“ವೀರೇಂದ್ರ ಹೆಗ್ಗಡೆಯವರ ವಿರುದ್ಧ ಪೋಸ್ಟ್‌: ಗಿರೀಶ್‌ ಮಟ್ಟೆಣ್ಣನವರ್‌ಗೆ ಹೈಕೋರ್ಟ್‌ ತರಾಟೆ; ಪ್ರಮಾಣಪತ್ರ ಸಲ್ಲಿಸಲು ಸೂಚನೆ”

ಬೆಂಗಳೂರು, ಜೂನ್ 18: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ ಪ್ರಕಟಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಅರ್ಜಿದಾರ ಗಿರೀಶ್‌ ಮಟ್ಟೆಣ್ಣನವರ್‌ಗೆ ಕರ್ನಾಟಕ ಹೈಕೋರ್ಟ್‌ ತೀವ್ರ ತರಾಟೆ ತೆಗೆದುಕೊಂಡಿದೆ.

ಪ್ರಜಾಪ್ರಭುತ್ವದಲ್ಲಿ ಆರೋಗ್ಯಕರ ಟೀಕೆ ಮತ್ತು ಭಿನ್ನಾಭಿಪ್ರಾಯಗಳಿಗೆ ಅವಕಾಶವಿದ್ದರೂ, ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತಿಗಳ ವಿರುದ್ಧ ಕೆಸರೆರಚಾಟ ನಡೆಸುವುದು ಅಥವಾ ಸಾರ್ವಜನಿಕವಾಗಿ ತೇಜೋವಧೆ ಮಾಡುವುದು ಯಾವುದೇ ಕಾರಣಕ್ಕೂ ಸಮರ್ಥನೀಯವಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಧರ್ಮಸ್ಥಳದ ಧರ್ಮಾಧಿಕಾರಿ ವಿರುದ್ಧ ಇನ್‌ಸ್ಟಾಗ್ರಾಮ್‌ನಲ್ಲಿ ಅವಹೇಳನಕಾರಿ ಪೋಸ್ಟ್‌ ಹಾಕಿದ ಆರೋಪದ ಮೇರೆಗೆ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಗಿರೀಶ್‌ ಮಟ್ಟೆಣ್ಣನವರ್‌ ಸಲ್ಲಿಸಿದ್ದ ಅರ್ಜಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.

ವಿಚಾರಣೆ ವೇಳೆ ನ್ಯಾಯಪೀಠವು ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಬೇಜವಾಬ್ದಾರಿಯುತ ಪ್ರವೃತ್ತಿಗಳನ್ನು ತಕ್ಷಣವೇ ನಿಲ್ಲಿಸಬೇಕು ಎಂದು ತಾಕೀತು ಮಾಡಿದ್ದು, ಮುಂದಿನ ವಿಚಾರಣೆಯೊಳಗೆ ಇಂತಹ ಚಟುವಟಿಕೆಗಳನ್ನು ಕೈಬಿಡುವುದಾಗಿ ಪ್ರಮಾಣಪತ್ರ ಸಲ್ಲಿಸಲು ಸೂಚಿಸಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಜೂನ್ 22ಕ್ಕೆ ಮುಂದೂಡಲಾಗಿದೆ.

ಅರ್ಜಿದಾರರ ಪರ ವಕೀಲರು ಪ್ರಕರಣದಲ್ಲಿ ಸಾರ್ವಜನಿಕ ಶಾಂತಿ ಭಂಗ ಅಥವಾ ಗಲಭೆಗೆ ಕಾರಣವಾದ ಯಾವುದೇ ನಿರ್ದಿಷ್ಟ ಘಟನೆ ಉಲ್ಲೇಖಗೊಂಡಿಲ್ಲ ಎಂದು ವಾದಿಸಿದರೆ, ಸರ್ಕಾರದ ಪರ ವಿಶೇಷ ಸರ್ಕಾರಿ ಅಭಿಯೋಜಕರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗುವ ಇಂತಹ ಪೋಸ್ಟ್‌ಗಳು ಸಮಾಜದ ಮೇಲೆ ವ್ಯಾಪಕ ಪರಿಣಾಮ ಬೀರುತ್ತವೆ ಎಂದು ನ್ಯಾಯಾಲಯದ ಗಮನ ಸೆಳೆದರು.

ಈ ವೇಳೆ ನ್ಯಾಯಪೀಠ, “ನಿಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿ, ವಿಮರ್ಶೆ ಮಾಡಿ. ಆದರೆ ಯಾರ ಮೇಲಾದರೂ ಅವಹೇಳನಕಾರಿ ರೀತಿಯಲ್ಲಿ ಕೆಸರೆರಚಾಟ ನಡೆಸುವುದು ಸರಿಯಲ್ಲ. ಆರೋಗ್ಯಕರ ವಿಮರ್ಶೆ ಸ್ವಾಗತಾರ್ಹವಾದರೂ ನಿಂದನಾತ್ಮಕ ವರ್ತನೆಗೆ ಅವಕಾಶವಿಲ್ಲ” ಎಂದು ಕಟುವಾಗಿ ಹೇಳಿತು.

ಪ್ರಕರಣದ ಹಿನ್ನೆಲೆ

ಧರ್ಮಸ್ಥಳದ ನಿವಾಸಿ ಜಿ. ಸುಬ್ರಹ್ಮಣ್ಯ ಪ್ರಸಾದ್‌ ಅವರು ನೀಡಿದ ದೂರಿನ ಆಧಾರದ ಮೇಲೆ, ಗಿರೀಶ್‌ ಮಟ್ಟೆಣ್ಣನವರ್‌ ಸಾಮಾಜಿಕ ಜಾಲತಾಣದಲ್ಲಿ ಡಾ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಅವಹೇಳನಕಾರಿ ಹಾಗೂ ಮಾನಹಾನಿಕರ ವಿಷಯಗಳನ್ನು ಪ್ರಕಟಿಸಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿತ್ತು.

ಈ ದೂರಿನ ಆಧಾರದಲ್ಲಿ ಗಿರೀಶ್‌ ಮಟ್ಟೆಣ್ಣನವರ್‌ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಸೆಕ್ಷನ್‌ 353(2) ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

Spread the love
  • Related Posts

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಕೃಷಿ ಕಾರ್ಮಿಕರಾದ ಶ್ರೀ ಬಾಲಕೃಷ್ಣ ಗೌಡ ಅವರು ಆಗಸ್ಟ್ 1, 2026ರಂದು ರಾತ್ರಿ ಕಾಡಾನೆ ದಾಳಿಯಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಶಾಸಕ ಶ್ರೀ ಹರೀಶ್ ಪೂಂಜ ಅವರು ಇಂದು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ…

    Spread the love

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಶನಿವಾರ ಸಂಜೆ ಸಂಭವಿಸಿದೆ.ಮೃತರನ್ನು ಇಡ್ಯಾಲು ನಿವಾಸಿ ಬಾಲಕೃಷ್ಣ ಗೌಡ (55) ಎಂದು ಗುರುತಿಸಲಾಗಿದೆ. ಬಾಲಕೃಷ್ಣ ಗೌಡ ಅವರು ಎಂದಿನಂತೆ ಕೆಲಸಕ್ಕೆ ತೆರಳಿದ್ದು,…

    Spread the love

    You Missed

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    • By admin
    • August 2, 2026
    • 5 views
    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    • By admin
    • August 1, 2026
    • 4 views
    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 7 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 14 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    • By admin
    • July 30, 2026
    • 12 views
    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 13 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ