ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

ಬೆಳ್ತಂಗಡಿ-ಪುಂಜಾಲಕಟ್ಟೆ ರಸ್ತೆ ಕಾಮಗಾರಿ: ವಾಹನ ಸಂಚಾರ ಅಸ್ತವ್ಯಸ್ತ, ಗಂಟೆಗಟ್ಟಲೆ ಟ್ರಾಫಿಕ್ ಜಾಮ್

ಬೆಳ್ತಂಗಡಿ: ಚಾರ್ಮಾಡಿ ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಹಿನ್ನೆಲೆ ಸಂತೆಕಟ್ಟೆ ಬಳಿ ಏಕಮುಖ ಸಂಚಾರ ಮಾಡಿರುವುದರಿಂದ ವಾಹನ ಸವಾರರು ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಒದ್ದಾಡುವಂತಾಗಿದೆ.

ಕಾಮಗಾರಿ ನಡೆಯುವ ಸ್ಥಳಗಳಲ್ಲೇ ಪಾರ್ಕಿಂಗ್, ಇವರಿಗಿಲ್ಲ ಕಾನೂನಿನ ಭಯವೂ ಇಲ್ಲ, ಸಾಮಾನ್ಯ ಜ್ಞಾನವೂ ಇಲ್ಲ!!!!

ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ಪಾರ್ಕಿಂಗ್ ಮಾಡುವ ವಾಹನದವರಿಗೆ ತಟ್ಟುತ್ತಿಲ್ಲ ಯಾವುದೇ ಬಿಸಿ, ಇಂತಹವರಿಗೆಲ್ಲ ಕಾನೂನಿನ ಬಿಸಿ ಮುಟ್ಟಿಸಿದರೆ ಎಲ್ಲಾ ಸರಿಹೋಗುವ ಸಾಧ್ಯತೆ ಇದೆ ಇದಲ್ಲದೆ ಶಿಳ್ಳೆ ಹಾಕಿ ಬೊಬ್ಬೆ ಹೊಡೆದರೆ ನಾಳೆ ಬೆಳಗ್ಗೆ ಆದರೂ ಯಾವುದೇ ಬ್ಲಾಕ್ ಕ್ಲಿಯರ್ ಆಗಲಿಕ್ಕಿಲ್ಲ, ಪಾಪದವ ಹೆಲ್ಮೆಟ್ ಇಲ್ಲದೆ ಪ್ರಯಾಣಿಸಿರೆ ಅಡ್ಡ ಬರುವ ಲಾಟಿ ಇಂದು ಎಲ್ಲಿ ಮರೆಯಾಯಿತು.?? ವಾಹನ ದಟ್ಟಣೆ ಇರುವ ಈ ಸಂದರ್ಭದಲ್ಲಿ ಹಗಲು ವೇಳೆ ರಸ್ತೆ ಅಗೆದು ಗುಂಡಿ ತೋಡಿ ಈ ಬಿಸಿಲ ಝಳಕ್ಕೆ ಮೈಯೊಡ್ಡುವಂತೆ ಮಾಡುತ್ತಿರುವ ಅರೆಬರೆ ಕಾಮಗಾರಿಯೇ ಈ ಸಮಸ್ಯೆಗೆ ಮೂಲ‌ ಕಾರಣವಾಗಿದೆ. ಹೆಚ್ಚಿನ ಜನಸಂದಣಿ, ವಾಹನ ಸಂಖ್ಯೆ ‌ಇರುವಲ್ಲಿಯೇ ಈ ರೀತಿ ಕಾಮಗಾರಿ ಕುಂಟುತ್ತಿದ್ದರೆ ಮುಂದಿನ ಎರಡು ವರ್ಷ ಕಳೆದರೂ ಪೂರ್ಣವಾಗದು ಎಂದು ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಪಾರ್ಕಿಂಗ್ ಮಾಡಿದರೆ ಕೇಸು ದಾಖಲಿಸಿ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಅದಲ್ಲದೇ ಇವತ್ತು ಎಲ್ಲೆಡೆ ಮದುವೆ, ಗೃಹಪ್ರವೇಶ ಸೇರಿದಂತೆ ಇನ್ನಿತರ ಭಾರೀ ಕಾರ್ಯಕ್ರಮಗಳು ಇದ್ದುದರಿಂದ ವಿಪರೀತ ವಾಹನ ದಟ್ಟನೆಯೂ ಕಂಡುಬಂದಿದ್ದು ಗುರುವಾಯನಕೆರೆ ಸೇರಿದಂತೆ ಇತರೆಡೆಯಲ್ಲಿಯೂ ಟ್ರಾಫಿಕ ಜಾಮ್ ಉಂಟಾಗಿದೆ.

ಈ ನಡುವೆ ಹೆದ್ದಾರಿ ಕಾಮಗಾರಿ ನಡೆಯುತ್ತಿರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ. ವಿಪರೀತ ಬಿಸಿಲಿನಿಂದಾಗಿ ವಾಹನದಲ್ಲಿದ್ದವರು ತತ್ತರಿಸುವ ಸ್ಥಿತಿ ನಿರ್ಮಾಣವಾಗಿದೆ.

ಇವತ್ತು ವಿಪರೀತ ಕಾರ್ಯಕ್ರಮಗಳ ಒತ್ತಡದಲ್ಲಿ ಇರುವಾಗ ವಾಹನ ಸಂಚಾರಕ್ಕೆ ಸಮರ್ಪಕ ವ್ಯವಸ್ಥೆಯನ್ನು ಕಾಮಗಾರಿ ನಡೆಸುವ ಗುತ್ತಿಗೆದಾರರು ಮಾಡದೇ ಈ ಬಿಸಿಲಿನಲ್ಲಿ ಗಂಟೆಗಟ್ಟಲೆ ವಾಹನ ಸಂಚಾರಕ್ಕೆ ತಡೆ ಮಾಡಿರುವುದರಿಂದ ಹಲವಾರೂ ಕಾರ್ಯಕ್ರಮಗಳಿಗೆ ತೆರಳುವವರಿಗೆ ತುಂಬಾ ತೊಂದರೆಯಾಗಿದೆ.

ಅದಲ್ಲದೇ ಕಾಮಗಾರಿ ನಡೆಯುತ್ತಿರುವ ರಸ್ತೆ ಬದಿಯಲ್ಲಿ ವಾಹನ ಪಾರ್ಕಿಂಗ್ ಮಾಡಿರುವುದರಿಂದಲೂ ಒಂದಷ್ಟು ಸಂಚಾರಕ್ಕೆ ಇಕ್ಕಟ್ಟಾದ ಸ್ಥಿತಿ ನಿರ್ಮಾಣವಾಗಿದ್ದು, ಟ್ರಾಫಿಕ್ ಪೊಲೀಸರು ಈ ಬಗ್ಗೆ ಕ್ರಮ ಕೈಗೊಳ್ಳುವಂತೆಯೂ ಸಾರ್ವಜನಿಕರು ಆಗ್ರಹಿಸಿದ್ದಾರೆ.

Spread the love
  • Related Posts

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    ಹೊಸದಿಲ್ಲಿ: ಮರು ಮತ ಎಣಿಕೆ ಬಳಿಕ ತಮ್ಮ ಶಾಸಕ ಸ್ಥಾನ ರದ್ದಾಗಿರುವುದನ್ನು ಪ್ರಶ್ನಿಸಿ ಶೃಂಗೇರಿಯ ಕಾಂಗ್ರೆಸ್‌ ಅಭ್ಯರ್ಥಿ ಟಿ.ಡಿ.ರಾಜೇಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದೆದುರು ಈ ವಿಷಯವನ್ನು ಹಿರಿಯ ವಕೀಲ ದೇವದಾಸ್ ಕಾಮತ್ ಪ್ರಸ್ತಾಪಿಸಿದರು. “ಇದು…

    Spread the love

    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    ಉಜಿರೆ: ಉಜಿರೆ-ಚಾರ್ಮಾಡಿ ರಸ್ತೆಯ ಅನುಗ್ರಹ ಸಮೀಪ ಸಂಭವಿಸಿದ ರಸ್ತೆ ಅಪಘಾತ ಇದೀಗ ಸಾರ್ವಜನಿಕರ ಗಮನವನ್ನು ಮತ್ತೊಂದು ಗಂಭೀರ ವಿಷಯದತ್ತ ಸೆಳೆದಿದೆ. ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದ ಬುಲೋರೋ ಕಾರಿನ ಮೇಲೆ “Government of India” ಎಂಬ ನಾಮಫಲಕ ಅಳವಡಿಸಲಾಗಿದ್ದು, ಈ ಬಗ್ಗೆ…

    Spread the love

    You Missed

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    • By admin
    • May 9, 2026
    • 21 views
    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    • By admin
    • May 9, 2026
    • 100 views
    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    • By admin
    • May 9, 2026
    • 41 views
    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    • By admin
    • May 8, 2026
    • 125 views
    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    • By admin
    • May 7, 2026
    • 122 views
    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    • By admin
    • May 7, 2026
    • 51 views
    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!