ಅಂತರ್ ರಾಜ್ಯ ಗಾಂಜಾ ಸಾಗಾಟಗಾರರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ರ ಬಲೆಗೆ!ಗಾಂಜಾ ಸಾಗಾಟದ ಬೃಹತ್ ಜಾಲ ಪತ್ತೆ.!

ಮಂಗಳೂರು: ಅಂತರ್ ರಾಜ್ಯ ಗಾಂಜಾ ಸಾಗಾಟಗಾರರ ಬೃಹತ್ ಜಾಲವನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಪತ್ತೆ ಹಚ್ಚಿ ಆರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಬರೋಬ್ಬರಿ 175ಕೆ.ಜಿ ಗಾಂಜ ಸಹಿತ ಮೂವರನ್ನು ಬಂಧಿಸುವಲ್ಲಿ ಪೋಲೀಸರು ಯಶಸ್ವಿಯಾಗಿದ್ದಾರೆ.

ದಿನಾಂಕ 11 08. 2020 ರಂದು ಬೆಳಿಗ್ಗೆ ಸಮಯ ಸುಮಾರು 06.30 ಗಂಟೆಗೆ ಪುತ್ತೂರು ನಗರ ಠಾಣಾ ಪೊಲೀಸ್‌ ನಿರೀಕ್ಷಕರು ತಮ್ಮ ಠಾಣಾ ಪೊಲೀಸ್ ಉಪನಿರೀಕ್ಷಕರು ಹಾಗೂ ಠಾಣಾ ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಪಾಟ್ರಕೋಡಿ ಎಂಬಲ್ಲಿ ಕೆಎ.19.ಎಎ.9294 ನೊಂದಣಿ ಸಂಖ್ಯೆಯ ಪಿಕ್‌ ಆಪ್‌ ವಾಹನ ಮತ್ತು ಕೆಎಲ್ 14-ಎಕ್ಸ್-9707 ನೊಂದಣಿ ಸಂಖ್ಯೆಯ ಕಾರೊಂದರಲ್ಲಿ ಅಕ್ರಮವಾಗಿ ಅಪಾರ ಪ್ರಮಾಣದ ಗಾಂಜಾ ಸಾಗಾಟ ಮಾಡುತ್ತಿದ್ದಾಗ ದಾಳಿ ನಡೆಸಿ ರೂ 17,50,000/- ಮೌಲ್ಯದ ಸುಮಾರು 175 ಕೆ.ಜಿ ಗಾಂಜಾ, ಸುಮಾರು ರೂ 3,00,000/- ಮೌಲ್ಯದ ಪಿಕ್ ಅಪ್ ವಾಹನ, ಸುಮಾರು ರೂ 4,00,000 /- ಮೌಲ್ಯದ ಕಾರು ಸೇರಿದಂತೆ ಒಟ್ಟು ರೂ 24,50,000/- ಸೊತ್ತುಗಳನ್ನು ವಶಕ್ಕೆ ಪಡೆದಿರುತ್ತಾರೆ.

ಸದರಿ ಸೊತ್ತುಗಳೊಂದಿಗೆ ಆರೋಪಿಗಳಾದ ಇಬ್ರಾಹಿಂ ಯಾನೆ ಅರ್ಷದ್ ಯಾನೆ ಅಚ್ಚು ಪ್ರಾಯ 26 ವರ್ಷ ವಾಸ: ಆಯಿಷಾ ಮಂಜಿಲ್ ದೂರ್ಮಕ್ಕಾಡ್ (Doormarkad) ಮನೆ ಮಿಜಾ ಮಂಜೇಶ್ವರ ಕಾಸರಗೋಡು ಕೇರಳ,

ಮೊಹಮ್ಮದ್ ಶಫಿಕ್ ಪ್ರಾಯ 31 ವರ್ಷ ತಂದೆ: ದಿ.ಮುಸ್ತಫಾ ವಾಸ: ಮಿಜಿರ್ ಪಳ್ಳ ಮನೆ (Majirpalla) ಹೊಸಂಗಡಿ ಮಂಜೇಶ್ವರ ಕಾಸರಗೋಡು ಕೇರಳ,

ಖಲಂದರ್ ಶಾಫಿ ಪ್ರಾಯ 26 ವರ್ಷ ತಂದೆ: ಅಬ್ದುಲ್ಲಾ ವಾಸ: ಮಡಕುಂಜ ಮನೆ ಕನ್ಯಾನ ಗ್ರಾಮ ಮತ್ತು ಅಂಚೆ ಬಂಟ್ವಾಳ ಎಂಬವರುಗಳನ್ನು ಬಂಧಿಸಲಾಗಿದೆ.

ಆರೋಪಿಗಳ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕಲಂ 8 (C) r/w 20(b) (ii) C ಎನ್.ಡಿ.ಪಿ.ಎಸ್ ಕಾಯಿದೆಯಂತೆ ಪ್ರಕರಣ ದಾಖಲಿಸಲಾಗಿರುತ್ತದೆ.

ಸದರಿ ಆರೋಪಿಗಳ ಪೈಕಿ ಇಬ್ರಾಹಿಂ ಯಾನೆ ಅರ್ಷದ್ ಯಾನೆ ಅಚ್ಚು ಎಂಬಾತನ ವಿರುದ್ದ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ 7 ಪ್ರಕರಣ, ಕುಂಬಳೆ ಠಾಣೆಯಲ್ಲಿ 2 ಪ್ರಕರಣ ಹಾಗೂ ಖಲಂದರ್ ಶಾಫಿ ಎಂಬಾತನ ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ 2 ಅಕ್ರಮ ಗಾಂಜಾ ಪ್ರಕರಣ ಹಾಗು 1 ಕೊಲೆ ಯತ್ನ ಪ್ರಕರಣ ಮತ್ತು ಕಾವೂರು ಠಾಣೆಯಲ್ಲಿ 1 ಅಕ್ರಮ ಗಾಂಜಾ ಸಾಗಾಟ ಪ್ರಕರಣ ದಾಖಲಾಗಿರುತ್ತದೆ.

Spread the love
  • Related Posts

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    Guruvayanakere: ಎಕ್ಸೆಲ್ ಪ್ರಿ-ಯೂನಿವರ್ಸಿಟಿ ಕಾಲೇಜು, ಗುರುವಾಯನಕೆರೆ ಯಲ್ಲಿ ತುರ್ತು ನೇಮಕಾತಿ ನಡೆಯುತ್ತಿದೆ. ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ವಿದ್ಯುತ್ ವ್ಯವಸ್ಥೆಗಳ ಪರಿಶೀಲನೆ ಹಾಗೂ ದುರಸ್ತಿ ಮಾಡುವಲ್ಲಿ ಪರಿಣತಿ ಹೊಂದಿರಬೇಕು. ಜೊತೆಗೆ ಪ್ಲಂಬಿಂಗ್ ಸಮಸ್ಯೆಗಳನ್ನು…

    Spread the love

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    ಗುರುವಾಯನಕೆರೆ: ಶ್ರಮಕ್ಕೆ ತಕ್ಕ ಫಲ ದೊರಕುತ್ತದೆ. ಹಾಗಾಗಿ ವಿದ್ಯಾರ್ಥಿಗಳು ನಿರಂತರ ಪ್ರಯತ್ನಶೀಲರಾಗಬೇಕು. ಖಂಡಿತ ತಮ್ಮ ತಮ್ಮ ಗುರಿ ತಲುಪಲು ಸಾಧ್ಯ ಎಂದು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್‌ ಕುಮಾರ್ ಜೈನ್ ಹೇಳಿದರು. ಅವರು ಗುರುವಾಯನಕೆರೆ ವಿದ್ಯಾ ಸಾಗರ…

    Spread the love

    You Missed

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 46 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 37 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ

    • By admin
    • March 10, 2026
    • 35 views
    ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ

    ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತ

    • By admin
    • March 10, 2026
    • 68 views
    ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತ

    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”

    • By admin
    • March 9, 2026
    • 41 views
    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”

    ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ – ಟಿ20 ವಿಶ್ವಕಪ್ ಕಿರೀಟ ಭಾರತಕ್ಕೆ

    • By admin
    • March 8, 2026
    • 38 views
    ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ – ಟಿ20 ವಿಶ್ವಕಪ್ ಕಿರೀಟ ಭಾರತಕ್ಕೆ