ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

ಸಕಲೇಶಪುರ: ಅಕ್ರಮ ಭೂ ಮಂಜೂರಾತಿ(Illegal land allocation) ಬೃಹತ್ ಹಗರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಬಂಧನದ(Arrest) ಭೀತಿ ಎದುರಿಸುತ್ತಿರುವ ಕಂದಾಯ ಮತ್ತು ಭೂಮಾಪನಾ (Survey) ಇಲಾಖೆಯ ನೂರಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ಸಿಬ್ಬಂದಿ ಸಾಮೂಹಿಕ ರಜೆ ಮೇಲೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಇನ್ನು ಕೆಲವರು ಮೊಬೈಲ್‌ ಫೋನ್‌ಗಳನ್ನು ಸ್ವಿಚ್ಡ್ ಆಫ್ ಮಾಡಿಕೊಂಡು ಕಚೇರಿಗೆ ಗೈರಾಗುವ ಮೂಲಕ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.

ಹೇಮಾವತಿ, ಯಗಚಿ ಹಾಗೂ ವಾಟೆಹೊಳೆ ಜಲಾಶಯಗಳ ಯೋಜನೆಗಳಿಗಾಗಿ ಜಮೀನು ಕಳೆದುಕೊಂಡ ಸಂತ್ರಸ್ತರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಸಾವಿರಾರು ಎಕರೆ ಬೆಲೆಬಾಳುವ ಸರ್ಕಾರಿ ಭೂಮಿಯನ್ನು ಖಾಸಗಿ ವ್ಯಕ್ತಿಗಳಿಗೆ ಅಕ್ರಮವಾಗಿ ಮಂಜೂರು ಮಾಡಿದ್ದ ಪ್ರಕರಣದಲ್ಲಿ ಈ ಎಲ್ಲರಿಗೂ ಈಗ ಬಂಧನದ ಭೀತಿ ಎದುರಾಗಿದೆ.

ಪ್ರಮುಖರ ಬಂಧನ ಬೆನ್ನಲ್ಲೇ ಶುರುವಾಯ್ತು ನಡುಕ:


ಬೇಲೂರಿನ ಬಗರ್‌ಹುಕುಂ ಅಕ್ರಮ ಮಂಜೂರಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಸೇರಿದಂತೆ 16 ಜನರನ್ನು ಪೊಲೀಸರು ಬಂಧಿಸಿದ್ದರು. ಅಲ್ಲದೆ, ಪಿರಿಯಾಪಟ್ಟಣ ಭೂಮಾಪನಾ ಇಲಾಖೆಯ ಎಂಟು ಮಂದಿಯನ್ನು ಕೂಡ ಬಂಧಿಸಲಾಗಿತ್ತು. ಈ ಸಾಲು ಸಾಲು ಬಂಧನಗಳ ಬೆಳವಣಿಗೆಯಿಂದ ತೀವ್ರ ಹೆದರಿರುವ ಹಾಸನ ಜಿಲ್ಲೆಯ ಕಂದಾಯ ಹಾಗೂ ಭೂಮಾಪನಾ ಇಲಾಖೆಯ ಅಧಿಕಾರಿಗಳು ಮತ್ತು ನೌಕರರು ಫೋನ್ ಬಂದ್ ಮಾಡಿ ಕಚೇರಿಯಿಂದ ಕಾಲ್ತೆಗೆಯುತ್ತಿದ್ದಾರೆ.

2015 ರಿಂದ 2019 ರ ಅವಧಿಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೆ ತೀವ್ರಗೊಂಡ ತನಿಖೆ:

2015 ರಿಂದ 2019 ರ ಅವಧಿಯಲ್ಲಿ ಸಕಲೇಶಪುರ ತಾಲೂಕಿನ ಕಂದಾಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಈ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಈಗಾಗಲೇ ರಾಜ್ಯ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆಯಾಗಿದೆ. ಈ ವರದಿಯ ಆಧಾರದ ಮೇಲೆ ಪೊಲೀಸರು ಯಾವುದೇ ಕ್ಷಣದಲ್ಲಿಯೂ ಕಾರ್ಯಾಚರಣೆ ನಡೆಸಿ ಬಂಧಿಸಬಹುದು ಎಂಬ ಆತಂಕ ನೌಕರರನ್ನು ಕಾಡುತ್ತಿದೆ.

150ಕ್ಕೂ ಹೆಚ್ಚು ಅಧಿಕಾರಿ, ಸಿಬ್ಬಂದಿ ವಿರುದ್ಧ ಸಾಕ್ಷಿ!


ಹಾಸನ ಜಿಲ್ಲೆಯ ಸಕಲೇಶಪುರ, ಆಲೂರು, ಬೇಲೂರು, ಹೊಳೆನರಸೀಪುರ ಹಾಗೂ ಅರಕಲಗೂಡು ತಾಲೂಕುಗಳಲ್ಲಿ ಹಿಂದೆ ಕೆಲಸ ಮಾಡಿದ್ದ ಮತ್ತು ಪ್ರಸ್ತುತ ಸೇವೆ ಸಲ್ಲಿಸುತ್ತಿರುವ ತಹಶೀಲ್ದಾರರು, ಉಪ ತಹಶೀಲ್ದಾರರು ಸೇರಿದಂತೆ ವಿವಿಧ ಹಂತಗಳ 150ಕ್ಕೂ ಹೆಚ್ಚು ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಈ ಭೂ ಹಗರಣದಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಭಾಗಿಯಾಗಿದ್ದಾರೆ ಎಂಬುದು ತನಿಖಾ ವರದಿಯಲ್ಲಿ ದಾಖಲಾಗಿದೆ
ಎಂದು ತಿಳಿದು ಬಂದಿದೆ.

ಪೊಲೀಸರ ಮುಂದಿನ ಕ್ರಮದ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದ್ದು, ಈ ಬಹುಕೋಟಿ ಮೌಲ್ಯದ ಭೂ ಹಗರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಬಂಧನಗಳು ನಡೆಯುವ ಸಾಧ್ಯತೆಯಿದೆ.

Spread the love
  • Related Posts

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    ಸಕಲೇಶಪುರ, ಜು.24: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿ.ಸಿ. ಟ್ರಸ್ಟ್) (ರಿ.) ವತಿಯಿಂದ ಹೆಗ್ಗದ್ದೆ ವಲಯದ ಹಾನುಬಾಳ್ ಕಾರ್ಯಕ್ಷೇತ್ರದ ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಜ್ಞಾನವಿಕಾಸ ಕಾರ್ಯಕ್ರಮದಡಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಡಾ. ನಿಶ್ಚಯ್…

    Spread the love

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ಮಂಗಳೂರು: ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 25) ರಜೆ ಘೋಷಿಸಿ…

    Spread the love

    You Missed

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 5 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    • By admin
    • July 24, 2026
    • 5 views
    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 24, 2026
    • 3 views
    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 23, 2026
    • 5 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    • By admin
    • July 22, 2026
    • 7 views
    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 10 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ