು. ಹೀಗೆ ನಾವು ಅವುಗಳನ್ನು ಪ್ರಕೃತಿಯಿಂದ ದೂರ ಮಾಡಿ, ನಮ್ಮ ಮೇಲೆ ಅವಲಂಬಿತರನ್ನಾಗಿ ಮಾಡುತ್ತಿದ್ದೇವೆ.

ವಾನರಗಳ ಮೇಲೆ ನಿಜವಾದ ಕಾಳಜಿ ಇದ್ದರೆ ಅವುಗಳಿಗೆ ಪ್ಯಾಕೆಟ್‌ ಆಹಾರ ನೀಡುವುದನ್ನು ನಿಲ್ಲಿಸಬೇಕು. ಅವುಗಳ ನೈಸರ್ಗಿಕ ವಾಸಸ್ಥಳವನ್ನು ರಕ್ಷಿಸಬೇಕು. ಕಾಡು, ಮರ, ಹಣ್ಣು ನೀಡುವ ಸಸ್ಯಗಳು ಮತ್ತು ನೀರಿನ ಮೂಲಗಳನ್ನು ಉಳಿಸಬೇಕು. ಇದೇ ವನ್ಯಜೀವಿಗಳ ಮೇಲಿನ ನಿಜವಾದ ಪ್ರೀತಿ.

ಓ ಮಾನವರೇ… ವಾನರಗಳಿಗೆ ಕುರುಕುರೆ ಕೊಡುವುದನ್ನು ಪ್ರೀತಿ ಎಂದು ಕರೆಯುವ ಮೊದಲು, ಒಮ್ಮೆ ಯೋಚಿಸಿ. ನಾವು ಅವುಗಳಿಗೆ ಆಹಾರ ಕೊಡುತ್ತಿದ್ದೇವೆಯೋ, ಅಥವಾ ಅವುಗಳ ಸಹಜ ಬದುಕನ್ನೇ ಕಸಿದುಕೊಳ್ಳುತ್ತಿದ್ದೇವೆಯೋ….?

ಪ್ರಕೃತಿ ನಮಗೆ ಎಲ್ಲವನ್ನೂ ಕೊಟ್ಟಿದೆ. ಪ್ರತಿಯಾಗಿ ನಾವು ಕನಿಷ್ಠ ಅದರ ಜೀವಿಗಳನ್ನು ಅವುಗಳ ಸ್ವಾಭಾವಿಕ ಬದುಕಿನಲ್ಲಿ ಬದುಕಲು ಬಿಡೋಣ.

ವಾನರಗಳಿಗೆ ಕುರುಕುರೆ ಬೇಡ…
ಅವುಗಳಿಗೆ ಬೇಕಿರುವುದು ಕಾಡು, ಮರ ಮತ್ತು ಸ್ವತಂತ್ರ ಬದುಕು.

“ಓ ಮಾನವರೇ… ವಾನರಗಳಿಗೆ ಕುರುಕುರೆ, ಚಿಪ್ಸ್‌ ತಿನ್ನಿಸುವುದೇ ಪ್ರೀತಿ ಅಲ್ಲ! ಅವುಗಳ ಆರೋಗ್ಯ, ಪ್ರಕೃತಿ ಮತ್ತು ನೈಸರ್ಗಿಕ ಆಹಾರ ಪದ್ಧತಿಯ ಬಗ್ಗೆ ನಿಮಗೆ ಯಾವಾಗ ಬರುವುದೋ ಒಳ್ಳೆಯ ಬುದ್ಧಿ?”

“ವಾನರಗಳ ಕೈಯಲ್ಲಿರುವ ಪ್ಯಾಕೆಟ್‌… ಮನುಷ್ಯನ ತಪ್ಪಿನ ಸಾಕ್ಷಿಯಾಗಿದೆ

“ಇನ್ನಾದರೂ ಬದಲಾಗೋಣ ಪ್ರಕೃತಿ ಸೌಂದರ್ಯ ಉಳಿಸೋಣ, ಕಾಡಿನಲ್ಲಿ ಹಣ್ಣಿನ ಗಿಡಗಳ ಬಿತ್ತೋನಾ, ಪ್ರಾಣಿಸಂಕುಲ ಬೆಳೆಸೋಣ”

Spread the love
  • Related Posts

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17ರಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.…

    Spread the love

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ಬೆಳ್ತಂಗಡಿ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.ಸಂಘದ ಅಧ್ಯಕ್ಷ ವಿಜಯ ಆರ್. ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಒಂಜರೆಬೈಲು ಅಂಗನವಾಡಿ ಕೇಂದ್ರದ ಪುಷ್ಪಾ, ಕೊಟ್ರೊಟ್ಟು ಅಂಗನವಾಡಿ ಕೇಂದ್ರದ ಪುಷ್ಪಾ,…

    Spread the love

    You Missed

    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    • By admin
    • August 20, 2026
    • 5 views
    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 6 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 9 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 25 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 15 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 13 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ