ಅಂತರ್ ರಾಜ್ಯ ಗಾಂಜಾ ಸಾಗಾಟಗಾರರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ರ ಬಲೆಗೆ!ಗಾಂಜಾ ಸಾಗಾಟದ ಬೃಹತ್ ಜಾಲ ಪತ್ತೆ.!

ಮಂಗಳೂರು: ಅಂತರ್ ರಾಜ್ಯ ಗಾಂಜಾ ಸಾಗಾಟಗಾರರ ಬೃಹತ್ ಜಾಲವನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಪತ್ತೆ ಹಚ್ಚಿ ಆರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಬರೋಬ್ಬರಿ 175ಕೆ.ಜಿ ಗಾಂಜ ಸಹಿತ ಮೂವರನ್ನು ಬಂಧಿಸುವಲ್ಲಿ ಪೋಲೀಸರು ಯಶಸ್ವಿಯಾಗಿದ್ದಾರೆ.

ದಿನಾಂಕ 11 08. 2020 ರಂದು ಬೆಳಿಗ್ಗೆ ಸಮಯ ಸುಮಾರು 06.30 ಗಂಟೆಗೆ ಪುತ್ತೂರು ನಗರ ಠಾಣಾ ಪೊಲೀಸ್‌ ನಿರೀಕ್ಷಕರು ತಮ್ಮ ಠಾಣಾ ಪೊಲೀಸ್ ಉಪನಿರೀಕ್ಷಕರು ಹಾಗೂ ಠಾಣಾ ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಪಾಟ್ರಕೋಡಿ ಎಂಬಲ್ಲಿ ಕೆಎ.19.ಎಎ.9294 ನೊಂದಣಿ ಸಂಖ್ಯೆಯ ಪಿಕ್‌ ಆಪ್‌ ವಾಹನ ಮತ್ತು ಕೆಎಲ್ 14-ಎಕ್ಸ್-9707 ನೊಂದಣಿ ಸಂಖ್ಯೆಯ ಕಾರೊಂದರಲ್ಲಿ ಅಕ್ರಮವಾಗಿ ಅಪಾರ ಪ್ರಮಾಣದ ಗಾಂಜಾ ಸಾಗಾಟ ಮಾಡುತ್ತಿದ್ದಾಗ ದಾಳಿ ನಡೆಸಿ ರೂ 17,50,000/- ಮೌಲ್ಯದ ಸುಮಾರು 175 ಕೆ.ಜಿ ಗಾಂಜಾ, ಸುಮಾರು ರೂ 3,00,000/- ಮೌಲ್ಯದ ಪಿಕ್ ಅಪ್ ವಾಹನ, ಸುಮಾರು ರೂ 4,00,000 /- ಮೌಲ್ಯದ ಕಾರು ಸೇರಿದಂತೆ ಒಟ್ಟು ರೂ 24,50,000/- ಸೊತ್ತುಗಳನ್ನು ವಶಕ್ಕೆ ಪಡೆದಿರುತ್ತಾರೆ.

ಸದರಿ ಸೊತ್ತುಗಳೊಂದಿಗೆ ಆರೋಪಿಗಳಾದ ಇಬ್ರಾಹಿಂ ಯಾನೆ ಅರ್ಷದ್ ಯಾನೆ ಅಚ್ಚು ಪ್ರಾಯ 26 ವರ್ಷ ವಾಸ: ಆಯಿಷಾ ಮಂಜಿಲ್ ದೂರ್ಮಕ್ಕಾಡ್ (Doormarkad) ಮನೆ ಮಿಜಾ ಮಂಜೇಶ್ವರ ಕಾಸರಗೋಡು ಕೇರಳ,

ಮೊಹಮ್ಮದ್ ಶಫಿಕ್ ಪ್ರಾಯ 31 ವರ್ಷ ತಂದೆ: ದಿ.ಮುಸ್ತಫಾ ವಾಸ: ಮಿಜಿರ್ ಪಳ್ಳ ಮನೆ (Majirpalla) ಹೊಸಂಗಡಿ ಮಂಜೇಶ್ವರ ಕಾಸರಗೋಡು ಕೇರಳ,

ಖಲಂದರ್ ಶಾಫಿ ಪ್ರಾಯ 26 ವರ್ಷ ತಂದೆ: ಅಬ್ದುಲ್ಲಾ ವಾಸ: ಮಡಕುಂಜ ಮನೆ ಕನ್ಯಾನ ಗ್ರಾಮ ಮತ್ತು ಅಂಚೆ ಬಂಟ್ವಾಳ ಎಂಬವರುಗಳನ್ನು ಬಂಧಿಸಲಾಗಿದೆ.

ಆರೋಪಿಗಳ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕಲಂ 8 (C) r/w 20(b) (ii) C ಎನ್.ಡಿ.ಪಿ.ಎಸ್ ಕಾಯಿದೆಯಂತೆ ಪ್ರಕರಣ ದಾಖಲಿಸಲಾಗಿರುತ್ತದೆ.

ಸದರಿ ಆರೋಪಿಗಳ ಪೈಕಿ ಇಬ್ರಾಹಿಂ ಯಾನೆ ಅರ್ಷದ್ ಯಾನೆ ಅಚ್ಚು ಎಂಬಾತನ ವಿರುದ್ದ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ 7 ಪ್ರಕರಣ, ಕುಂಬಳೆ ಠಾಣೆಯಲ್ಲಿ 2 ಪ್ರಕರಣ ಹಾಗೂ ಖಲಂದರ್ ಶಾಫಿ ಎಂಬಾತನ ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ 2 ಅಕ್ರಮ ಗಾಂಜಾ ಪ್ರಕರಣ ಹಾಗು 1 ಕೊಲೆ ಯತ್ನ ಪ್ರಕರಣ ಮತ್ತು ಕಾವೂರು ಠಾಣೆಯಲ್ಲಿ 1 ಅಕ್ರಮ ಗಾಂಜಾ ಸಾಗಾಟ ಪ್ರಕರಣ ದಾಖಲಾಗಿರುತ್ತದೆ.

Spread the love
  • Related Posts

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಬೆಳ್ತಂಗಡಿ : ತಾಲೂಕು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಬಹಳಷ್ಟು ಖ್ಯಾತಿ ಪಡೆದಿರುವ “ಸಾಲ್ಯಾನ್ ಎಲ್ ಇಡಿ” ಇಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಪ್ರಮಾಣಪತ್ರವನ್ನು ತನ್ನದಾಗಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ ದಿ| ಕಿಶೋರ್‌ಕುಮಾರ್‌ ಹಾಡುಗಳ ಗಾಯನ ದಾಖಲೆ, 100 ಗಾಯಕರು, ನಿರಂತರ 40…

    Spread the love

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

    Spread the love

    You Missed

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    • By admin
    • December 13, 2025
    • 40 views
    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ  ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 18 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 36 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 59 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 38 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 45 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ