ಮೇಯಲು ಬಿಟ್ಟಿದ್ದ ಆಡುಗಳನ್ನ ಹೊತ್ತೊಯ್ದ ಖತರ್ನಾಕ್ ಖದೀಮರು! ಆರೋಪಿಗಳು ಉಪ್ಪಿನಂಗಡಿ ಪೊಲೀಸ್ ವಶಕ್ಕೆ!

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಇಳಂತಿಲ ಗ್ರಾಮದ ಮಣ್ಣ ಮಜಲು ಮಗ್ಗ ಎಂಬಲ್ಲಿ ಉಮ್ಮರ್ ಫಾರೂಕ್ ಎಂಬವರ ಮನೆಯಲ್ಲಿ ಸಾಕುತ್ತಿದ್ದ ಒಂದು ಗಂಡು ಮತ್ತು ಒಂದು ಹೆಣ್ಣು ಆಡುಗಳನ್ನು ಇಳಂತಿಲ ಗ್ರಾಮದ ಕಡವಿನ ಗುಡ್ಡೆ ಎಂಬಲ್ಲಿ ಮೇಯಲು ಬಿಟ್ಟ ಸಮಯ ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು , ಈ ಬಗ್ಗೆ ಎಲ್ಲಾ ಕಡೆ ಹುಡುಕಾಡಿ ಮತ್ತು ನೆರೆ ಕರೆಯಲ್ಲಿ ವಿಚಾರಿಸಿ ಪತ್ತೆಯಾಗದೇ ಇದ್ದುದರಿಂದ ಯಾರೋ ಕಳ್ಳರು ಈ ಎರಡು ಆಡುಗಳನ್ನು ಕಳವು ಮಾಡಿಕೊಂಡು ಹೋಗಿರುವ ಸಂಶಯ ಕಂಡು ಬಂದಿರುವುದರಿಂದ ಸದ್ರಿ ಆಡುಗಳನ್ನು ಪತ್ತೆ ಹಚ್ಚಿ ಕೊಡುವರೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಉಮ್ಮರ್ ಫಾರೂಕ್ ಎಂಬವರು ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿ ತನಿಖೆಗಿಳಿದ ಉಪ್ಪಿನಂಗಡಿ ಪೋಲೀಸ್ ಉಪನಿರೀಕ್ಷಕರಾದ ಈರಯ್ಯ ಡಿ ಎನ್, ಪೊಲೀಸ್ ಠಾಣೆ ಸಿಬ್ಬಂದಿಗಳಾದ ಎ.ಎಸ್.ಐ ಚೋಮ, ಕುಶಾಲಪ್ಪ,ಹಿತೋಶ್ ಕುಮಾರ್, ಇರ್ಷಾದ್ ಪಿ, ರೇವಣ್ಣ, ಯೋಗೀಶ್ , ಚಂದ್ರಶೇಖರ ಪಿ. ರವರ ತಂಡ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಕಳವಾದ ಎರಡೂ ಆಡುಗಳ ಅಂದಾಜು ಮೌಲ್ಯ ರೂ . 15,000 ಆಗಬಹುದೆಂದು ಅಂದಾಜಿಸಲಾಗಿದೆ.

ಉರುವಾಲು ಗ್ರಾಮದ ಉಪ್ಪಿನಂಗಡಿ-ಬೆಳ್ತಂಗಡಿ ರಸ್ತೆಯ ಕುಪ್ಪೆಟ್ಟಿ ಹೊಳೆ ಬಳಿ ಡಾಸ್ಟನ್ ಕಾರಿನಲ್ಲಿ (KA 19- MH -9941) ಕಳ್ಳತನ ಮಾಡಿದ 02 ಆಡುಗಳನ್ನು ಸಾಗಾಟ ಮಾಡುತ್ತಿದ್ದ ಮಹಮ್ಮದ್ ಸಿನಾನ್ , ರಿಯಾಝ, ನಿಝಮುದ್ದೀನ್, ಎಂಬವರುಗಳನ್ನು ಖಚಿತ ಮಾಹಿತಿ ಮೇರೆಗೆ ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿಯುತ್ತಿದೆ.

Spread the love
  • Related Posts

    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ಜಿಲ್ಲೆಯಾದ್ಯಂತ ಬಾರಿ ಮಳೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ನದಿತೀರಗಳಿಗೆ ತಗ್ಗು ಪ್ರದೇಶಗಳಿಗೆ ತೆರಳದಂತೆ ಸೂಚನೆ ನೀಡಿದೆ ಮುನ್ನೆಚ್ಚರಿಕೆ ಕ್ರಮವಾಗಿ ದ.ಕ ಜಿಲ್ಲೆಯ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿಸಲಾಗಿದೆ Spread the love

    Spread the love

    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    ಬೆಳ್ತಂಗಡಿ: ತಾಲೂಕಿನ ಮುಂಡಾಜೆ ಗ್ರಾಮದ ಸೋಮಂತಡ್ಕದಲ್ಲಿ ರಸ್ತೆ ಕಾಮಗಾರಿ ನಡೆದಿದ್ದು ಬಳಿಕ ಚರಂಡಿ ನಿರ್ಮಿಸಿದ್ದು, ಕೆಲವು ಕಡೆ ಮುಚ್ಚಲಾಗಿಲ್ಲ, ಇಂದು ಸಂಜೆ ತೆರೆದ ಚರಂಡಿಯ ಬಗ್ಗೆ ಅರಿವಿಲ್ಲದೆ ಅಂಗಡಿಯಿಂದ ಸಾಮಾಗ್ರಿ ಖರೀದಿಸಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯಗೊಂಡಿರುವ…

    Spread the love

    You Missed

    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • June 16, 2025
    • 136 views
    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ  ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    • By admin
    • June 15, 2025
    • 154 views
    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    • By admin
    • June 12, 2025
    • 97 views
    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ

    • By admin
    • June 12, 2025
    • 56 views
    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ

    ಬೆಳ್ತಂಗಡಿ, ಪುಂಜಾಲಕಟ್ಟೆ PSI ನಂದಕುಮಾರ್ ರವರಿಗೆ ಪೋಲೀಸ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ

    • By admin
    • June 11, 2025
    • 67 views
    ಬೆಳ್ತಂಗಡಿ, ಪುಂಜಾಲಕಟ್ಟೆ PSI ನಂದಕುಮಾರ್ ರವರಿಗೆ ಪೋಲೀಸ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ

    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ 9 ಕೋಟಿ ಅನುದಾನ ಮಂಜೂರು

    • By admin
    • June 11, 2025
    • 75 views
    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ 9 ಕೋಟಿ ಅನುದಾನ ಮಂಜೂರು