ಮಂಗಳೂರು: ಜಿಪಿಎಲ್ ಉತ್ಸವದಲ್ಲಿ ಹೆಲಿಕಾಪ್ಟರ್ ರೈಡ್

ಮಂಗಳೂರು: ನೇತ್ರಾವತಿ ನದಿ ತೀರದ ಸಹ್ಯಾದ್ರಿ ಕ್ರೀಡಾಂಗಣ ಕೊಡಿಯಾಲ್ ಸ್ಪೋರ್ಟ್ಸ್ ಅಸೋಸಿಯೇಶನ್ ಆಯೋಜಿಸುವ ಫುಜ್ಞಾನಾ ಜಿಪಿಎಲ್ ಉತ್ಸವಕ್ಕೆ-2022ಕ್ಕೆ ಸಿದ್ಧಗೊಂಡಿದ್ದು, ಈ ಬಾರಿಯ ಟೂರ್ನಿಯಲ್ಲಿ ಹೆಲಿ ಟೂರಿಸಂ’ ವಿಶೇಷ ಆಕರ್ಷಣೆಯಾಗಿದೆ.ಫೆ.25ರಿಂದ 27ರವರೆಗೆ ಈ ಟೂರ್ನಿ ನಡೆಯಲಿದ್ದು, ಕರ್ನಾಟಕ, ಮಹಾರಾಷ್ಟ್ರ, ಕೇರಳ, ತೆಲಂಗಾಣದ ಸೇರಿ ಕರಾವಳಿ ಕರ್ನಾಟಕವನ್ನು ಒಳಗೊಂಡ 16 ತಂಡಗಳು ಈ ಟೂರ್ನಿಯಲ್ಲಿ ಭಾಗವಹಿಸಲಿವೆ.

ಜಿಪಿಎಲ್ ಉತ್ಸವದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ ಒಂದು ಭಾಗವಾದರೆ, ಇಡೀ ಉತ್ಸವ ವೈವಿಧ್ಯತೆ ಮೂಲಕ ಗಮನ ಸೆಳೆಯಲಿದೆ.

ಹೆಲಿ ಟೂರಿಸಂ ವೈಶಿಷ್ಟ್ಯತೆ: ಶುಕ್ರವಾರದಿಂದ ಭಾನುವಾರದವರೆಗೆ ಹೆಲಿ ಟೂರಿಸಂ ಅವಕಾಶವನ್ನು ನೀಡಲಾಗಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿರುವ ಎಟಿಸಿ (ಏರ್‌ಟ್ರಾಫಿಕ್ ಕಂಟ್ರೋಲ್) ನಿಯಂತ್ರಣದಲ್ಲಿ ಈ ಹೆಲಿಕಾಪ್ಟರ್ ಪ್ರಯಾಣಿಸಲಿದ್ದು, ಒಬ್ಬರಿಗೆ 10ನಿಮಿಷಕ್ಕೆ 4 ಸಾವಿರ ರೂ. ದರ ವಿಧಿಸಲಾಗಿದೆ.ಏಕಕಾಲಕ್ಕೆ ಮಂದಿಗೆ ಸಂಚರಿಸಬಹುದಾಗಿದೆ.ಅಡ್ಯಾರ್ ಸಹ್ಯಾದ್ರಿ ಕ್ಯಾಂಪಸ್‌ನಿಂದ ಹೊರಟ ಈ ಹೆಲಿಕಾಪ್ಟರ್ ಉಳ್ಳಾಲ ಸೇತುವೆ, ಧಕ್ಕೆ, ಬೆಂಗರೆ, ಮಂಗಳೂರು ನಗರದಾದ್ಯಂತ ಸುತ್ತಾಡಿ ಮತ್ತೆ ಸಹ್ಯಾದ್ರಿ ಕ್ಯಾಂಪಸ್‌ನಲ್ಲೇ ಭೂಸ್ಪರ್ಶ ಆಗಲಿದೆ. ಸಾರ್ವಜನಿಕರ ಸ್ಪಂದನೆಯನ್ನು ಗಮನಿಸಿ ಸೋಮವಾರದವರೆಗೆ ಮುಂದುವರಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎನ್ನುತ್ತಾರೆ.


ಫುಜ್ಞಾನಾ ಜಿಪಿಎಲ್ ಟೂರ್ನಿಯ ಮುಖ್ಯಸ್ಥರಾದ ನರೇಶ್ ಶೆಣೈ. 120ಕ್ಕೂ ಅಧಿಕ ಮಂದಿ ಬುಕ್ಕಿಂಗ್: ಹೆಲಿ ಟೂರಿಸಂಗೆ ಈಗಾಗಲೇ 120ಮಂದಿ ಬುಕ್ಕಿಂಗ್ ಮಾಡಿದ್ದು, ಅವರಿಗೆ ಸಮಯ ನಿಗದಿಪಡಿಸುವ ಅವಧಿಯಲ್ಲಿ ಹೆಲಿಕಾಪ್ಟರ್ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಬೆಳಗ್ಗೆ 10ಗಂಟೆಯಿಂದ ಸಂಜೆ 6.00ಗಂಟೆಯವರೆಗೆ ಈ ಹೆಲಿಕಾಪ್ಟರ್ ನಗರ ಸಂಚಾರ ನಡೆಸಲಿದೆ.ಬೋಟಿಂಗ್, ಕಿಡ್ನ್: ಹೆಲಿ ಟೂರಿಸಂ ಮಾತ್ರವಲ್ಲದೆ ನೇತ್ರಾವತಿಯಲ್ಲಿ ಬೋಟಿಂಗ್ ವ್ಯವಸ್ಥೆ, ಮಕ್ಕಳಿಗೆ ಆಟವಾಡಲು ಕಿಡ್ರನ್ ನಿರ್ಮಿಸಲಾಗಿದೆ. ಗೂಡುದೀಪ ಸ್ಪರ್ಧೆ, ಕಸದಿಂದ ರಸ, ಆಭರಣಗಳ ತಯಾರಿ, ಮೆಹಂದಿ, ಪ್ಲೇ ಮಾಡೆಲಿಂಗ್, ಹೂ ಅಲಂಕಾರ, ಕೇಶ ವಿನ್ಯಾಸ, ಡ್ರಾಯಿಂಗ್, ಕೊಲಾಜ್, ಜಿಎಸ್‌ಬಿ ಟ್ಯಾಲೆಂಟ್, ಅಡುಗೆ, ಪೋಸ್ಟರ್ ತಯಾರಿಕೆ, ಫ್ಯಾನ್ಸಿ ಡ್ರೆಸ್, ಟಗ್ ಆಫ್ ವಾರ್, ರಂಗೋಲಿ, ಮ್ಯೂಸಿಕ್ ವರ್ಕ್ ಶಾಪ್, ಹೌಸಿ ಹೌಸಿ ಸಹಿತ ಇನ್ನು ಹಲವು ಬಗೆಯ ಸ್ಪರ್ಧೆ ಆಯೋಜಿಸಲಾಗಿದೆ. ಇಂದು ಉದ್ಘಾಟನೆ: ಫೆ.25ರಂದು ಬೆಳಗ್ಗೆ ಕ್ರಿಕೆಟ್ ಪಂದ್ಯಾಟಗಳಿಗೆ ಗಣ್ಯರು ಚಾಲನೆ ನೀಡಲಿದ್ದಾರೆ.ಜಿಪಿಎಲ್ ಉತ್ಸವದಲ್ಲಿ 25 ಸಾವಿರದಷ್ಟು ಜಿಎಸ್‌ಬಿ ಸಮುದಾಯದವರು ಭಾಗವಹಿಸುವ ನಿರೀಕ್ಷೆಯಿದೆ.

ಖಾದ್ಯಗಳನ್ನು ಉಣಬಡಿಸಲು ವಿಶಾಲವಾದ ಫುಡ್ ಕೋರ್ಟ್ ವ್ಯವಸ್ಥೆ ಮಾಡಲಾಗಿದ್ದು, 100ಕ್ಕೂ ಅಧಿಕ ಬಗೆಯ ತಿಂಡಿ-ತಿನಸುಗಳು, ಐಸ್ ಕ್ರೀಂಗಳು, ಹಣ್ಣುಹಂಪಲುಗಳ ಸಹಿತ ಮೊಕ್‌ಟೇಲ್ ರುಚಿ ಸವಿಯಬಹುದಾಗಿದೆ.
ಇನ್ನು ಕಲಾತ್ಮಕ ಮನಸ್ಸಿನ ಮಹಿಳೆಯರಿಗೆ ಮತ್ತು ಚಿಣ್ಣರಿಗಾಗಿ ಮತ್ತು ಪುರುಷರಿಗಾಗಿ ನಾನಾ ಸ್ಪರ್ಧೆಗಳು, ಮನರಂಜನಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಗೋವಾ ಮತ್ತು ಕೊಚ್ಚಿ ಸಮುದ್ರ ತೀರಗಳಲ್ಲಿ ಮಾತ್ರ ಕಂಡು ಬರುವ ಫೆಬೋರ್ಡ ಅನ್ನು ಈ ಬಾರಿ ಪರಿಚಯಿಸಲಾಗಿದೆ. ತಜ್ಞರಿಂದ ಸಂವಾದ, ಶಾಪಿಂಗ್ ಮೇಳಾ, ಜಲಕ್ರೀಡೆ, ವೆವಾಹಿಕ (ಜ್ಯೋತಿಷ್ಯ ಸಹಿತ) ಸಂಬಂಧ, ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯದ ಕಲೆ, ಸಂಸ್ಕೃತಿ ಪ್ರದರ್ಶನ ಕಾರ್ಯಕ್ರಮಗಳು ಜಿಎಸ್‌ಬಿ ಸಮುದಾಯದಲ್ಲಿ ಗೃಹ ಉತ್ಪನ್ನಗಳನ್ನು ತಯಾರಿಸಿ ಬದುಕು ಕಟ್ಟಿಕೊಂಡಿರುವ ಕಿರುವ್ಯಾಪಾರಿಗಳಿಗಾಗಿ ಪ್ರತ್ಯೇಕ ಸ್ಥಳ ನಿಗದಿಪಡಿಸಲಾಗಿದೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 60 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ