ಮಂಗಳೂರು: ಜಿಪಿಎಲ್ ಉತ್ಸವದಲ್ಲಿ ಹೆಲಿಕಾಪ್ಟರ್ ರೈಡ್

ಮಂಗಳೂರು: ನೇತ್ರಾವತಿ ನದಿ ತೀರದ ಸಹ್ಯಾದ್ರಿ ಕ್ರೀಡಾಂಗಣ ಕೊಡಿಯಾಲ್ ಸ್ಪೋರ್ಟ್ಸ್ ಅಸೋಸಿಯೇಶನ್ ಆಯೋಜಿಸುವ ಫುಜ್ಞಾನಾ ಜಿಪಿಎಲ್ ಉತ್ಸವಕ್ಕೆ-2022ಕ್ಕೆ ಸಿದ್ಧಗೊಂಡಿದ್ದು, ಈ ಬಾರಿಯ ಟೂರ್ನಿಯಲ್ಲಿ ಹೆಲಿ ಟೂರಿಸಂ’ ವಿಶೇಷ ಆಕರ್ಷಣೆಯಾಗಿದೆ.ಫೆ.25ರಿಂದ 27ರವರೆಗೆ ಈ ಟೂರ್ನಿ ನಡೆಯಲಿದ್ದು, ಕರ್ನಾಟಕ, ಮಹಾರಾಷ್ಟ್ರ, ಕೇರಳ, ತೆಲಂಗಾಣದ ಸೇರಿ ಕರಾವಳಿ ಕರ್ನಾಟಕವನ್ನು ಒಳಗೊಂಡ 16 ತಂಡಗಳು ಈ ಟೂರ್ನಿಯಲ್ಲಿ ಭಾಗವಹಿಸಲಿವೆ.

ಜಿಪಿಎಲ್ ಉತ್ಸವದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ ಒಂದು ಭಾಗವಾದರೆ, ಇಡೀ ಉತ್ಸವ ವೈವಿಧ್ಯತೆ ಮೂಲಕ ಗಮನ ಸೆಳೆಯಲಿದೆ.

ಹೆಲಿ ಟೂರಿಸಂ ವೈಶಿಷ್ಟ್ಯತೆ: ಶುಕ್ರವಾರದಿಂದ ಭಾನುವಾರದವರೆಗೆ ಹೆಲಿ ಟೂರಿಸಂ ಅವಕಾಶವನ್ನು ನೀಡಲಾಗಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿರುವ ಎಟಿಸಿ (ಏರ್‌ಟ್ರಾಫಿಕ್ ಕಂಟ್ರೋಲ್) ನಿಯಂತ್ರಣದಲ್ಲಿ ಈ ಹೆಲಿಕಾಪ್ಟರ್ ಪ್ರಯಾಣಿಸಲಿದ್ದು, ಒಬ್ಬರಿಗೆ 10ನಿಮಿಷಕ್ಕೆ 4 ಸಾವಿರ ರೂ. ದರ ವಿಧಿಸಲಾಗಿದೆ.ಏಕಕಾಲಕ್ಕೆ ಮಂದಿಗೆ ಸಂಚರಿಸಬಹುದಾಗಿದೆ.ಅಡ್ಯಾರ್ ಸಹ್ಯಾದ್ರಿ ಕ್ಯಾಂಪಸ್‌ನಿಂದ ಹೊರಟ ಈ ಹೆಲಿಕಾಪ್ಟರ್ ಉಳ್ಳಾಲ ಸೇತುವೆ, ಧಕ್ಕೆ, ಬೆಂಗರೆ, ಮಂಗಳೂರು ನಗರದಾದ್ಯಂತ ಸುತ್ತಾಡಿ ಮತ್ತೆ ಸಹ್ಯಾದ್ರಿ ಕ್ಯಾಂಪಸ್‌ನಲ್ಲೇ ಭೂಸ್ಪರ್ಶ ಆಗಲಿದೆ. ಸಾರ್ವಜನಿಕರ ಸ್ಪಂದನೆಯನ್ನು ಗಮನಿಸಿ ಸೋಮವಾರದವರೆಗೆ ಮುಂದುವರಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎನ್ನುತ್ತಾರೆ.


ಫುಜ್ಞಾನಾ ಜಿಪಿಎಲ್ ಟೂರ್ನಿಯ ಮುಖ್ಯಸ್ಥರಾದ ನರೇಶ್ ಶೆಣೈ. 120ಕ್ಕೂ ಅಧಿಕ ಮಂದಿ ಬುಕ್ಕಿಂಗ್: ಹೆಲಿ ಟೂರಿಸಂಗೆ ಈಗಾಗಲೇ 120ಮಂದಿ ಬುಕ್ಕಿಂಗ್ ಮಾಡಿದ್ದು, ಅವರಿಗೆ ಸಮಯ ನಿಗದಿಪಡಿಸುವ ಅವಧಿಯಲ್ಲಿ ಹೆಲಿಕಾಪ್ಟರ್ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಬೆಳಗ್ಗೆ 10ಗಂಟೆಯಿಂದ ಸಂಜೆ 6.00ಗಂಟೆಯವರೆಗೆ ಈ ಹೆಲಿಕಾಪ್ಟರ್ ನಗರ ಸಂಚಾರ ನಡೆಸಲಿದೆ.ಬೋಟಿಂಗ್, ಕಿಡ್ನ್: ಹೆಲಿ ಟೂರಿಸಂ ಮಾತ್ರವಲ್ಲದೆ ನೇತ್ರಾವತಿಯಲ್ಲಿ ಬೋಟಿಂಗ್ ವ್ಯವಸ್ಥೆ, ಮಕ್ಕಳಿಗೆ ಆಟವಾಡಲು ಕಿಡ್ರನ್ ನಿರ್ಮಿಸಲಾಗಿದೆ. ಗೂಡುದೀಪ ಸ್ಪರ್ಧೆ, ಕಸದಿಂದ ರಸ, ಆಭರಣಗಳ ತಯಾರಿ, ಮೆಹಂದಿ, ಪ್ಲೇ ಮಾಡೆಲಿಂಗ್, ಹೂ ಅಲಂಕಾರ, ಕೇಶ ವಿನ್ಯಾಸ, ಡ್ರಾಯಿಂಗ್, ಕೊಲಾಜ್, ಜಿಎಸ್‌ಬಿ ಟ್ಯಾಲೆಂಟ್, ಅಡುಗೆ, ಪೋಸ್ಟರ್ ತಯಾರಿಕೆ, ಫ್ಯಾನ್ಸಿ ಡ್ರೆಸ್, ಟಗ್ ಆಫ್ ವಾರ್, ರಂಗೋಲಿ, ಮ್ಯೂಸಿಕ್ ವರ್ಕ್ ಶಾಪ್, ಹೌಸಿ ಹೌಸಿ ಸಹಿತ ಇನ್ನು ಹಲವು ಬಗೆಯ ಸ್ಪರ್ಧೆ ಆಯೋಜಿಸಲಾಗಿದೆ. ಇಂದು ಉದ್ಘಾಟನೆ: ಫೆ.25ರಂದು ಬೆಳಗ್ಗೆ ಕ್ರಿಕೆಟ್ ಪಂದ್ಯಾಟಗಳಿಗೆ ಗಣ್ಯರು ಚಾಲನೆ ನೀಡಲಿದ್ದಾರೆ.ಜಿಪಿಎಲ್ ಉತ್ಸವದಲ್ಲಿ 25 ಸಾವಿರದಷ್ಟು ಜಿಎಸ್‌ಬಿ ಸಮುದಾಯದವರು ಭಾಗವಹಿಸುವ ನಿರೀಕ್ಷೆಯಿದೆ.

ಖಾದ್ಯಗಳನ್ನು ಉಣಬಡಿಸಲು ವಿಶಾಲವಾದ ಫುಡ್ ಕೋರ್ಟ್ ವ್ಯವಸ್ಥೆ ಮಾಡಲಾಗಿದ್ದು, 100ಕ್ಕೂ ಅಧಿಕ ಬಗೆಯ ತಿಂಡಿ-ತಿನಸುಗಳು, ಐಸ್ ಕ್ರೀಂಗಳು, ಹಣ್ಣುಹಂಪಲುಗಳ ಸಹಿತ ಮೊಕ್‌ಟೇಲ್ ರುಚಿ ಸವಿಯಬಹುದಾಗಿದೆ.
ಇನ್ನು ಕಲಾತ್ಮಕ ಮನಸ್ಸಿನ ಮಹಿಳೆಯರಿಗೆ ಮತ್ತು ಚಿಣ್ಣರಿಗಾಗಿ ಮತ್ತು ಪುರುಷರಿಗಾಗಿ ನಾನಾ ಸ್ಪರ್ಧೆಗಳು, ಮನರಂಜನಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಗೋವಾ ಮತ್ತು ಕೊಚ್ಚಿ ಸಮುದ್ರ ತೀರಗಳಲ್ಲಿ ಮಾತ್ರ ಕಂಡು ಬರುವ ಫೆಬೋರ್ಡ ಅನ್ನು ಈ ಬಾರಿ ಪರಿಚಯಿಸಲಾಗಿದೆ. ತಜ್ಞರಿಂದ ಸಂವಾದ, ಶಾಪಿಂಗ್ ಮೇಳಾ, ಜಲಕ್ರೀಡೆ, ವೆವಾಹಿಕ (ಜ್ಯೋತಿಷ್ಯ ಸಹಿತ) ಸಂಬಂಧ, ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯದ ಕಲೆ, ಸಂಸ್ಕೃತಿ ಪ್ರದರ್ಶನ ಕಾರ್ಯಕ್ರಮಗಳು ಜಿಎಸ್‌ಬಿ ಸಮುದಾಯದಲ್ಲಿ ಗೃಹ ಉತ್ಪನ್ನಗಳನ್ನು ತಯಾರಿಸಿ ಬದುಕು ಕಟ್ಟಿಕೊಂಡಿರುವ ಕಿರುವ್ಯಾಪಾರಿಗಳಿಗಾಗಿ ಪ್ರತ್ಯೇಕ ಸ್ಥಳ ನಿಗದಿಪಡಿಸಲಾಗಿದೆ.

Spread the love
  • Related Posts

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವ ಅಕ್ಟೋಬರ್ 24 ಶುಕ್ರವಾರದಂದು ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರೀಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ. ಭಗವಾನ್ ಚಂದ್ರನಾಥಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥಸ್ವಾಮಿ…

    Spread the love

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ದಿನಾಂಕ 24/10/2025ರಂದು ಬೆಳಿಗ್ಗೆ 9.30ರಿಂದ ಅಪರಾಹ್ನ 2ಗಂಟೆಯವರೆಗೆ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರವು ನಡೆಯಲಿದೆ. Spread the love

    Spread the love

    You Missed

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    • By admin
    • October 23, 2025
    • 4 views
    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    • By admin
    • October 23, 2025
    • 16 views
    ನಾಳೆ  ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    • By admin
    • October 23, 2025
    • 35 views
    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    • By admin
    • October 23, 2025
    • 206 views
    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 86 views
    17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 61 views
    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ