ನಾಳೆಯಿಂದ ಸಾರ್ವಜನಿಕರಿಗೆ ಮುಕ್ತವಾಗಲಿದೆ ಗಡಾಯಿಕಲ್ಲು ಚಾರಣ; ದಿನಕ್ಕೆ 500 ಮಂದಿಗೆ ಮಾತ್ರ ಅವಕಾಶ

ಬೆಳ್ತಂಗಡಿ, ಜೂನ್ 24: ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರಿಯ ಪ್ರವಾಸಿ ತಾಣ ಹಾಗೂ ಚಾರಣ ಪ್ರಿಯರ ನೆಚ್ಚಿನ ಗಮ್ಯಸ್ಥಾನವಾದ ಗಡಾಯಿಕಲ್ಲು (ಜಮಲಾಬಾದ್ ಕೋಟೆ) ನಾಳೆಯಿಂದ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಲಿದ್ದು, ಪ್ರವಾಸಿಗರು ಕೆಲವು ಪ್ರಮುಖ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.

ಪರಿಸರದ ಮೇಲಿನ ಒತ್ತಡವನ್ನು ನಿಯಂತ್ರಿಸುವ ಉದ್ದೇಶದಿಂದ ದಿನಕ್ಕೆ ಕೇವಲ 500 ಪ್ರವಾಸಿಗರಿಗೆ ಮಾತ್ರ ಪ್ರವೇಶ ಅವಕಾಶ ಕಲ್ಪಿಸಲಾಗಿದೆ. ಚಾರಣಕ್ಕೆ ತೆರಳಲು ಬಯಸುವವರು ಮುಂಚಿತವಾಗಿ ಅರಣ್ಯ ಇಲಾಖೆಯ ಅಧಿಕೃತ ವೆಬ್‌ಸೈಟ್ kudremukhanationalpark.in ನಲ್ಲಿ ಆನ್‌ಲೈನ್ ಪ್ರೀ-ರಿಜಿಸ್ಟ್ರೇಷನ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.

ಪ್ರವೇಶ ಸಮಯವನ್ನು ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಿಗದಿಪಡಿಸಲಾಗಿದೆ. ಮಧ್ಯಾಹ್ನ 1 ಗಂಟೆಯೊಳಗೆ 500 ಜನರ ಮಿತಿ ಪೂರ್ಣಗೊಂಡಲ್ಲಿ ತಕ್ಷಣವೇ ಪ್ರವೇಶ ದ್ವಾರವನ್ನು ಮುಚ್ಚಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಾರಣ ಆರಂಭವಾಗುವ ತಪಾಸಣಾ ಕೇಂದ್ರದಲ್ಲಿ ಪ್ರತಿಯೊಬ್ಬ ಪ್ರವಾಸಿಗರೂ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಸೇರಿದಂತೆ ಯಾವುದೇ ಅಧಿಕೃತ ಗುರುತಿನ ಚೀಟಿಯನ್ನು ತೋರಿಸುವುದು ಕಡ್ಡಾಯವಾಗಿದೆ.

ಆನ್‌ಲೈನ್‌ನಲ್ಲಿ ಕೇವಲ ನೋಂದಣಿ ಮಾತ್ರ ಮಾಡಿಕೊಳ್ಳಬೇಕಾಗಿದ್ದು, ಪ್ರವೇಶ ಶುಲ್ಕವನ್ನು ಸ್ಥಳದಲ್ಲೇ ನಗದು ರೂಪದಲ್ಲಿ ಪಾವತಿಸಬೇಕಾಗುತ್ತದೆ. ಆನ್‌ಲೈನ್ ಪಾವತಿ ವ್ಯವಸ್ಥೆ ಲಭ್ಯವಿರುವುದಿಲ್ಲ.

ಈ ಕುರಿತು ಮಾಹಿತಿ ನೀಡಿರುವ ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ವಲಯ ಅರಣ್ಯಾಧಿಕಾರಿ ಶರ್ಮಿಷ್ಠ, ಪ್ರವಾಸಿಗರು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಪರಿಸರ ಸಂರಕ್ಷಣೆಗೆ ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 4 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 5 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 9 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 8 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 14 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    • By admin
    • July 16, 2026
    • 15 views
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ