ಬೆಂಗಳೂರು: ನೀಟ್ ಪರೀಕ್ಷೆಯಲ್ಲಿ ನಿರಂತರ ಅತ್ಯುತ್ತಮ ಸಾಧನೆ ದಾಖಲಿಸಿ, ಕರ್ನಾಟಕದಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಮುನ್ನಡೆಸಿದ ಖ್ಯಾತಿ ಪಡೆದಿರುವ ಎಕ್ಸೆಲ್ ಪಿಯು ಕಾಲೇಜು, ಗುರುವಾಯನಕೆರೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗ್ಯಾರಂಟಿ ನ್ಯೂಸ್ ಕನ್ನಡ ವತಿಯಿಂದ ಆಯೋಜಿಸಲಾದ ‘ಆರೋಗ್ಯ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗೌರವ ಸನ್ಮಾನ ಮಾಡಲಾಯಿತು.
ಈ ಸಮಾರಂಭದಲ್ಲಿ ಆರೋಗ್ಯ ಸಚಿವ ಯು.ಟಿ ಖಾದರ್ ಹಾಗೂಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಅವರ ಅತ್ಯುತ್ತಮ ಸೇವೆ ಹಾಗೂ ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ತಯಾರಿಸುವಲ್ಲಿ ಸಲ್ಲಿಸಿರುವ ವಿಶೇಷ ಕೊಡುಗೆಯನ್ನು ಗುರುತಿಸಿ ಈ ಗೌರವ ನೀಡಲಾಯಿತು.
ಸುಮಂತ್ ಕುಮಾರ್ ಜೈನ್ ಅವರ ನೇತೃತ್ವದಲ್ಲಿ ಎಕ್ಸೆಲ್ ಪಿಯು ಕಾಲೇಜು ಪ್ರತಿವರ್ಷ ನೀಟ್ ಪರೀಕ್ಷೆಯಲ್ಲಿ ಗಮನಾರ್ಹ ಫಲಿತಾಂಶಗಳನ್ನು ದಾಖಲಿಸುತ್ತಿದ್ದು, ವೈದ್ಯರಾಗುವ ಕನಸು ಹೊಂದಿರುವ ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಸಮರ್ಪಕ ಮಾರ್ಗದರ್ಶನ ನೀಡುವ ಮೂಲಕ ರಾಜ್ಯದ ಪ್ರಮುಖ ಶಿಕ್ಷಣ ಸಂಸ್ಥೆಯಾಗಿ ಗುರುತಿಸಿಕೊಂಡಿದೆ.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಗಣ್ಯರು ಸುಮಂತ್ ಕುಮಾರ್ ಜೈನ್ ಅವರನ್ನು ಅಭಿನಂದಿಸಿ, ಶಿಕ್ಷಣ ಕ್ಷೇತ್ರದಲ್ಲಿ ಅವರು ಇನ್ನಷ್ಟು ಸಾಧನೆ ಮಾಡಲೆಂದು ಶುಭ ಹಾರೈಸಿದರು.






