ಕಾಡಾನೆಗಳ ದಾಳಿ ಪ್ರಕರಣದಲ್ಲಿ ಪುಂಡಾಟ ನಡೆಸಿದ ಆರೋಪದಲ್ಲಿ 7ಜನರ ಬಂಧನ

ಕಡಬ: ಕೊಂಬಾರು ಗ್ರಾಮದ ಮಂಡೆಕರ ಅರಣ್ಯಪ್ರದೇಶದಲ್ಲಿ ಫೆ.23ರಂದು ಸಂಜೆ ಕಾಡಾನೆ ಸೆರೆ ಸಿಕ್ಕಿದ ಬಳಿಕ ಅರಣ್ಯ ಹಾಗೂ ಪೊಲೀಸ್ ಇಲಾಖಾ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಜಖಂಗೊಳಿಸಿದ ಆರೋಪದಲ್ಲಿ 7 ಮಂದಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.

ಫೆ.23ರಂದು ಕೊಂಬಾರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಾಡಾನೆ ಹಿಡಿಯುವ ಕಾರ್ಯಾಚರಣೆಯಲ್ಲಿ ಕಾಡಾನೆಯು ಸೆರೆಸಿಕ್ಕಿದ್ದು ರಾತ್ರಿ 9 ಗಂಟೆ ವೇಳೆಗೆ ಕಾಡಾನೆಯನ್ನು ದುಬಾರೆ ಆನೆ ಬಿಡಾರಕ್ಕೆ ಬಿಟ್ಟು ಬರಲು ಮುಂದಾದಾಗ ಸ್ಥಳದಲ್ಲಿದ್ದ ಕೆಲವು ಜನರು ಸ್ಥಳಕ್ಕೆ ಬಂದು ಕಾಡಾನೆ ತುಂಬಿಸಿದ ಲಾರಿಯನ್ನು ತಡೆದು ನಿಲ್ಲಿಸಿ ಹಿಡಿದಿರುವ ಆನೆಯನ್ನು ಇಲ್ಲಿಯೇ ನಿಲ್ಲಿಸಿ, ಇತರ ಕಾಡಾನೆಗಳನ್ನು ಸೆರೆಹಿಡಿದು ಒಟ್ಟಿಗೆ ಎಲ್ಲಾ ಆನೆಗಳನ್ನು ತೆಗೆದುಕೊಂಡು ಹೋಗಬೇಕು ಎಂದು ಗಲಾಟೆ ನಡೆಸಿದ್ದರು.

ಇನ್ನು ಕಾಡಾನೆಯನ್ನು ಹೆಚ್ಚು ಸಮಯ ಲಾರಿಯಲ್ಲಿ ನಿಲ್ಲಿಸಲು ಆಗುವುದಿಲ್ಲ. ಆದ ಕಾರಣ ನಾವು ಮೊದಲು ಸೆರೆಹಿಡಿದ ಆನೆಯನ್ನು ಬಿಟ್ಟು ಬಂದು ಉಳಿದ ಕಾಡಾನೆಗಳನ್ನು ಸೆರೆಹಿಡಿಯುವುದಾಗಿ ಹೇಳಿದರೂ ಕೇಳದ ಆರೋಪಿಗಳು ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದಾರೆ.

ಗಲಾಟೆಯಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳಿಗೂ ಮಾಹಿತಿ ನೀಡಿದ್ದು, ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಬಂದು ಜನರಿಗೆ ತಿಳುವಳಿಕೆ ಹೇಳಿದರೂ ಕೇಳದೆ ಆರೋಪಿತರು ಏಕಾಏಕಿ ಸುಮಾರು 09.30 ಗಂಟೆಗೆ ಸಮವಸ್ತ್ರದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರಿಗೂ ಮತ್ತು ಅರಣ್ಯ ಸಿಬ್ಬಂದಿಯವರಿಗೂ ಕಲ್ಲು ತೂರಾಟ ಮಾಡಿರುತ್ತಾರೆ. ಕಲ್ಲು ತೂರಾಟದಿಂದ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಹಾಗೂ ಪೊಲೀಸರಿಗೂ ಗಾಯಗಳಗಿರುತ್ತದೆ. ಬಳಿಕ ಆರೋಪಿಗಳು ಸ್ಥಳದಲ್ಲಿ ನಿಲ್ಲಿಸಿದ್ದ ಅರಣ್ಯ ಇಲಾಖಾ ವಾಹನ ಹಾಗೂ ಪೊಲೀಸು ಇಲಾಖಾ ವಾಹನಗಳ ಮೇಲೂ ಕಲ್ಲು ತೂರಾಟ ಮಾಡಿ ವಾಹನಗಳನ್ನು ಜಖಂ ಮಾಡಿರುತ್ತಾರೆ ಎಂದು ಉಪ ವಲಯ ಅರಣ್ಯ ಅಧಿಕಾರಿಯವರು ಕಡಬ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ದೂರಿನ ಅನ್ವಯ ಕಡಬ ಪೊಲೀಸ್ ಠಾಣೆಯಲ್ಲಿ cr no 18/2023.ಕಲಂ:143,144,147,148,341,353,332,307,427,504,506 ಜೊತೆಗೆ 149 ಐ.ಪಿ.ಸಿ ಮತ್ತು ಕಲಂ: 2(ಬಿ),Karnataka Prevention of Distruction&loss Of Property Act-1981 ರಂತೆ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದಲ್ಲಿ 7 ಜನ ಆರೋಪಿತರನ್ನು ದಸ್ತಗಿರಿ ಮಾಡಲಾಗಿದ್ದು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 60 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ